ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಂಚಾಯಿತಿಗಳಿಗೆ ಕೆರೆಕುಂಟೆ ಅಭಿವೃದ್ಧಿ ಜವಾಬ್ದಾರಿ: ಕೆ.ಎಸ್.ಈಶ್ವರಪ್ಪ

ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ
Last Updated 6 ಜುಲೈ 2021, 3:20 IST
ಅಕ್ಷರ ಗಾತ್ರ

ಭದ್ರಾವತಿ: ಪಂಚಾಯಿತಿ ವ್ಯಾಪ್ತಿಯ ಕೆರೆಕುಂಟೆ ಅಭಿವೃದ್ಧಿ ಮಾಡುವ ಜವಾಬ್ದಾರಿಯನ್ನು ಗ್ರಾಮ ಪಂಚಾಯಿತಿಗಳಿಗೆ ವಹಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದರು.

ಸೋಮವಾರ ಅಂತರಗಂಗೆ ಗ್ರಾಮದ ಘನತ್ಯಾಜ್ಯ ವಿಲೇವಾರಿ ಘಟಕ ಉದ್ಘಾಟನೆ ನೆರವೇರಿಸಿ ಮಾತನಾಡಿದ ಅವರು, ‘ಈ ವ್ಯವಸ್ಥೆಯಿಂದ ಜಲಸಂರಕ್ಷಣೆ ಕಾರ್ಯದಲ್ಲಿ ಪಂಚಾಯಿತಿಗಳು ಕಾಮಗಾರಿ ಕೈಗೊಳ್ಳಲು ಸಾಧ್ಯವಾಗುತ್ತದೆ’ ಎಂದರು.

ಸರ್ಕಾರದ ಹಲವು ಯೋಜನೆಗಳ ಅನುಷ್ಠಾನ ಪಂಚಾಯಿತಿ ವ್ಯಾಪ್ತಿಯಲ್ಲಿದ್ದು, ಅವುಗಳನ್ನು ಸಮರ್ಪಕವಾಗಿ ನಿರ್ವಹಿಸಬೇಕು. ಈ ನಿಟ್ಟಿನಲ್ಲಿ ಚುನಾಯಿತ ಪ್ರತಿನಿಧಿಗಳು ಹಾಗೂ ಅಧಿಕಾರಿಗಳಿಗೆ ತರಬೇತಿ ನೀಡಲಾಗುವುದು.ಉದ್ಯೋಗ ಖಾತ್ರಿ ಯೋಜನೆಯಡಿ 15 ದಿನದೊಳಗೆ ಕೂಲಿ ಪಾವತಿ ಪ್ರಕ್ರಿಯೆ ನಡೆದಿದೆ. ಕೆಲಸ ಕೇಳಿದ ತಕ್ಷಣ ಅದಕ್ಕೆ ವ್ಯವಸ್ಥೆ ಮಾಡಿಕೊಳ್ಳುವಂತೆ ಪಂಚಾಯಿತಿಗಳಿಗೆ ಸೂಚನೆ ನೀಡಲಾಗಿದೆ. ಅವರು ನಿಶ್ಚಿತ ಗುರಿ ಸಾಧನೆ ಮಾಡಿದ್ದರಿಂದ ಹೆಚ್ಚುವರಿಯಾಗಿ 2 ಕೋಟಿ ಮಾನವ ದಿನಗಳನ್ನು ಪಡೆಯಲು ಸಾಧ್ಯವಾಗಿದೆ ಎಂದು ಹೇಳಿದರು.

ಘನತ್ಯಾಜ್ಯ ನಿರ್ವಹಣೆ ಕೆಲಸವನ್ನು ಪಂಚಾಯಿತಿ ಮಟ್ಟದಲ್ಲಿ ಮತ್ತಷ್ಟು ಪರಿಣಾಮಕಾರಿಯಾಗಿ ಮಾಡಲು ಮನೆಗಳ ಕಸ ಸಂಗ್ರಹಣೆಗೆ ವಾಹನಗಳನ್ನು ಬಳಸಲಾಗುವುದು. ಇದಕ್ಕೆ ನಾಗರಿಕರು ಸಹಕರಿಸಬೇಕು ಎಂದು ಮನವಿ ಮಾಡಿದರು.

ಅಧ್ಯಕ್ಷತೆ ವಹಿಸಿದ್ದ ಶಾಸಕ ಬಿ.ಕೆ. ಸಂಗಮೇಶ್ವರ, ‘ಗ್ರಾಮೀಣ ಭಾಗದಲ್ಲಿ ಸ್ವಚ್ಛತೆ ಕುರಿತು ಅರಿವು ಮೂಡಿಸುವ ಕೆಲಸ ನಡೆಯಬೇಕಿದೆ. ತ್ಯಾಜ್ಯ ನಿರ್ವಹಣೆ ಘಟಕಗಳ ಸಮರ್ಪಕ ನಿರ್ವಹಣೆಗೆ ಇನ್ನಷ್ಟು ಅನುದಾನದ ಅಗತ್ಯವಿದೆ’ ಎಂದು ಹೇಳಿದರು.

ವಿಧಾನಪರಿಷತ್ ಸದಸ್ಯ ಪ್ರಸನ್ನಕುಮಾರ್, ಜಿಲ್ಲಾ ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ವೈಶಾಲಿ,
ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ರಮೇಶ್, ಗ್ರಾಮ ಪಂಚಾಯಿತಿ ಅಧ್ಯಕ್ಷೆ ಸವಿತ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT