ಭದ್ರಾವತಿ: ದೀಪಾವಳಿ ಹಬ್ಬದಲ್ಲಿ ಲಂಬಾಣಿ ಸಮಾಜದ ವಿಶೇಷತೆಗಳಲ್ಲಿ ಒಂದಾದ ಮನೆ ಮನೆಗೆ ದೀಪ ತೋರಿಸುವ ಆಚರಣೆ ತಾಲ್ಲೂಕಿನ ಲಂಬಾಣಿ ತಾಂಡಾಗಳಲ್ಲಿ ಸಂಭ್ರಮದಿಂದ ನಡೆಯಿತು.
ತಾಲ್ಲೂಕಿನ ಸಿರಿಯೂರು ತಾಂಡಾ ಸೇರಿದಂತೆ ಲಂಬಾಣಿ ಸಮಾಜದವರು ವಾಸಿಸುತ್ತಿರುವ ತಾಂಡಾಗಳಲ್ಲಿ ದೀಪಾವಳಿ ಹಬ್ಬದಂದು ಹೆಣ್ಣು ಮಕ್ಕಳು ಮನೆ ಮನೆಗೆ ತೆರಳಿ ದೀಪ ತೋರಿಸಿ ‘ಎಲ್ಲರಿಗೂ ಒಳ್ಳೆಯದಾಗಲಿ’ ಎಂದು ದೇವರಲ್ಲಿ ಪ್ರಾರ್ಥಿಸುವ ಜೊತೆಗೆ ಹಿರಿಯ ಆಶೀರ್ವಾದ ಪಡೆಯುವುದು ವಾಡಿಕೆಯಾಗಿದೆ.
ಸಿರಿಯೂರು ಗ್ರಾಮದ ಮುಖಂಡ ಕೃಷ್ಣನಾಯ್ಕ ನೇತೃತ್ವದಲ್ಲಿ ಗ್ರಾಮದ ಹೆಣ್ಣು ಮಕ್ಕಳು ಮನೆ ಮನೆಗೆ ದೀಪ ತೋರಿಸುವ ಆಚರಣೆ ನಡೆಸಿದರು.