ಸೊರಬ (ಶಿವಮೊಗ್ಗ): ‘ಕೆರೆಗಳ ಅತಿಕ್ರಮಣ ತೆರವು ಪ್ರಕ್ರಿಯೆ ಪೂರ್ಣಗೊಳಿಸಲು ಆಯಾ ಜಿಲ್ಲಾಡಳಿತ ಕಾಲಮಿತಿಯಲ್ಲಿ ಅಭಿಯಾನ ಆರಂಭಿಸಬೇಕು. ಇದಕ್ಕೆ ಪೂರಕವಾಗಿ ರಾಜ್ಯದಲ್ಲಿರುವ 3,000 ಕೆರೆ ಅಭಿವೃದ್ಧಿ ಸಂಘಗಳಿಗೆ ಜೀವ ತುಂಬಬೇಕು‘ ಎಂದು ಸೊರಬ ತಾಲ್ಲೂಕಿನ ಉದ್ರಿ ಗ್ರಾಮದಲ್ಲಿ ಶುಕ್ರವಾರ ನಡೆದ ಮಲೆನಾಡಿನ ಕೆರೆ, ಕಾನು ಸಂರಕ್ಷಣಾ ಸಮಾವೇಶದಲ್ಲಿ ಸರ್ಕಾರವನ್ನು ಒತ್ತಾಯಿಸಲಾಯಿತು.