<p><strong>ಸಾಗರ: </strong>ಭದ್ರಾವತಿಯ ಎಂಪಿಎಂ ಕಾರ್ಖಾನೆಯನ್ನು ಪುನಶ್ಚೇತನಗೊಳಿಸಲು ಜಿಲ್ಲೆಯಲ್ಲಿ ನಿಗದಿಪಡಿಸಿದ ಅರಣ್ಯ ಹಾಗೂ ಕಂದಾಯ ಭೂಮಿಯಲ್ಲಿ ನೆಡುತೋಪು ಬೆಳೆಸಲು ಎಂಪಿಎಂಗೆ ನೀಡಿರುವ ಗುತ್ತಿಗೆಯನ್ನು ನವೀಕರಣಗೊಳಿಸುವುದು ಅನಿವಾರ್ಯ ಎಂದು ಸಂಸದ ಬಿ.ವೈ. ರಾಘವೇಂದ್ರ ಸ್ಪಷ್ಟಪಡಿಸಿದರು.</p>.<p>ಇಲ್ಲಿನ ಪ್ರವಾಸಿ ಮಂದಿರದಲ್ಲಿ ಶನಿವಾರ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ‘ಒಂದೆಡೆ ಕಸ್ತೂರಿರಂಗನ್ ವರದಿ ಜಾರಿ ಬೇಡ ಎನ್ನುವುದು, ಮತ್ತೊಂದೆಡೆ ಎಂಪಿಎಂಗೆ ನೀಡಿರುವ ಗುತ್ತಿಗೆ ನವೀಕರಿಸಬೇಡಿ ಎನ್ನುವುದು ದ್ವಂದ್ವ ನಿಲುವು ಆಗುತ್ತದೆ’ ಎಂದರು.</p>.<p>ಅಕೇಶಿಯಾದಲ್ಲಿ ವಿವಿಧ ಜಾತಿಗಳಿವೆ. ಪರಿಸರಕ್ಕೆ ಮಾರಕವಾಗುವ ಅಕೇಶಿಯಾ, ನೀಲಗಿರಿ ತಳಿಗಳ ಬದಲು ಪರಿಸರಕ್ಕೆ ಪೂರಕವಾಗುವ ಗಿಡಗಳನ್ನೊಳಗೊಂಡ ನೆಡುತೋಪು ನಿರ್ಮಿಸುವಂತೆ ನೋಡಿಕೊಳ್ಳಲಾಗುವುದು. ಎಂಪಿಎಂ ಕಾರ್ಖಾನೆಯೇ ಇದರ ನಿರ್ವಹಣೆ ವಹಿಸುತ್ತದೆ ಹೊರತು ಭೂಮಿಯನ್ನು ಯಾವುದೇ ಬಂಡವಾಳಶಾಹಿಗಳ ವಶಕ್ಕೆ ನೀಡುವುದಿಲ್ಲ ಎಂದು ತಿಳಿಸಿದರು.</p>.<p>ತಾಲ್ಲೂಕಿನ ಯಲಗಳಲೆ ಗ್ರಾಮದ ಸ.ನಂ. 105ರ 50 ಎಕರೆ ಪ್ರದೇಶದಲ್ಲಿ ನೂತನ ಪೊಲೀಸ್ ತರಬೇತಿ ಕೇಂದ್ರ ಆರಂಭಗೊಳ್ಳಲಿದೆ. ಲಿಂಗನಮಕ್ಕಿ ಸೇರಿ ರಾಜ್ಯದ ಪ್ರಮುಖ ಜಲಾಶಯ, ಸೇನಾ ಕೇಂದ್ರಗಳ ಭದ್ರತೆಯನ್ನು ನೋಡಿಕೊಳ್ಳುವ ಜವಾಬ್ದಾರಿ ಈ ಕೇಂದ್ರದ ಮೇಲೆ ಇರಲಿದೆ ಎಂದರು.</p>.<p>ತಾಲ್ಲೂಕಿನ ತಾಳಗುಪ್ಪ ಹಾಗೂ ಇಲ್ಲಿನ ರೈಲ್ವೆ ನಿಲ್ದಾಣವನ್ನು ಮೇಲ್ದರ್ಜೆಗೆ ಏರಿಸಲಾಗುವುದು. ಸಾಗರದ ರೈಲ್ವೆ ನಿಲ್ದಾಣದಲ್ಲಿ ಎರಡನೇ ಪ್ಲಾಟ್ಫಾರ್ಮ್ ನಿರ್ಮಾಣಕ್ಕೆ ಟೆಂಡರ್ ಪ್ರಕ್ರಿಯೆ ಮುಗಿದಿದೆ. ಇದು ಮುಕ್ತಾಯವಾದಲ್ಲಿ ಈಗ ಹೊರಡುತ್ತಿರುವ ರೈಲಿನ ಸಮಯವನ್ನು ಜನರ ಅನುಕೂಲಕ್ಕೆ ತಕ್ಕಂತೆ ಬದಲಿಸಲಾಗುವುದು ಎಂದು ಹೇಳಿದರು.</p>.<p>ರೈಲ್ವೆ ಕೋಚಿಂಗ್ ಟರ್ಮಿನಲ್ ಕೇಂದ್ರವನ್ನು ತಾಳಗುಪ್ಪ ಅಥವಾ ಕೋಟೆಗಂಗೂರಿನಲ್ಲಿ ನಿರ್ಮಿಸಲು ತೀರ್ಮಾನಿಸಲಾಗಿತ್ತು. ಈಗ ಕೋಟೆಗಂಗೂರಿನಲ್ಲಿ ಅದು ಕಾರ್ಯಾರಂಭ ಮಾಡುವುದು ಖಚಿತವಾಗಿದೆ. ಇದಕ್ಕೆ ಅಧಿಕಾರಿಗಳು ನೀಡಿರುವ ತಾಂತ್ರಿಕ ವರದಿ ಕಾರಣವೇ ಹೊರತು ರಾಜಕೀಯ ಕಾರಣಗಳಿಲ್ಲ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.</p>.<p>ಜೋಗದ ಅಭಿವೃದ್ಧಿಗೆ ₹ 160 ಕೋಟಿ ಮಂಜೂರಾಗಿದೆ. ಯಾವ ರೀತಿ ಜೋಗವನ್ನು ಅಭಿವೃದ್ಧಿಪಡಿಸಬೇಕು ಎನ್ನುವ ಕುರಿತು ಚಿಂತನೆ ನಡೆದಿದೆ. ಸಾಗರದ ನ್ಯೂ ಬಿ.ಎಚ್. ರಸ್ತೆ ವಿಸ್ತರಣೆ ಕಾರ್ಯ ಶೀಘ್ರದಲ್ಲೆ ಆರಂಭವಾಗಲಿದೆ ಎಂದು ಮಾಹಿತಿ ನೀಡಿದರು.</p>.<p>ಶಾಸಕ ಎಚ್. ಹಾಲಪ್ಪ ಹರತಾಳು, ಟೂರಿಸಂ ಟಾಸ್ಕ್ಫೋರ್ಸ್ನಲಕ್ಷ್ಮೀನಾರಾಯಣ ಕಾಶಿ, ನಗರಸಭೆ ಅಧ್ಯಕ್ಷೆ ಮಧುರಾ ಶಿವಾನಂದ, ಉಪಾಧ್ಯಕ್ಷ ವಿ.ಮಹೇಶ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸಾಗರ: </strong>ಭದ್ರಾವತಿಯ ಎಂಪಿಎಂ ಕಾರ್ಖಾನೆಯನ್ನು ಪುನಶ್ಚೇತನಗೊಳಿಸಲು ಜಿಲ್ಲೆಯಲ್ಲಿ ನಿಗದಿಪಡಿಸಿದ ಅರಣ್ಯ ಹಾಗೂ ಕಂದಾಯ ಭೂಮಿಯಲ್ಲಿ ನೆಡುತೋಪು ಬೆಳೆಸಲು ಎಂಪಿಎಂಗೆ ನೀಡಿರುವ ಗುತ್ತಿಗೆಯನ್ನು ನವೀಕರಣಗೊಳಿಸುವುದು ಅನಿವಾರ್ಯ ಎಂದು ಸಂಸದ ಬಿ.ವೈ. ರಾಘವೇಂದ್ರ ಸ್ಪಷ್ಟಪಡಿಸಿದರು.</p>.<p>ಇಲ್ಲಿನ ಪ್ರವಾಸಿ ಮಂದಿರದಲ್ಲಿ ಶನಿವಾರ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ‘ಒಂದೆಡೆ ಕಸ್ತೂರಿರಂಗನ್ ವರದಿ ಜಾರಿ ಬೇಡ ಎನ್ನುವುದು, ಮತ್ತೊಂದೆಡೆ ಎಂಪಿಎಂಗೆ ನೀಡಿರುವ ಗುತ್ತಿಗೆ ನವೀಕರಿಸಬೇಡಿ ಎನ್ನುವುದು ದ್ವಂದ್ವ ನಿಲುವು ಆಗುತ್ತದೆ’ ಎಂದರು.</p>.<p>ಅಕೇಶಿಯಾದಲ್ಲಿ ವಿವಿಧ ಜಾತಿಗಳಿವೆ. ಪರಿಸರಕ್ಕೆ ಮಾರಕವಾಗುವ ಅಕೇಶಿಯಾ, ನೀಲಗಿರಿ ತಳಿಗಳ ಬದಲು ಪರಿಸರಕ್ಕೆ ಪೂರಕವಾಗುವ ಗಿಡಗಳನ್ನೊಳಗೊಂಡ ನೆಡುತೋಪು ನಿರ್ಮಿಸುವಂತೆ ನೋಡಿಕೊಳ್ಳಲಾಗುವುದು. ಎಂಪಿಎಂ ಕಾರ್ಖಾನೆಯೇ ಇದರ ನಿರ್ವಹಣೆ ವಹಿಸುತ್ತದೆ ಹೊರತು ಭೂಮಿಯನ್ನು ಯಾವುದೇ ಬಂಡವಾಳಶಾಹಿಗಳ ವಶಕ್ಕೆ ನೀಡುವುದಿಲ್ಲ ಎಂದು ತಿಳಿಸಿದರು.</p>.<p>ತಾಲ್ಲೂಕಿನ ಯಲಗಳಲೆ ಗ್ರಾಮದ ಸ.ನಂ. 105ರ 50 ಎಕರೆ ಪ್ರದೇಶದಲ್ಲಿ ನೂತನ ಪೊಲೀಸ್ ತರಬೇತಿ ಕೇಂದ್ರ ಆರಂಭಗೊಳ್ಳಲಿದೆ. ಲಿಂಗನಮಕ್ಕಿ ಸೇರಿ ರಾಜ್ಯದ ಪ್ರಮುಖ ಜಲಾಶಯ, ಸೇನಾ ಕೇಂದ್ರಗಳ ಭದ್ರತೆಯನ್ನು ನೋಡಿಕೊಳ್ಳುವ ಜವಾಬ್ದಾರಿ ಈ ಕೇಂದ್ರದ ಮೇಲೆ ಇರಲಿದೆ ಎಂದರು.</p>.<p>ತಾಲ್ಲೂಕಿನ ತಾಳಗುಪ್ಪ ಹಾಗೂ ಇಲ್ಲಿನ ರೈಲ್ವೆ ನಿಲ್ದಾಣವನ್ನು ಮೇಲ್ದರ್ಜೆಗೆ ಏರಿಸಲಾಗುವುದು. ಸಾಗರದ ರೈಲ್ವೆ ನಿಲ್ದಾಣದಲ್ಲಿ ಎರಡನೇ ಪ್ಲಾಟ್ಫಾರ್ಮ್ ನಿರ್ಮಾಣಕ್ಕೆ ಟೆಂಡರ್ ಪ್ರಕ್ರಿಯೆ ಮುಗಿದಿದೆ. ಇದು ಮುಕ್ತಾಯವಾದಲ್ಲಿ ಈಗ ಹೊರಡುತ್ತಿರುವ ರೈಲಿನ ಸಮಯವನ್ನು ಜನರ ಅನುಕೂಲಕ್ಕೆ ತಕ್ಕಂತೆ ಬದಲಿಸಲಾಗುವುದು ಎಂದು ಹೇಳಿದರು.</p>.<p>ರೈಲ್ವೆ ಕೋಚಿಂಗ್ ಟರ್ಮಿನಲ್ ಕೇಂದ್ರವನ್ನು ತಾಳಗುಪ್ಪ ಅಥವಾ ಕೋಟೆಗಂಗೂರಿನಲ್ಲಿ ನಿರ್ಮಿಸಲು ತೀರ್ಮಾನಿಸಲಾಗಿತ್ತು. ಈಗ ಕೋಟೆಗಂಗೂರಿನಲ್ಲಿ ಅದು ಕಾರ್ಯಾರಂಭ ಮಾಡುವುದು ಖಚಿತವಾಗಿದೆ. ಇದಕ್ಕೆ ಅಧಿಕಾರಿಗಳು ನೀಡಿರುವ ತಾಂತ್ರಿಕ ವರದಿ ಕಾರಣವೇ ಹೊರತು ರಾಜಕೀಯ ಕಾರಣಗಳಿಲ್ಲ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.</p>.<p>ಜೋಗದ ಅಭಿವೃದ್ಧಿಗೆ ₹ 160 ಕೋಟಿ ಮಂಜೂರಾಗಿದೆ. ಯಾವ ರೀತಿ ಜೋಗವನ್ನು ಅಭಿವೃದ್ಧಿಪಡಿಸಬೇಕು ಎನ್ನುವ ಕುರಿತು ಚಿಂತನೆ ನಡೆದಿದೆ. ಸಾಗರದ ನ್ಯೂ ಬಿ.ಎಚ್. ರಸ್ತೆ ವಿಸ್ತರಣೆ ಕಾರ್ಯ ಶೀಘ್ರದಲ್ಲೆ ಆರಂಭವಾಗಲಿದೆ ಎಂದು ಮಾಹಿತಿ ನೀಡಿದರು.</p>.<p>ಶಾಸಕ ಎಚ್. ಹಾಲಪ್ಪ ಹರತಾಳು, ಟೂರಿಸಂ ಟಾಸ್ಕ್ಫೋರ್ಸ್ನಲಕ್ಷ್ಮೀನಾರಾಯಣ ಕಾಶಿ, ನಗರಸಭೆ ಅಧ್ಯಕ್ಷೆ ಮಧುರಾ ಶಿವಾನಂದ, ಉಪಾಧ್ಯಕ್ಷ ವಿ.ಮಹೇಶ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>