<p>ಸಾಗರ: ‘ಧರ್ಮನಿಷ್ಠೆ ಇದ್ದಲ್ಲಿ ಮಾತ್ರ ಮನುಷ್ಯನ ಜೀವನ ಸಾರ್ಥಕತೆ ಪಡೆಯುತ್ತದೆ’ ಎಂದು ಶೃಂಗೇರಿ ಶಾರದಾಪೀಠದ ವಿಧುಶೇಖರ ಭಾರತೀ ಶ್ರೀಗಳು ಹೇಳಿದರು.</p>.<p>ಇಲ್ಲಿನ ಹರದೂರು ದುರ್ಗಾಂಬಾ ದೇವಸ್ಥಾನದಲ್ಲಿ ಭಾನುವಾರ ನಡೆದ ಕುಂಭಾಭಿಷೇಕ ಮಹೋತ್ಸವದಲ್ಲಿ ಆಶೀರ್ವಚನ ನೀಡಿದರು.</p>.<p>ಧರ್ಮಶ್ರದ್ಧೆ ಇಲ್ಲದಿದ್ದಲ್ಲಿ ಬದುಕಿನಲ್ಲಿ ನೆಮ್ಮದಿ ಸಾಧ್ಯವಿಲ್ಲ. ಹೊಸದಾಗಿ ದೇವಸ್ಥಾನಗಳನ್ನು ನಿರ್ಮಾಣ ಮಾಡುವ ಜೊತೆಗೆ ಹಳೆಯ ದೇವಸ್ಥಾನಗಳನ್ನು ಪುನರುಜ್ಜೀವನಗೊಳಿಸುವುದೂ ಮುಖ್ಯ ಎಂದರು.</p>.<p>ಮಹಾಗಣಪತಿ, ವೆಂಕಟೇಶ್ವರ, ಹರದೂರು ದುರ್ಗಾಂಬಾ ದೇವಸ್ಥಾನದ ಸಮೀಪದಲ್ಲೇ ಇರುವ ಗಣಪತಿ ಕೆರೆಯ ಅಭಿವೃದ್ಧಿಗೆ ಸರ್ಕಾರ ₹ 1 ಕೋಟಿ ಬಿಡುಗಡೆ ಮಾಡಿದೆ. ಕೆರೆಯ ನೀರನ್ನು ಸ್ವಚ್ಛಗೊಳಿಸಿ ಸೌಂದರ್ಯೀಕರಣ ಮಾಡಲಾಗುವುದು ಎಂದುಶಾಸಕ ಎಚ್.ಹಾಲಪ್ಪ ಹರತಾಳು ತಿಳಿಸಿದರು.</p>.<p>ದೇವಸ್ಥಾನದ ವಿಶ್ವಸ್ಥ ಸಮಿತಿ ಅಧ್ಯಕ್ಷ ಅಶ್ವಿನಿಕುಮಾರ್, ಹೈಕೋರ್ಟ್ ವಕೀಲ ಕೆ. ದಿವಾಕರ್ ಮಾತನಾಡಿದರು. ನಗರಸಭೆ ಅಧ್ಯಕ್ಷೆ ಮಧುರಾ ಶಿವಾನಂದ್, ಉಪಾಧ್ಯಕ್ಷ ವಿ. ಮಹೇಶ್, ಪ್ರಮುಖರಾದ ಎಸ್.ಜಿ. ಶ್ಯಾನಭಾಗ್, ಟಿ.ವಿ.ಪಾಂಡುರಂಗ, ಮ.ಸ. ನಂಜುಂಡಸ್ವಾಮಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಸಾಗರ: ‘ಧರ್ಮನಿಷ್ಠೆ ಇದ್ದಲ್ಲಿ ಮಾತ್ರ ಮನುಷ್ಯನ ಜೀವನ ಸಾರ್ಥಕತೆ ಪಡೆಯುತ್ತದೆ’ ಎಂದು ಶೃಂಗೇರಿ ಶಾರದಾಪೀಠದ ವಿಧುಶೇಖರ ಭಾರತೀ ಶ್ರೀಗಳು ಹೇಳಿದರು.</p>.<p>ಇಲ್ಲಿನ ಹರದೂರು ದುರ್ಗಾಂಬಾ ದೇವಸ್ಥಾನದಲ್ಲಿ ಭಾನುವಾರ ನಡೆದ ಕುಂಭಾಭಿಷೇಕ ಮಹೋತ್ಸವದಲ್ಲಿ ಆಶೀರ್ವಚನ ನೀಡಿದರು.</p>.<p>ಧರ್ಮಶ್ರದ್ಧೆ ಇಲ್ಲದಿದ್ದಲ್ಲಿ ಬದುಕಿನಲ್ಲಿ ನೆಮ್ಮದಿ ಸಾಧ್ಯವಿಲ್ಲ. ಹೊಸದಾಗಿ ದೇವಸ್ಥಾನಗಳನ್ನು ನಿರ್ಮಾಣ ಮಾಡುವ ಜೊತೆಗೆ ಹಳೆಯ ದೇವಸ್ಥಾನಗಳನ್ನು ಪುನರುಜ್ಜೀವನಗೊಳಿಸುವುದೂ ಮುಖ್ಯ ಎಂದರು.</p>.<p>ಮಹಾಗಣಪತಿ, ವೆಂಕಟೇಶ್ವರ, ಹರದೂರು ದುರ್ಗಾಂಬಾ ದೇವಸ್ಥಾನದ ಸಮೀಪದಲ್ಲೇ ಇರುವ ಗಣಪತಿ ಕೆರೆಯ ಅಭಿವೃದ್ಧಿಗೆ ಸರ್ಕಾರ ₹ 1 ಕೋಟಿ ಬಿಡುಗಡೆ ಮಾಡಿದೆ. ಕೆರೆಯ ನೀರನ್ನು ಸ್ವಚ್ಛಗೊಳಿಸಿ ಸೌಂದರ್ಯೀಕರಣ ಮಾಡಲಾಗುವುದು ಎಂದುಶಾಸಕ ಎಚ್.ಹಾಲಪ್ಪ ಹರತಾಳು ತಿಳಿಸಿದರು.</p>.<p>ದೇವಸ್ಥಾನದ ವಿಶ್ವಸ್ಥ ಸಮಿತಿ ಅಧ್ಯಕ್ಷ ಅಶ್ವಿನಿಕುಮಾರ್, ಹೈಕೋರ್ಟ್ ವಕೀಲ ಕೆ. ದಿವಾಕರ್ ಮಾತನಾಡಿದರು. ನಗರಸಭೆ ಅಧ್ಯಕ್ಷೆ ಮಧುರಾ ಶಿವಾನಂದ್, ಉಪಾಧ್ಯಕ್ಷ ವಿ. ಮಹೇಶ್, ಪ್ರಮುಖರಾದ ಎಸ್.ಜಿ. ಶ್ಯಾನಭಾಗ್, ಟಿ.ವಿ.ಪಾಂಡುರಂಗ, ಮ.ಸ. ನಂಜುಂಡಸ್ವಾಮಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>