ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆನಂದಪುರ: ವಿಜೃಂಭಣೆಯ ಲಕ್ಷ್ಮೀ ರಂಗನಾಥಸ್ವಾಮಿ ಬ್ರಹ್ಮರಥೋತ್ಸವ

Last Updated 20 ಫೆಬ್ರುವರಿ 2021, 4:50 IST
ಅಕ್ಷರ ಗಾತ್ರ

ಆನಂದಪುರ: ಮಲೆನಾಡ ತಿರುಪತಿ ಎಂದೇ ಇತಿಹಾಸ ಪ್ರಸಿದ್ಧವಾಗಿರುವ ಇಲ್ಲಿನ ಲಕ್ಷ್ಮೀ ರಂಗನಾಥಸ್ವಾಮಿಯ ಬ್ರಹ್ಮರಥೋತ್ಸವ ಶುಕ್ರವಾರ ವೈಭವದಿಂದ ನಡೆಯಿತು.

ದೇವರ ರಥೋತ್ಸವದ ಅಂಗವಾಗಿ ತೇರು ಸಂಚರಿಸುವ ಆನಂದಪುರದ ಪ್ರತಿಯೊಂದು ಬೀದಿಯಲ್ಲಿ ತಳಿರು ತೋರಣ ಹಾಗೂ ರಂಗೋಲಿಗಳಿಂದ ಸಿಂಗರಿಸಲಾಗಿತ್ತು. ಪ್ರತಿಯೊಬ್ಬ ಭಕ್ತರು ಮನೆಯ ಮುಂದೆ ಬಂದ ದೇವರಿಗೆ ಹರಿಕೆ ಸಲ್ಲಿಸಿ, ಹಣ್ಣು ಕಾಯಿ ಹಾಗೂ ಕಾಣಿಕೆ ಸಮರ್ಪಿಸಿದರು.

ವಾದ್ಯ, ಡೊಳ್ಳುಕುಣಿತ, ಚಂಡೆ ರಥೋತ್ಸವಕ್ಕೆ ಮೆರುಗು ತಂದಿತು. ಆನಂದಪುರ ಹಾಗೂ ಸುತ್ತಲಿನ ಹತ್ತಾರು ಹಳ್ಳಿಗಳಿಂದ ಬಂದ ಸಾವಿರಾರು ಜನರು ದೇವರ ದರ್ಶನ ಪಡೆದರು. ಪೂಜಾ ವಿಧಿವಿಧಾನ ಹಾಗೂ ಪ್ರಸಾದ ವಿತರಣೆಯ ನಂತರ ಸಾಮೂಹಿಕ ಅನ್ನಸಂತರ್ಪಣೆ ನಡೆಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT