<p>ಭದ್ರಾವತಿ: ನಗರದ ಲಯನ್ಸ್ ಸಂಸ್ಥೆಯು 57 ವರ್ಷಗಳಿಂದ ನಿಸ್ವಾರ್ಥವಾಗಿ ಉತ್ತಮ ಕಾರ್ಯಗಳನ್ನು ಮಾಡುವ ಮೂಲಕ ಜಿಲ್ಲೆಯಲ್ಲಿ ಮಾದರಿ ಕ್ಲಬ್ ಆಗಿದೆ ಎಂದು ಸಂಸ್ಥೆಯ ಮಾಜಿ ಜಿಲ್ಲಾ ರಾಜ್ಯಪಾಲ ಎನ್.ಎಂ. ಹೆಗಡೆ ತಿಳಿಸಿದರು.</p>.<p>ನಗರದ ಲಯನ್ಸ್ ಕ್ಲಬ್ ಏರ್ಪಡಿಸಿದ್ದ 2023-24ನೇ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭದಲ್ಲಿ ಭಾಗವಹಿಸಿ, ಪದಾಧಿಕಾರಿಗಳಿಗೆ ಪ್ರಮಾಣ ವಚನ ಬೋಧಿಸಿ ಅವರು ಮಾತನಾಡಿದರು.</p>.<p>ಸಮಾಜದಲ್ಲಿನ ಪ್ರತಿಯೊಬ್ಬರೂ ಉತ್ತಮ ವ್ಯಕ್ತಿತ್ವ ಬೆಳೆಸಿಕೊಳ್ಳಲು ಲಯನ್ಸ್ ಕ್ಲಬ್ ವೇದಿಕೆಯಾಗಿದೆ. ಆರೋಗ್ಯ ಉಚಿತ ತಪಾಸಣೆ, ದಂತ ಚಿಕಿತ್ಸೆ ತಪಾಸಣಾ ಶಿಬಿರ, ನೇತ್ರ ಉಚಿತ ಶಸ್ತ್ರ ಚಿಕಿತ್ಸೆ, ಶಾಲಾ-ಕಾಲೇಜುಗಳಿಗೆ ಅಗತ್ಯ ಪರಿಕರಗಳನ್ನು ನೀಡುವುದು, ಅಂಗವಿಕಲರ ಶಾಲೆಗಳ ಅಭಿವೃದ್ಧಿಗೆ ಸಹಾಯ, ಬಡ ಮಹಿಳೆಯರಿಗೆ ಉಚಿತವಾಗಿ ಹೊಲಿಗೆ ಯಂತ್ರಗಳನ್ನು ನೀಡುವ ಮೂಲಕ ಅವರ ಸ್ವಾವಲಂಬಿ ಬದುಕಿಗೆ ಸಂಸ್ಥೆಯು ಬೆಳಕಾಗುತ್ತಿದೆ ಎಂದರು.</p>.<p>ರವಿರಾಜ್ ನಾಯಕ್, ದೇವರಾಜ್, ಚಂದ್ರಶೇಖರ್, ರಮೇಶ್, ಜಿ.ಪಿ. ದರ್ಶನ್ ಸೇರಿ ಇತರರು ವೇದಿಕೆಯಲ್ಲಿ ಉಪಸ್ಥಿತರಿದ್ದರು.</p>.<p>ನಗರದ ರೈಲು ನಿಲ್ದಾಣದ ಎದುರು ₹ 3.5 ಲಕ್ಷ ವೆಚ್ಚದಲ್ಲಿ ಕಂಬದ ಗಡಿಯಾರ (ಟವರ್ ಕ್ಲಾಕ್) ನಿರ್ಮಾಣಕ್ಕೆ ಹಾಗೂ ಲಯನ್ಸ್ ಕ್ಲಬ್ ವಿವಿಧ ಸೇವಾ ಚಟುವಟಿಕೆಗೆ ಧನಸಹಾಯ ಮಾಡಿದ ದಾನಿಗಳನ್ನು ಸನ್ಮಾನಿಸಲಾಯಿತು.</p>.<p>ದಿವಂಗತ ಕೆ.ಸಿ. ವೀರಭದ್ರ ಸ್ಮರಣಾರ್ಥ ಏರ್ಪಡಿಸಿದ್ದ ಜಿಲ್ಲಾ ಕ್ರೀಡಾಕೂಟದಲ್ಲಿ ವಿಜೇತರಾದವರಿಗೆ ಬಹುಮಾನಗಳನ್ನು ವಿತರಿಸಲಾಯಿತು.</p>.<p>ನಿಖಿತಾ ಪ್ರಾರ್ಥನೆ ಮಾಡಿದರು. ಎ.ಎನ್. ಕಾರ್ತಿಕ್ ಅಧ್ಯಕ್ಷತೆ ವಹಿಸಿ ಸ್ವಾಗತಿಸಿದರು. ನಾಗರಾಜ ಅತಿಥಿಗಳ ಪರಿಚಯ ಮಾಡಿದರು ಎಸ್.ಜಿ. ಶಂಕರಮೂರ್ತಿ ಕಾರ್ಯಕ್ರಮ ನಿರೂಪಿಸಿದರು. ದಿವಾಕರ ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಭದ್ರಾವತಿ: ನಗರದ ಲಯನ್ಸ್ ಸಂಸ್ಥೆಯು 57 ವರ್ಷಗಳಿಂದ ನಿಸ್ವಾರ್ಥವಾಗಿ ಉತ್ತಮ ಕಾರ್ಯಗಳನ್ನು ಮಾಡುವ ಮೂಲಕ ಜಿಲ್ಲೆಯಲ್ಲಿ ಮಾದರಿ ಕ್ಲಬ್ ಆಗಿದೆ ಎಂದು ಸಂಸ್ಥೆಯ ಮಾಜಿ ಜಿಲ್ಲಾ ರಾಜ್ಯಪಾಲ ಎನ್.ಎಂ. ಹೆಗಡೆ ತಿಳಿಸಿದರು.</p>.<p>ನಗರದ ಲಯನ್ಸ್ ಕ್ಲಬ್ ಏರ್ಪಡಿಸಿದ್ದ 2023-24ನೇ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭದಲ್ಲಿ ಭಾಗವಹಿಸಿ, ಪದಾಧಿಕಾರಿಗಳಿಗೆ ಪ್ರಮಾಣ ವಚನ ಬೋಧಿಸಿ ಅವರು ಮಾತನಾಡಿದರು.</p>.<p>ಸಮಾಜದಲ್ಲಿನ ಪ್ರತಿಯೊಬ್ಬರೂ ಉತ್ತಮ ವ್ಯಕ್ತಿತ್ವ ಬೆಳೆಸಿಕೊಳ್ಳಲು ಲಯನ್ಸ್ ಕ್ಲಬ್ ವೇದಿಕೆಯಾಗಿದೆ. ಆರೋಗ್ಯ ಉಚಿತ ತಪಾಸಣೆ, ದಂತ ಚಿಕಿತ್ಸೆ ತಪಾಸಣಾ ಶಿಬಿರ, ನೇತ್ರ ಉಚಿತ ಶಸ್ತ್ರ ಚಿಕಿತ್ಸೆ, ಶಾಲಾ-ಕಾಲೇಜುಗಳಿಗೆ ಅಗತ್ಯ ಪರಿಕರಗಳನ್ನು ನೀಡುವುದು, ಅಂಗವಿಕಲರ ಶಾಲೆಗಳ ಅಭಿವೃದ್ಧಿಗೆ ಸಹಾಯ, ಬಡ ಮಹಿಳೆಯರಿಗೆ ಉಚಿತವಾಗಿ ಹೊಲಿಗೆ ಯಂತ್ರಗಳನ್ನು ನೀಡುವ ಮೂಲಕ ಅವರ ಸ್ವಾವಲಂಬಿ ಬದುಕಿಗೆ ಸಂಸ್ಥೆಯು ಬೆಳಕಾಗುತ್ತಿದೆ ಎಂದರು.</p>.<p>ರವಿರಾಜ್ ನಾಯಕ್, ದೇವರಾಜ್, ಚಂದ್ರಶೇಖರ್, ರಮೇಶ್, ಜಿ.ಪಿ. ದರ್ಶನ್ ಸೇರಿ ಇತರರು ವೇದಿಕೆಯಲ್ಲಿ ಉಪಸ್ಥಿತರಿದ್ದರು.</p>.<p>ನಗರದ ರೈಲು ನಿಲ್ದಾಣದ ಎದುರು ₹ 3.5 ಲಕ್ಷ ವೆಚ್ಚದಲ್ಲಿ ಕಂಬದ ಗಡಿಯಾರ (ಟವರ್ ಕ್ಲಾಕ್) ನಿರ್ಮಾಣಕ್ಕೆ ಹಾಗೂ ಲಯನ್ಸ್ ಕ್ಲಬ್ ವಿವಿಧ ಸೇವಾ ಚಟುವಟಿಕೆಗೆ ಧನಸಹಾಯ ಮಾಡಿದ ದಾನಿಗಳನ್ನು ಸನ್ಮಾನಿಸಲಾಯಿತು.</p>.<p>ದಿವಂಗತ ಕೆ.ಸಿ. ವೀರಭದ್ರ ಸ್ಮರಣಾರ್ಥ ಏರ್ಪಡಿಸಿದ್ದ ಜಿಲ್ಲಾ ಕ್ರೀಡಾಕೂಟದಲ್ಲಿ ವಿಜೇತರಾದವರಿಗೆ ಬಹುಮಾನಗಳನ್ನು ವಿತರಿಸಲಾಯಿತು.</p>.<p>ನಿಖಿತಾ ಪ್ರಾರ್ಥನೆ ಮಾಡಿದರು. ಎ.ಎನ್. ಕಾರ್ತಿಕ್ ಅಧ್ಯಕ್ಷತೆ ವಹಿಸಿ ಸ್ವಾಗತಿಸಿದರು. ನಾಗರಾಜ ಅತಿಥಿಗಳ ಪರಿಚಯ ಮಾಡಿದರು ಎಸ್.ಜಿ. ಶಂಕರಮೂರ್ತಿ ಕಾರ್ಯಕ್ರಮ ನಿರೂಪಿಸಿದರು. ದಿವಾಕರ ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>