ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಭೂ ಸುಧಾರಣಾ ತಿದ್ದುಪಡಿ ಕಾಯ್ದೆಯಿಂದ ರೈತರಿಗೆ ಅನುಕೂಲ: ಟಿ.ಡಿ. ಮೇಘರಾಜ್

Last Updated 24 ಸೆಪ್ಟೆಂಬರ್ 2020, 3:30 IST
ಅಕ್ಷರ ಗಾತ್ರ

ಶಿವಮೊಗ್ಗ: ಭೂ ಸುಧಾರಣಾ ಕಾಯ್ದೆ, ಎಪಿಎಂಸಿ ಕಾಯ್ದೆ, ವಿದ್ಯುತ್ ತಿದ್ದುಪಡಿ ಕಾಯ್ದೆಗೆಲೋಕಸಭೆ ಮತ್ತು ರಾಜ್ಯಸಭೆಯಲ್ಲಿ ಅನುಮೋದನೆ ದೊರೆತಿದ್ದು, ರೈತರಿಗೆ ಅನುಕೂಲವಾಗಲಿದೆ ಎಂದುಬಿಜೆಪಿ ಜಿಲ್ಲಾಧ್ಯಕ್ಷ ಟಿ.ಡಿ. ಮೇಘರಾಜ್ ತಿಳಿಸಿದರು.

ರೈತರ ಉತ್ಪನ್ನ, ವ್ಯಾಪಾರ ಮತ್ತು ವಾಣಿಜ್ಯ ಕಾಯ್ದೆ, ರೈತರ ಬೆಳೆ ಭರವಸೆ ಮತ್ತು ಸೇವಾ ಒಪ್ಪಂದ ಮಸೂದೆ ಅನುಮೋದನೆಯಿಂದ ರೈತರಿಗೆ ಹಾಗೂ ವ್ಯಾಪಾರಿಗಳಿಗೆ ತಮಗಿಷ್ಟ ಬಂದ ಕಡೆ ಕೃಷಿ ಉತ್ಪನ್ನ ಮಾರಾಟ ಹಾಗೂ ಖರೀದಿ ಮಾಡಲು ಸರ್ಕಾರ ಸ್ವಾತಂತ್ರ್ಯ ನೀಡಲಾಗಿದೆ ಎಂದು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಅವರು ತಿಳಿಸಿದರು.

ಈ ಮಸೂದೆಗಳು ದೇಶದ ಕೃಷಿ ವಲಯದಲ್ಲಿ ಕ್ರಾಂತಿ ತರಲಿವೆ. ಜೊತೆಗೆ ಕನಿಷ್ಠ ಬೆಂಬಲ ದರ ವ್ಯವಸ್ಥೆಯೂ ಮುಂದುವರಿಯಲಿದೆ. ಕೃಷಿ ವಲಯದಿಂದ ದೇಶಕ್ಕಿರುವ ನಿರೀಕ್ಷೆ ಹಾಗೂ ಅಗತ್ಯ ಎರಡನ್ನೂ ಹೊಸ ಮಸೂದೆಗಳು ಪೂರೈಸಲಿವೆ. ಒಮ್ಮೆ ಹೆಚ್ಚುವರಿ ಇಳುವರಿ ಪಡೆದರೆ ರೈತನ ಆದಾಯವೂ ಹೆಚ್ಚುತ್ತದೆ ಎಂದರು. ಮಂಡೇನಕೊಪ್ಪ ಗಂಗಾಧರ್, ಕೃಷ್ಣೋಜಿರಾವ್, ಕೆ.ವಿ.ಅಣ್ಣಪ್ಪ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT