ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪ್ರತಿ ಮನೆಯಲ್ಲೂ ರಾಷ್ಟ್ರಾಭಿಮಾನ ಮೊಳಗಬೇಕು

Last Updated 25 ನವೆಂಬರ್ 2021, 2:28 IST
ಅಕ್ಷರ ಗಾತ್ರ

ಶಿವಮೊಗ್ಗ: ಮನೆ ಮನೆಗಳಲ್ಲಿ ದೇಶ ಭಕ್ತಿಗೀತೆ, ರಾಷ್ಟ್ರಾಭಿಮಾನ ಮೊಳಗಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್. ಈಶ್ವರಪ್ಪ ಹೇಳಿದರು.

ವಿನೋಬನಗರ ಶಿವಾಲಯ ಸಭಾಂಗಣದಲ್ಲಿ ಜಿಲ್ಲಾ ಜಂಗಮ ಮಹಿಳಾ ಸಮಾಜದಿಂದ ತಾಲ್ಲೂಕು ಜಂಗಮ ಸಮಾಜ, ವಿನೋಬನಗರ ವೀರಶೈವ ಸೇವಾ ಸಮಿತಿ ಸಹಯೋಗದಲ್ಲಿ ಬುಧವಾರ ಹಮ್ಮಿಕೊಂಡಿದ್ದ ನಾಡ ನಮನ ಸಮೂಹ ಗಾಯನ ಸ್ಪರ್ಧೆ ಉದ್ಘಾಟಿಸಿ ಅವರು ಮಾತನಾಡಿದರು.

‘ಹೆಣ್ಣುಮಕ್ಕಳು ಸದಾ ತಮ್ಮ ಕುಟುಂಬದ ಜವಾಬ್ದಾರಿ ಹೊತ್ತು ಮನೆಯೊಳಗೆ ಒತ್ತಡದಲ್ಲಿರುತ್ತಾರೆ. ಅವರು ಮನೆ ಕೆಲಸದ ಜೊತೆಗೆ ಈ ರೀತಿಯ ಸಾಮಾಜಿಕ ಚಟುವಟಿಕೆಯಲ್ಲಿ ಭಾಗವಹಿಸಬೇಕು. ಪರಸ್ಪರ ತಮ್ಮ ಸಮಸ್ಯೆ ಹಂಚಿಕೊಳ್ಳಬೇಕು, ಒಳ್ಳೆಯ ವಿಚಾರ ತಿಳಿಯಲು ಇಂತಹ ಕಾರ್ಯಕ್ರಮ ಸಹಕಾರಿಯಾಗುತ್ತದೆ. ಭಜನೆ, ಹಾಡು ಇನ್ನಿತರ ಸಂಸ್ಕಾರ ಬೇರೂರಿದಾಗ ಅದು ಸಮಾಜದ ಮೇಲೆ ಉತ್ತಮ ಪರಿಣಾಮ ಬೀರುತ್ತದೆ’ ಎಂದರು.

‘ಭಜನೆ ಮತ್ತು ಹಾಡಿಗೆ ರಾಗ ಮುಖ್ಯವಲ್ಲ, ಭಾವ ಮುಖ್ಯ. ಉತ್ತಮ ಹಾಡುಗಾರರ ಜೊತೆಗೆ ಧ್ವನಿ ಗೂಡಿಸಿದಾಗ ತನ್ನಿಂತಾನೇ ಅವರು ಅದ್ಭುತ ಹಾಡುಗಾರರಾಗುತ್ತಾರೆ. ಭಕ್ತಿಯಲ್ಲಿ ತಲ್ಲೀನರಾದಾಗ ಸ್ವಾಭಾವಿಕವಾಗಿ ಉತ್ತಮ ಹಾಡು ಹೊರ ಬರುತ್ತದೆ. ಅದರಿಂದ ಹೃದಯಕ್ಕೆ ಆನಂದ, ಮಾನಸಿಕ ನೆಮ್ಮದಿ ದೊರೆಯುತ್ತದೆ’ ಎಂದು ತಿಳಿಸಿದರು.

‘ಸದ್ಗುಣ, ಸಚ್ಚಾರಿತ್ರ್ಯ, ಸಹನೆ, ಸಹಕಾರ ಮನೋಭಾವನೆ, ಸಂಸ್ಕಾರ ಇವೆಲ್ಲವೂ ಭಜನೆಯಿಂದ ಹೊರಬರಲು ಸಾಧ್ಯ. ಇದು ಕೇವಲ ಮಹಿಳೆಯರ ಗುಂಪುಗಾರಿಕೆ ಮಾತ್ರವಲ್ಲ. ಭಕ್ತಿ ಮತ್ತು ಭಾವದ ಸಮ್ಮಿಲನವಾಗಿದೆ. ಸಂಗೀತ, ಹಾಡುಗಳು ಹೃದಯನ್ನು ಮಾತ್ರ ತಟ್ಟುವುದಿಲ್ಲ. ಮನಸಿಗೆ ನೆಮ್ಮದಿಯನ್ನೂ ನೀಡುತ್ತವೆ. ಅತಿ ಹೆಚ್ಚು ಸಂಖ್ಯೆಯಲ್ಲಿ ಹೆಣ್ಣು ಮಕ್ಕಳನ್ನು ಸೇರಿಸಿಕೊಂಡು ಇಂತಹ ಕಾರ್ಯಕ್ರಮ ಹಮ್ಮಿಕೊಂಡಾಗ ನಮಗೆ ಅರಿವಿಲ್ಲದೇ ನಮ್ಮ ಮಕ್ಕಳಿಗೂ ಉತ್ತಮ ಸಂಸ್ಕಾರ ಸಿಗುತ್ತದೆ’ ಎಂದು ಹೇಳಿದರು.

ಜಿಲ್ಲಾ ಜಂಗಮ ಸಮಾಜದ ಗೌರವಾಧ್ಯಕ್ಷ ಟಿ.ವಿ. ಈಶ್ವರಯ್ಯ, ವಿನೋಬನಗರ ವೀರಶೈವ ಸಮಿತಿ ಅಧ್ಯಕ್ಷ ಎಚ್. ಮಲ್ಲಿಕಾರ್ಜುನ ಸ್ವಾಮಿ, ತಾಲ್ಲೂಕು ಸಮಾಜ ಅಧ್ಯಕ್ಷ ಉಮೇಶ್ ಹಿರೇಮಠ್, ಜಿಲ್ಲಾ ಜಂಗಮ ಮಹಿಳಾ ಸಮಾಜದ ಅಧ್ಯಕ್ಷೆ ಸುಜಯ ಪ್ರಸಾದ್, ರುದ್ರಯ್ಯ, ಮರುಳೇಶ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT