ಶುಕ್ರವಾರ, 23 ಜನವರಿ 2026
×
ADVERTISEMENT
ADVERTISEMENT

ಕಾನೂನು ಸಾಕ್ಷರತೆಯಿಂದ ಬಾಲ್ಯವಿವಾಹ, ಪೋಕ್ಸೊ ತಡೆ ಸಾಧ್ಯ: ನ್ಯಾಯಾಧೀಶ ಅಭಯ ಚೌಗಲಾ

Published : 23 ಜನವರಿ 2026, 4:15 IST
Last Updated : 23 ಜನವರಿ 2026, 4:15 IST
ಫಾಲೋ ಮಾಡಿ
Comments
ಕಾನೂನಿನ ಅರಿವು ಬೌದ್ಧಿಕ ಸಿರಿತನವನ್ನು ಹೆಚ್ಚಿಸುವುದರ ಜೊತೆಗೆ ಸಮಾಜದಲ್ಲಿ ಸಾಮರಸ್ಯ ಬೆಳೆಸಲು ಸಹಕಾರಿಯಾಗಿದೆ. ವಿದ್ಯಾರ್ಥಿಗಳು ಸೇರಿದಂತೆ ಎಲ್ಲರೂ ಸಂವಿಧಾನಾತ್ಮಕ ಮೌಲ್ಯಗಳನ್ನು ತಿಳಿದುಕೊಳ್ಳಬೇಕು ದ್ವಿಚಕ್ರ ವಾಹನ ಚಾಲಕರು ಕಡ್ಡಾಯವಾಗಿ ಹೆಲ್ಮೆಟ್ ಧರಿಸಿ ರಸ್ತೆ ಸುರಕ್ಷತೆ ಪಾಲಿಸಬೇಕು. ಬಾಲ್ಯವಿವಾಹ ಪೋಕ್ಸೋ ಸೇರಿದಂತೆ ಇತರೆ ಕಾನೂನುಗಳ ಕುರಿತು ಹೆಚ್ಚಿನ ಅರಿವು ಮೂಡಿಸುವ ಮೂಲಕ ಪ್ರಕರಣಗಳನ್ನು ತಗ್ಗಿಸಲು ಎಲ್ಲರೂ ಕೈಜೋಡಿಸಬೇಕು. ಅಗತ್ಯ ಕಾನೂನುಗಳ ಅರಿವು ಪಡೆದು ಸಮಾಜವನ್ನು ರಚನಾತ್ಮಕವಾಗಿ ಕಟ್ಟುವಲ್ಲಿ ವಿದ್ಯಾರ್ಥಿಗಳು ಮುಂದಾಗಬೇಕು
ಪ್ರಭುಲಿಂಗ ಕವಳಿಕಟ್ಟಿ, ಜಿಲ್ಲಾಧಿಕಾರಿ
ಕಳೆದ ವರ್ಷ ಜಿಲ್ಲೆಯಲ್ಲಿ ಪೋಕ್ಸೋ ಪ್ರಕರಣಗಳು ಹೆಚ್ಚಾಗಿದ್ದು ಈ ವರ್ಷದ ಮಿಷನ್ ಸುರಕ್ಷಾ ಅಭಿಯಾನ ಮೂಲಕ ಶೇ 50ರಷ್ಟು ಬಾಲ್ಯವಿವಾಹ ತಡೆಯಲಾಗಿದೆ. ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಕಲ್ಯಾಣ ಇಲಾಖೆ ಶಿಕ್ಷಣ ಸೇರಿದಂತೆ ವಿವಿಧ ಇಲಾಖೆಗಳ ಸಹಕಾರದೊಂದಿಗೆ ವಿದ್ಯಾರ್ಥಿಗಳಲ್ಲಿ ಕಾನೂನು ಅರಿವು ಯಶಸ್ವಿಯಾಗಿ ಮೂಡಿಸಲಾಗಿದೆ. ಎಲ್ಲಾ ಶಾಲೆಗಳಲ್ಲಿ ಸಂವಿಧಾನದ ಪೀಠಿಕೆಯನ್ನು ಓದಿಸುತ್ತಿರುವುದರಿಂದ ಮಕ್ಕಳಲ್ಲಿ ಸಂವಿಧಾನದ ಅರಿವು ಹೆಚ್ಚಾಗಿದೆ. ಮಕ್ಕಳು ಸಹಾಯವಾಣಿ 1098 ಬಳಸಿಕೊಂಡು ಬಾಲ್ಯವಿವಾಹ ತಡೆಗಟ್ಟಿದ್ದಾರೆ ಮತ್ತು ಗ್ರಾಮ ಪಂಚಾಯತಿ ಮಟ್ಟದಲ್ಲಿ ಜಾಗೃತಿ ಮೂಡಿಸಿದ್ದಾರೆ
ಎನ್. ಹೇಮಂತ್ ಜಿ.ಪಂ. ಸಿಇಒ
ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಮತ್ತು ತಾಲ್ಲೂಕು ಸಮಿತಿಗಳು ಕಾನೂನು ಅರಿವು ನೆರವು ಹಾಗೂ ಲೋಕ ಅದೋಲತ್ ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ನಡೆಸುತ್ತಿವೆ.ಮಿಷನ್ ಸುರಕ್ಷಾ ಅಭಿಯಾನ ಮೂಲಕ ಪೋಕ್ಸೊ ಬಾಲ್ಯವಿವಾಹ ಮುಂತಾದ ಸಮಸ್ಯೆಗಳ ಬಗ್ಗೆ ಮಕ್ಕಳಲ್ಲಿ ಅರಿವು ಮೂಡಿಸಲಾಗುತ್ತಿದೆ. ಜನನ ಪ್ರಮಾಣ ಪತ್ರವಿಲ್ಲದೆ ಶಾಲೆಗೆ ದಾಖಲಾಗದ 5000 ಮಕ್ಕಳನ್ನು ಗುರುತಿಸಿ 500 ಮಕ್ಕಳು ಪ್ರಮಾಣ ಪತ್ರ ಪಡೆದಿದ್ದಾರೆ. ಶಾಲೆಗಳಲ್ಲಿ ಸ್ಥಾಪಿತ ಸಾಕ್ಷರತಾ ಕ್ಲಬ್‌ಗಳಿಂದ ವಿದ್ಯಾರ್ಥಿಗಳಿಗೆ ಕಾನೂನು ಜ್ಞಾನ ವಿಸ್ತಾರವಾಗುತ್ತಿದೆ.
ಸಂತೋಷ್ ಎಂ.ಎಸ್. ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT