ಸರ್ಕಾರದ ಮಾರ್ಗಸೂಚಿಯನ್ನು ಅಧಿಕಾರಿಗಳು ಸರಿಯಾಗಿ ಅರ್ಥ ಮಾಡಿಕೊಂಡಿಲ್ಲ. ಕಟ್ಟಡ ಕಾಮಗಾರಿ, ಕೃಷಿ ಚಟುವಟಿಕೆಗಳಿಗೆ ನಿರ್ಬಂಧವಿಲ್ಲ ಎಂದು ಸರ್ಕಾರ ಹೇಳಿದೆ. ಕಟ್ಟಡ ನಿರ್ಮಾಣ ಕಾಮಗಾರಿಗೆ ಬಳಸುವ ಕಬ್ಬಿಣ, ಸಿಮೆಂಟ್ ಅಗತ್ಯವಾಗಿದೆ. ಹಾಗಾಗಿ ಸರ್ಕಾರ ತಕ್ಷಣ ಸ್ಪಷ್ಟವಾಗಿ ಮಾರ್ಗಸೂಚಿ ಬಗ್ಗೆ ತಿಳಿಸಬೇಕು. ಕಟ್ಟಡ ಸಾಮಗ್ರಿಗಳ ಮಾರಾಟಕ್ಕೆ ಅವಕಾಶ ಮಾಡಿಕೊಡಬೇಕು ಎಂದು ಆಗ್ರಹಿಸಿದರು.