ವಿಶೇಷ ಕರ್ತವ್ಯಾಧಿಕಾರಿ ಬಿ. ಶಿವಕುಮಾರ್, ಮುಳುಗಡೆ ಸಂತ್ರಸ್ತರು ಯಾವ ಪ್ರದೇಶದಲ್ಲಿ ಸಾಗುವಳಿ ಮಾಡುತ್ತಿದ್ದಾರೆಯೊ ಅದಕ್ಕೆ ಸಂಬಂಧಪಟ್ಟಂತೆ ಹಕ್ಕುಪತ್ರ ವಿತರಿಸಲಾಗುವುದು. ಕೆಲವರು ಸಾಗುವಳಿ ಮಾಡುತ್ತಿರುವ ಭೂಮಿ ಅರಣ್ಯಭೂಮಿ, ಗೋಮಾಳ, ಗ್ರಾಮ ಠಾಣಾ, ಸೊಪ್ಪಿನಬೆಟ್ಟದ ವ್ಯಾಪ್ತಿಯಲ್ಲಿ ಬರುತ್ತದೆ ಎನ್ನಲಾಗಿದೆ. ಕಂದಾಯ ಹಾಗೂ ಅರಣ್ಯ ಇಲಾಖೆಯ ಜಂಟಿ ಸರ್ವೆ ನಡೆಸಿ ಸಾಗುವಳಿದಾರರಿಗೆ ಭೂಮಿಯ ಹಕ್ಕು ಕೊಡಿಸಲಾಗುವುದು ಎಂದು ತಿಳಿಸಿದರು. ಗ್ರೇಡ್-2 ತಹಶೀಲ್ದಾರ್ ಪರಮೇಶ್ವರ ಟಿ. ಇದ್ದರು.