ಸಾಗರ: ‘ಧರ್ಮನಿಷ್ಠೆ ಇದ್ದಲ್ಲಿ ಮಾತ್ರ ಮನುಷ್ಯನ ಜೀವನ ಸಾರ್ಥಕತೆ ಪಡೆಯುತ್ತದೆ’ ಎಂದು ಶೃಂಗೇರಿ ಶಾರದಾಪೀಠದ ವಿಧುಶೇಖರ ಭಾರತೀ ಶ್ರೀಗಳು ಹೇಳಿದರು.
ಇಲ್ಲಿನ ಹರದೂರು ದುರ್ಗಾಂಬಾ ದೇವಸ್ಥಾನದಲ್ಲಿ ಭಾನುವಾರ ನಡೆದ ಕುಂಭಾಭಿಷೇಕ ಮಹೋತ್ಸವದಲ್ಲಿ ಆಶೀರ್ವಚನ ನೀಡಿದರು.
ಧರ್ಮಶ್ರದ್ಧೆ ಇಲ್ಲದಿದ್ದಲ್ಲಿ ಬದುಕಿನಲ್ಲಿ ನೆಮ್ಮದಿ ಸಾಧ್ಯವಿಲ್ಲ. ಹೊಸದಾಗಿ ದೇವಸ್ಥಾನಗಳನ್ನು ನಿರ್ಮಾಣ ಮಾಡುವ ಜೊತೆಗೆ ಹಳೆಯ ದೇವಸ್ಥಾನಗಳನ್ನು ಪುನರುಜ್ಜೀವನಗೊಳಿಸುವುದೂ ಮುಖ್ಯ ಎಂದರು.
ಮಹಾಗಣಪತಿ, ವೆಂಕಟೇಶ್ವರ, ಹರದೂರು ದುರ್ಗಾಂಬಾ ದೇವಸ್ಥಾನದ ಸಮೀಪದಲ್ಲೇ ಇರುವ ಗಣಪತಿ ಕೆರೆಯ ಅಭಿವೃದ್ಧಿಗೆ ಸರ್ಕಾರ ₹ 1 ಕೋಟಿ ಬಿಡುಗಡೆ ಮಾಡಿದೆ. ಕೆರೆಯ ನೀರನ್ನು ಸ್ವಚ್ಛಗೊಳಿಸಿ ಸೌಂದರ್ಯೀಕರಣ ಮಾಡಲಾಗುವುದು ಎಂದುಶಾಸಕ ಎಚ್.ಹಾಲಪ್ಪ ಹರತಾಳು ತಿಳಿಸಿದರು.
ದೇವಸ್ಥಾನದ ವಿಶ್ವಸ್ಥ ಸಮಿತಿ ಅಧ್ಯಕ್ಷ ಅಶ್ವಿನಿಕುಮಾರ್, ಹೈಕೋರ್ಟ್ ವಕೀಲ ಕೆ. ದಿವಾಕರ್ ಮಾತನಾಡಿದರು. ನಗರಸಭೆ ಅಧ್ಯಕ್ಷೆ ಮಧುರಾ ಶಿವಾನಂದ್, ಉಪಾಧ್ಯಕ್ಷ ವಿ. ಮಹೇಶ್, ಪ್ರಮುಖರಾದ ಎಸ್.ಜಿ. ಶ್ಯಾನಭಾಗ್, ಟಿ.ವಿ.ಪಾಂಡುರಂಗ, ಮ.ಸ. ನಂಜುಂಡಸ್ವಾಮಿ ಇದ್ದರು.