<p><strong>ಶಿವಮೊಗ್ಗ:</strong> ಜಿಲ್ಲೆಯಲ್ಲಿ ಬುಧವಾರ ರಾತ್ರಿ ಮಳೆಗೆ ಶಿವಮೊಗ್ಗ ನಗರದ ತಗ್ಗು ಪ್ರದೇಶದ ಮನೆಗಳಿಗೆ ನೀರು ನುಗ್ಗಿದೆ. ಜನ ಜೀವನ ಅಸ್ತವ್ಯಸ್ತವಾಗಿದೆ.</p>.<p>ಕಳೆದ ನಾಲ್ಕೈದು ದಿನದಿಂದ ಜಿಲ್ಲೆಯಲ್ಲಿ ಅಕಾಲಿಕ ಮಳೆಮುಂದುವರಿದಿದೆ. ಬುಧವಾರ ರಾತ್ರಿ ಸುರಿದ ಬಾರಿ ಮಳೆಗೆ ನಗರದ ಹಲವಡೆ ಚರಂಡಿ ನಿರು ಮನೆಯೊಳಗೆ ನುಗ್ಗಿದೆ. ಜನರು ನಿದ್ರೆ ಬಿಟ್ಟು ನೀರು ಹೊರಗೆ ಹಾಕುತ್ತ ರಾತ್ರಿ ಕಳೆದಿದ್ದಾರೆ. ಹೊಸಮನೆ ಬಡಾವಣೆಯ ಹಲವು ಮನೆಗಳು ಜಲಾವೃತಗೊಂಡಿವೆ.</p>.<p>ಗೃಹಪಯೋಗಿ ವಸ್ತುಗಳು ನೀರಿನಿಂದಾಗಿ ಹಾಳಾಗಿವೆ. ಸ್ಥಳಕ್ಕೆ ಪಾಲಿಕೆಸದಸ್ಯೆ ರೇಖಾ ರಂಗನಾಥರ್ ಭೇಟಿ ನೀಡಿದ್ದರು. ಸ್ಮಾರ್ಟ್ ಸಿಟಿ ಕಾಮಗಾರಿ ಅರ್ಧಕ್ಕೆ ನಿಂತಿರುವ ಕಾರಣ ಚರಂಡಿಯಲ್ಲಿ ನೀರು ಹರಿಯದೇ ಮನೆಗಳಿಗೆ ನುಗ್ಗಿದೆ. ಈ ಸಮಸ್ಯೆಯನ್ನು ಕೂಡಲೇ ಬಗೆಹರಿಸುವಂತೆ ಒತ್ತಾಯಿಸಿದ್ದಾರೆ.</p>.<p><strong>ವಿವಿಧೆಡೆ ಬಾರಿ ಮಳೆ:</strong>ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಭಾರಿ ಮಳೆಯಾಗಿದೆ. ಹೊಸನಗರ, ತೀರ್ಥಹಳ್ಳಿಯ ಹಲವು ಕಡೆ ಭಾರಿ ಮಳೆಯಾಗಿದೆ. ಭಾರಿ ಮಳೆಯಿಂದಾಗಿ ರೈತರು ಸಂಕಷ್ಟಕ್ಕೀಡಾಗಿದ್ದಾರೆ. ಭತ್ತದ ಬೆಳೆ, ಅಡಿಕೆಗೆ ಹಾನಿಯಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿವಮೊಗ್ಗ:</strong> ಜಿಲ್ಲೆಯಲ್ಲಿ ಬುಧವಾರ ರಾತ್ರಿ ಮಳೆಗೆ ಶಿವಮೊಗ್ಗ ನಗರದ ತಗ್ಗು ಪ್ರದೇಶದ ಮನೆಗಳಿಗೆ ನೀರು ನುಗ್ಗಿದೆ. ಜನ ಜೀವನ ಅಸ್ತವ್ಯಸ್ತವಾಗಿದೆ.</p>.<p>ಕಳೆದ ನಾಲ್ಕೈದು ದಿನದಿಂದ ಜಿಲ್ಲೆಯಲ್ಲಿ ಅಕಾಲಿಕ ಮಳೆಮುಂದುವರಿದಿದೆ. ಬುಧವಾರ ರಾತ್ರಿ ಸುರಿದ ಬಾರಿ ಮಳೆಗೆ ನಗರದ ಹಲವಡೆ ಚರಂಡಿ ನಿರು ಮನೆಯೊಳಗೆ ನುಗ್ಗಿದೆ. ಜನರು ನಿದ್ರೆ ಬಿಟ್ಟು ನೀರು ಹೊರಗೆ ಹಾಕುತ್ತ ರಾತ್ರಿ ಕಳೆದಿದ್ದಾರೆ. ಹೊಸಮನೆ ಬಡಾವಣೆಯ ಹಲವು ಮನೆಗಳು ಜಲಾವೃತಗೊಂಡಿವೆ.</p>.<p>ಗೃಹಪಯೋಗಿ ವಸ್ತುಗಳು ನೀರಿನಿಂದಾಗಿ ಹಾಳಾಗಿವೆ. ಸ್ಥಳಕ್ಕೆ ಪಾಲಿಕೆಸದಸ್ಯೆ ರೇಖಾ ರಂಗನಾಥರ್ ಭೇಟಿ ನೀಡಿದ್ದರು. ಸ್ಮಾರ್ಟ್ ಸಿಟಿ ಕಾಮಗಾರಿ ಅರ್ಧಕ್ಕೆ ನಿಂತಿರುವ ಕಾರಣ ಚರಂಡಿಯಲ್ಲಿ ನೀರು ಹರಿಯದೇ ಮನೆಗಳಿಗೆ ನುಗ್ಗಿದೆ. ಈ ಸಮಸ್ಯೆಯನ್ನು ಕೂಡಲೇ ಬಗೆಹರಿಸುವಂತೆ ಒತ್ತಾಯಿಸಿದ್ದಾರೆ.</p>.<p><strong>ವಿವಿಧೆಡೆ ಬಾರಿ ಮಳೆ:</strong>ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಭಾರಿ ಮಳೆಯಾಗಿದೆ. ಹೊಸನಗರ, ತೀರ್ಥಹಳ್ಳಿಯ ಹಲವು ಕಡೆ ಭಾರಿ ಮಳೆಯಾಗಿದೆ. ಭಾರಿ ಮಳೆಯಿಂದಾಗಿ ರೈತರು ಸಂಕಷ್ಟಕ್ಕೀಡಾಗಿದ್ದಾರೆ. ಭತ್ತದ ಬೆಳೆ, ಅಡಿಕೆಗೆ ಹಾನಿಯಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>