<p><strong>ಸಾಗರ: </strong>ತಾಲ್ಲೂಕಿನ ಸಂಪಳ್ಳಿ ಗ್ರಾಮದ ಸ.ನಂ.31 ಹಾಗೂ 32ರಲ್ಲಿ ಜಮೀನಿನ ವಹಿವಾಟಿಗೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡರಾದ ಸೋಮಶೇಖರ ಲ್ಯಾವಿಗೆರೆ ಹಾಗೂ ಸಣ್ಣಕ್ಕಿ ಮಂಜು ಅವರು ಕಿರುಕುಳ ನೀಡುತ್ತಿದ್ದಾರೆ ಎಂದು ಸಂಪಳ್ಳಿ ಗ್ರಾಮಸ್ಥರಾದ ಸತ್ಯಪ್ಪ, ಶ್ರೀಧರ್ ಸಹೋದರರು ಆರೋಪಿಸಿದ್ದಾರೆ.</p>.<p>‘ಜಮೀನಿನ ವಹಿವಾಟಿನ ಸಂದರ್ಭದಲ್ಲಿ ₹ 10 ಲಕ್ಷ ನೀಡುವುದಾಗಿ ವಾಗ್ದಾನ ನೀಡಿದ್ದ ಸೋಮಶೇಖರ್ ಹಾಗೂ ಸಣ್ಣಕ್ಕಿ ಮಂಜು ನಂತರ ಆ ಪ್ರಕಾರ ನಡೆದುಕೊಂಡಿಲ್ಲ. ಈ ಬಗ್ಗೆ ಕೇಳಿದಾಗ ತಮ್ಮ ರಾಜಕೀಯ ಪ್ರಭಾವ ಬಳಸಿ ನಮ್ಮನ್ನು ಸುಮ್ಮನಾಗಿಸಲು ಮುಂದಾಗಿದ್ದಾರೆ’ ಎಂದು ಸೋಮವಾರ ಸುದ್ದಿಗೋಷ್ಠಿಯಲ್ಲಿ ಅವರು ದೂರಿದ್ದಾರೆ.</p>.<p>‘ನಮಗೆ ಆಗಿರುವ ಅನ್ಯಾಯವನ್ನು ಸರಿಪಡಿಸುವಂತೆ ಶಾಸಕ ಗೋಪಾಲಕೃಷ್ಣ ಬೇಳೂರು ಬಳಿ ಮನವಿ ಮಾಡಿದ್ದೇವೆ. ಆದರೆ, ಈವರೆಗೂ ನಮಗೆ ನ್ಯಾಯ ಸಿಕ್ಕಿಲ್ಲ. ನಮಗೆ ಬರಬೇಕಾದ ಹಣ ತಲುಪದಿದ್ದಲ್ಲಿ ಶಾಸಕರ ಮನೆ ಎದುರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಳ್ಳಬೇಕಾಗುತ್ತದೆ’ ಎಂದು ಅವರು ಎಚ್ಚರಿಸಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸಾಗರ: </strong>ತಾಲ್ಲೂಕಿನ ಸಂಪಳ್ಳಿ ಗ್ರಾಮದ ಸ.ನಂ.31 ಹಾಗೂ 32ರಲ್ಲಿ ಜಮೀನಿನ ವಹಿವಾಟಿಗೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡರಾದ ಸೋಮಶೇಖರ ಲ್ಯಾವಿಗೆರೆ ಹಾಗೂ ಸಣ್ಣಕ್ಕಿ ಮಂಜು ಅವರು ಕಿರುಕುಳ ನೀಡುತ್ತಿದ್ದಾರೆ ಎಂದು ಸಂಪಳ್ಳಿ ಗ್ರಾಮಸ್ಥರಾದ ಸತ್ಯಪ್ಪ, ಶ್ರೀಧರ್ ಸಹೋದರರು ಆರೋಪಿಸಿದ್ದಾರೆ.</p>.<p>‘ಜಮೀನಿನ ವಹಿವಾಟಿನ ಸಂದರ್ಭದಲ್ಲಿ ₹ 10 ಲಕ್ಷ ನೀಡುವುದಾಗಿ ವಾಗ್ದಾನ ನೀಡಿದ್ದ ಸೋಮಶೇಖರ್ ಹಾಗೂ ಸಣ್ಣಕ್ಕಿ ಮಂಜು ನಂತರ ಆ ಪ್ರಕಾರ ನಡೆದುಕೊಂಡಿಲ್ಲ. ಈ ಬಗ್ಗೆ ಕೇಳಿದಾಗ ತಮ್ಮ ರಾಜಕೀಯ ಪ್ರಭಾವ ಬಳಸಿ ನಮ್ಮನ್ನು ಸುಮ್ಮನಾಗಿಸಲು ಮುಂದಾಗಿದ್ದಾರೆ’ ಎಂದು ಸೋಮವಾರ ಸುದ್ದಿಗೋಷ್ಠಿಯಲ್ಲಿ ಅವರು ದೂರಿದ್ದಾರೆ.</p>.<p>‘ನಮಗೆ ಆಗಿರುವ ಅನ್ಯಾಯವನ್ನು ಸರಿಪಡಿಸುವಂತೆ ಶಾಸಕ ಗೋಪಾಲಕೃಷ್ಣ ಬೇಳೂರು ಬಳಿ ಮನವಿ ಮಾಡಿದ್ದೇವೆ. ಆದರೆ, ಈವರೆಗೂ ನಮಗೆ ನ್ಯಾಯ ಸಿಕ್ಕಿಲ್ಲ. ನಮಗೆ ಬರಬೇಕಾದ ಹಣ ತಲುಪದಿದ್ದಲ್ಲಿ ಶಾಸಕರ ಮನೆ ಎದುರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಳ್ಳಬೇಕಾಗುತ್ತದೆ’ ಎಂದು ಅವರು ಎಚ್ಚರಿಸಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>