ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಿವಮೊಗ್ಗ: ಕಾದಾಟದಿಂದ ಗಾಯಗೊಂಡಿದ್ದ ಸಿಂಹಿಣಿ ಸಾವು

Last Updated 1 ಫೆಬ್ರುವರಿ 2022, 14:47 IST
ಅಕ್ಷರ ಗಾತ್ರ

ಶಿವಮೊಗ್ಗ: ತ್ಯಾವರೆಕೊಪ್ಪ ಹುಲಿ ಮತ್ತು ಸಿಂಹಧಾಮದಲ್ಲಿ ಮಿಲನಕ್ಕೆ ಬಿಟ್ಟಿದ್ದ ಎರಡು ಸಿಂಹಗಳ ಮಧ್ಯೆ ನಡೆದ ಕಾದಾಟದಲ್ಲಿ ಗಾಯಗೊಂಡಿದ್ದ 11 ವರ್ಷದ ಸಿಂಹಿಣಿ ಮಾನ್ಯ ಮೃತಪಟ್ಟಿದೆ.

‘ಧಾಮದ ಯಶವಂತ ಮತ್ತು ಮಾನ್ಯಾ ಈಚೆಗೆ ಕಾದಾಡಿದ್ದವು. ಎರಡೂ ಸಿಂಹಗಳು ಗಾಯಗೊಂಡಿದ್ದವು. ಎರಡನ್ನೂ ಪ್ರತ್ಯೇಕವಾಗಿ ಇರಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಚಿಕಿತ್ಸೆಗೆ ಸ್ಪಂದಿಸದೇ ಮಾನ್ಯಾ ಸೋಮವಾರ ಮೃತಪಟ್ಟಿದೆ. ಮರಣೋತ್ತರ ಪರೀಕ್ಷೆಯ ನಂತರ ಅಂತಿಮ ಸಂಸ್ಕಾರ ನೆರವೇರಿಸಲಾಯಿತು’ ಎಂದು ಹುಲಿ ಮತ್ತು ಸಿಂಹಧಾಮದ ಕಾರ್ಯನಿರ್ವಾಹಕ ನಿರ್ದೇಶಕ ಮುಕುಂದ್‌ ಚಂದ್‌ ಪ್ರತಿಕ್ರಿಯಿಸಿದರು.

ಸಿಂಹಿಣಿ ಮಾನ್ಯಾಳನ್ನು 2011ರಲ್ಲಿ ತ್ಯಾವರೆಕೊಪ್ಪದ ಸಿಂಹಧಾಮಕ್ಕೆ ತರಲಾಗಿತ್ತು. ಮೈಸೂರು ಮೃಗಾಲಯದಿಂದ ಆರ್ಯ, ಮಾಲಿನಿ ಮತ್ತು ಮಾನ್ಯಾ ಇಲ್ಲಿಗೆ ಬಂದಿದ್ದವು. ತ್ಯಾವರೆಕೊಪ್ಪ ಸಿಂಹಧಾಮದಲ್ಲಿ ಮೂರು ಗಂಡು, ಮೂರು ಹೆಣ್ಣು ಸಿಂಹಗಳು ಇದ್ದವು. ಈಗ ಅವುಗಳ ಸಂಖ್ಯೆ 5ಕ್ಕೆ ಇಳಿದಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT