<p><strong>ತೀರ್ಥಹಳ್ಳಿ:</strong> ಗ್ರಾಮೀಣ ವಿದ್ಯಾರ್ಥಿಗಳ ಭವಿಷ್ಯಕ್ಕಾಗಿ ಕಂಪ್ಯೂಟರ್ ಕಲಿಕೆ ಅತ್ಯಗತ್ಯ. ಉಪಕರಣಗಳನ್ನು ಜೋಪಾನವಾಗಿ ಬಳಕೆ ಮಾಡಿಕೊಂಡು ಅದರ ನಿರ್ವಹಣೆಯನ್ನು ಕಾಲಕಾಲಕ್ಕೆ ಮಾಡಬೇಕು ಎಂದು ಲಯನ್ಸ್ ಕ್ಲಬ್ ಬೆಂಗಳೂರು ಮೆಟ್ರೊ ಅಧ್ಯಕ್ಷ ರಾಮಚಂದ್ರಯ್ಯ ಹೇಳಿದರು.</p>.<p>ಲಯನ್ಸ್ ಕ್ಲಬ್ ಹೊಸನಗರ ಸಹಯೋಗದಲ್ಲಿ ಕಲ್ಕೊಪ್ಪ ತಿಪ್ಪೇಸ್ವಾಮಿ ಕನ್ನಡ ಮಾಧ್ಯಮ ಪ್ರೌಢಶಾಲೆ, ಕನ್ನಂಗಿ ಸರ್ಕಾರಿ ಕನ್ನಡ ಮಾಧ್ಯಮ ಪ್ರೌಢಶಾಲೆ, ಕುಡುಮಲ್ಲಿಗೆ ಸರ್ಕಾರಿ ಕನ್ನಡ ಮಾಧ್ಯಮ ಪ್ರೌಢಶಾಲೆಗಳಿಗೆ ಕಂಪ್ಯೂಟರ್ ವಿತರಣೆ ಮತ್ತು ದಂತ ತಪಾಸಣಾ ಶಿಬಿರ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ಸರ್ಕಾರಿ ಶಾಲಾ ವಿದ್ಯಾರ್ಥಿಗಳ ಬೆಳವಣಿಗೆ ದೃಷ್ಟಿಯಿಂದ ಈಗಾಗಲೇ ಅನೇಕ ಶಾಲೆಗಳಿಗೆ ಕಂಪ್ಯೂಟರ್ ವಿತರಣೆ ಮಾಡಿದ್ದೇವೆ. ಅದನ್ನು ಸುಸ್ಥಿತಿಯಲ್ಲಿ ಇಟ್ಟುಕೊಳ್ಳುವ ಜವಾಬ್ದಾರಿಯನ್ನು ಶಿಕ್ಷಕರು ಮತ್ತು ಶಾಲಾಭಿವೃದ್ಧಿ ಸಮಿತಿ ವಹಿಸಿಕೊಳ್ಳಬೇಕು. ಸದ್ಬಳಕೆ ಆಗುತ್ತಿದ್ದರೆ ಹೆಚ್ಚಿನ ಉಪಕರಣ ನೀಡಲು ಸಿದ್ಧರಿದ್ದೇವೆ’ ಎಂದರು.</p>.<p>ಸುಬ್ಬಯ್ಯ ವೈದ್ಯಕೀಯ ಕಾಲೇಜಿನ ಡಾ.ವಿವೇಕ್ ನೇತೃತ್ವದ ತಂಡದಿಂದ ದಂತ ತಪಾಸಣೆ ನಡೆಯಿತು.</p>.<p>ಧರ್ಮಪ್ಪ, ಬೇಗುವಳ್ಳಿ ಸತೀಶ್, ಸಾಲೇಕೊಪ್ಪ ರಾಮಚಂದ್ರ, ತೂದೂರು ಶಿವಾನಂದ, ಬೇಗುವಳ್ಳಿ ನಾಗರಾಜ್, ಕವಿರಾಜ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತೀರ್ಥಹಳ್ಳಿ:</strong> ಗ್ರಾಮೀಣ ವಿದ್ಯಾರ್ಥಿಗಳ ಭವಿಷ್ಯಕ್ಕಾಗಿ ಕಂಪ್ಯೂಟರ್ ಕಲಿಕೆ ಅತ್ಯಗತ್ಯ. ಉಪಕರಣಗಳನ್ನು ಜೋಪಾನವಾಗಿ ಬಳಕೆ ಮಾಡಿಕೊಂಡು ಅದರ ನಿರ್ವಹಣೆಯನ್ನು ಕಾಲಕಾಲಕ್ಕೆ ಮಾಡಬೇಕು ಎಂದು ಲಯನ್ಸ್ ಕ್ಲಬ್ ಬೆಂಗಳೂರು ಮೆಟ್ರೊ ಅಧ್ಯಕ್ಷ ರಾಮಚಂದ್ರಯ್ಯ ಹೇಳಿದರು.</p>.<p>ಲಯನ್ಸ್ ಕ್ಲಬ್ ಹೊಸನಗರ ಸಹಯೋಗದಲ್ಲಿ ಕಲ್ಕೊಪ್ಪ ತಿಪ್ಪೇಸ್ವಾಮಿ ಕನ್ನಡ ಮಾಧ್ಯಮ ಪ್ರೌಢಶಾಲೆ, ಕನ್ನಂಗಿ ಸರ್ಕಾರಿ ಕನ್ನಡ ಮಾಧ್ಯಮ ಪ್ರೌಢಶಾಲೆ, ಕುಡುಮಲ್ಲಿಗೆ ಸರ್ಕಾರಿ ಕನ್ನಡ ಮಾಧ್ಯಮ ಪ್ರೌಢಶಾಲೆಗಳಿಗೆ ಕಂಪ್ಯೂಟರ್ ವಿತರಣೆ ಮತ್ತು ದಂತ ತಪಾಸಣಾ ಶಿಬಿರ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ಸರ್ಕಾರಿ ಶಾಲಾ ವಿದ್ಯಾರ್ಥಿಗಳ ಬೆಳವಣಿಗೆ ದೃಷ್ಟಿಯಿಂದ ಈಗಾಗಲೇ ಅನೇಕ ಶಾಲೆಗಳಿಗೆ ಕಂಪ್ಯೂಟರ್ ವಿತರಣೆ ಮಾಡಿದ್ದೇವೆ. ಅದನ್ನು ಸುಸ್ಥಿತಿಯಲ್ಲಿ ಇಟ್ಟುಕೊಳ್ಳುವ ಜವಾಬ್ದಾರಿಯನ್ನು ಶಿಕ್ಷಕರು ಮತ್ತು ಶಾಲಾಭಿವೃದ್ಧಿ ಸಮಿತಿ ವಹಿಸಿಕೊಳ್ಳಬೇಕು. ಸದ್ಬಳಕೆ ಆಗುತ್ತಿದ್ದರೆ ಹೆಚ್ಚಿನ ಉಪಕರಣ ನೀಡಲು ಸಿದ್ಧರಿದ್ದೇವೆ’ ಎಂದರು.</p>.<p>ಸುಬ್ಬಯ್ಯ ವೈದ್ಯಕೀಯ ಕಾಲೇಜಿನ ಡಾ.ವಿವೇಕ್ ನೇತೃತ್ವದ ತಂಡದಿಂದ ದಂತ ತಪಾಸಣೆ ನಡೆಯಿತು.</p>.<p>ಧರ್ಮಪ್ಪ, ಬೇಗುವಳ್ಳಿ ಸತೀಶ್, ಸಾಲೇಕೊಪ್ಪ ರಾಮಚಂದ್ರ, ತೂದೂರು ಶಿವಾನಂದ, ಬೇಗುವಳ್ಳಿ ನಾಗರಾಜ್, ಕವಿರಾಜ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>