<p><strong>ಸಾಗರ:</strong> ಜನರ ಮಾತುಗಳ ಮೇಲೆ ನಿಯಂತ್ರಣ ಹೇರುವ ಸ್ಥಿತಿ ಇರುವುದರಿಂದ ಸಾಹಿತ್ಯದಲ್ಲಿ ಭಾಷೆಯ ಬಳಕೆಯ ಕುರಿತು ಎಚ್ಚರ ವಹಿಸಲಾಗುತ್ತಿದ್ದು, ಈ ಕಾರಣದಿಂದ ಸಾಹಿತ್ಯ ಭಾಷೆ ನಲುಗುತ್ತಿದೆ ಎಂದು ಲೇಖಕ ಜಿ.ಎಸ್. ಭಟ್ ಅಭಿಪ್ರಾಯಪಟ್ಟರು.</p>.<p>ಇಲ್ಲಿನ ಪವಿತ್ರ ಸಭಾಂಗಣದಲ್ಲಿ ಪರಸ್ಪರ ಸಾಹಿತ್ಯ ವೇದಿಕೆ, ಕನ್ನಡ ಪುಸ್ತಕ ಪ್ರಾಧಿಕಾರ, ಸರ್ಕಾರಿ ಪದವಿಪೂರ್ವ ಕಾಲೇಜು ಸೋಮವಾರ ಏರ್ಪಡಿಸಿದ್ದ ‘ನನ್ನ ಮೆಚ್ಚಿನ ಪುಸ್ತಕ ಹಾಗೂ ಉಪನ್ಯಾಸ’ ಕಾರ್ಯಕ್ರಮದಲ್ಲಿ ‘ಸಾಹಿತ್ಯದ ಭಾಷೆ’ ಕುರಿತು ಮಾತನಾಡಿದರು.</p>.<p>ಸಾಹಿತ್ಯದ ಭಾಷೆಯ ಮೇಲೆ ಕೂಡ ಪ್ರಭುತ್ವ ಪರೋಕ್ಷವಾಗಿ ನಿಯಂತ್ರಣ ಹೇರುವ ಪ್ರವೃತ್ತಿ ಹೆಚ್ಚುತ್ತಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ. ಇದರಿಂದ ಲೇಖಕ ತನ್ನ ಅಭಿವ್ಯಕ್ತಿಯನ್ನು ಸಮರ್ಥವಾಗಿ ನಿರೂಪಿಸಲು ಸಾಧ್ಯವಾಗದು ಎಂದರು.</p>.<p>ಆಡು ಭಾಷೆ ಕೂಡ ಹೇಗೆ ಸಾಹಿತ್ಯದ ಭಾಷೆಯಾಗಿ ಪರಿವರ್ತನೆಯಾಗಲು ಸಾಧ್ಯ ಎಂಬ ವಿಸ್ಮಯವನ್ನು ವಿದ್ಯಾರ್ಥಿಗಳು ಸೂಕ್ಷ್ಮವಾಗಿ ಗ್ರಹಿಸಬೇಕು. ಭಾಷಾ ಪ್ರಯೋಗದಲ್ಲಿ ಸಹಜತೆಯನ್ನು ಕಾಪಾಡಿಕೊಳ್ಳುವ ಸವಾಲುಗಳನ್ನು ಕನ್ನಡದ ಲೇಖಕರು ಯಾವ ರೀತಿ ಎದುರಿಸಿದ್ದಾರೆ ಎಂಬುದನ್ನು ವಿದ್ಯಾರ್ಥಿಗಳು ಅಧ್ಯಯನ ಮಾಡಬೇಕು ಎಂದು ಕಿವಿಮಾತು ಹೇಳಿದರು.</p>.<p>ಸೆಮಿಸ್ಟರ್ ಪದ್ದತಿಯ ಶಿಕ್ಷಣ ಕ್ರಮ ಜಾರಿಗೆ ಬಂದ ನಂತರ ವಿದ್ಯಾರ್ಥಿಗಳಲ್ಲಿನ ಸೃಜನಶೀಲತೆಯ ಅಭಿವ್ಯಕ್ತಿಗೆ ತೊಡಕಾಗುತ್ತಿದೆ. ಸಾಹಿತ್ಯ, ಸಾಂಸ್ಕೃತಿಕ ಕ್ಷೇತ್ರದಲ್ಲಿ ಈ ಹಿಂದಿನಂತೆ ವಿದ್ಯಾರ್ಥಿಗಳು ತೊಡಗಿಸಿಕೊಳ್ಳಲು ಯಾಕೆ ಸಾಧ್ಯವಾಗುತ್ತಿಲ್ಲ ಎಂಬುದನ್ನು ಶಿಕ್ಷಣ ತಜ್ಞರು ಗುರುತಿಸಿ ಅದಕ್ಕೆ ಪರಿಹಾರ ಕಂಡುಕೊಳ್ಳಬೇಕಿದೆ ಎಂದು ಲೇಖಕ ಲಕ್ಷ್ಮಣ ಕೊಡಸೆ ಎಂದರು.</p>.<p>ಪರಸ್ಪರ ಸಾಹಿತ್ಯ ವೇದಿಕೆ ಅಧ್ಯಕ್ಷ ಸರ್ಫ್ರಾಜ್ ಚಂದ್ರಗುತ್ತಿ ಅಧ್ಯಕ್ಷತೆ ವಹಿಸಿದ್ದರು. ಕುವೆಂಪು ಅವರ ಬೆರಳ್ಗೆ ಕೊರಳ್ ಕುರಿತು ಯಶವಂತ ಕೆ. , ಯು.ಆರ್.ಅನಂತಮೂರ್ತಿ ಅವರ ಸಂಸ್ಕಾರ ಕುರಿತು ಕವನ ಎಸ್. ನಾ.ಡಿಸೋಜ ಅವರ ಕುಂಜಾಲು ಕಣಿವೆಯ ಕೆಂಪು ಹೂ ಕುರಿತು ಕವನ ಮಾತನಾಡಿದರು.</p>.<p>ಸರ್ಕಾರಿ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಸತ್ಯನಾರಾಯಣ ಕೆ.ಸಿ. ಕನ್ನಡದಲ್ಲಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಅಭಿನಂದನಾ ಪತ್ರ ವಿತರಿಸಿದರು. ಕೆ.ಎಸ್.ದೇವೇಂದ್ರ ಸ್ವಾಗತಿಸಿದರು. ಹರೀಶ್ ನಿರೂಪಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸಾಗರ:</strong> ಜನರ ಮಾತುಗಳ ಮೇಲೆ ನಿಯಂತ್ರಣ ಹೇರುವ ಸ್ಥಿತಿ ಇರುವುದರಿಂದ ಸಾಹಿತ್ಯದಲ್ಲಿ ಭಾಷೆಯ ಬಳಕೆಯ ಕುರಿತು ಎಚ್ಚರ ವಹಿಸಲಾಗುತ್ತಿದ್ದು, ಈ ಕಾರಣದಿಂದ ಸಾಹಿತ್ಯ ಭಾಷೆ ನಲುಗುತ್ತಿದೆ ಎಂದು ಲೇಖಕ ಜಿ.ಎಸ್. ಭಟ್ ಅಭಿಪ್ರಾಯಪಟ್ಟರು.</p>.<p>ಇಲ್ಲಿನ ಪವಿತ್ರ ಸಭಾಂಗಣದಲ್ಲಿ ಪರಸ್ಪರ ಸಾಹಿತ್ಯ ವೇದಿಕೆ, ಕನ್ನಡ ಪುಸ್ತಕ ಪ್ರಾಧಿಕಾರ, ಸರ್ಕಾರಿ ಪದವಿಪೂರ್ವ ಕಾಲೇಜು ಸೋಮವಾರ ಏರ್ಪಡಿಸಿದ್ದ ‘ನನ್ನ ಮೆಚ್ಚಿನ ಪುಸ್ತಕ ಹಾಗೂ ಉಪನ್ಯಾಸ’ ಕಾರ್ಯಕ್ರಮದಲ್ಲಿ ‘ಸಾಹಿತ್ಯದ ಭಾಷೆ’ ಕುರಿತು ಮಾತನಾಡಿದರು.</p>.<p>ಸಾಹಿತ್ಯದ ಭಾಷೆಯ ಮೇಲೆ ಕೂಡ ಪ್ರಭುತ್ವ ಪರೋಕ್ಷವಾಗಿ ನಿಯಂತ್ರಣ ಹೇರುವ ಪ್ರವೃತ್ತಿ ಹೆಚ್ಚುತ್ತಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ. ಇದರಿಂದ ಲೇಖಕ ತನ್ನ ಅಭಿವ್ಯಕ್ತಿಯನ್ನು ಸಮರ್ಥವಾಗಿ ನಿರೂಪಿಸಲು ಸಾಧ್ಯವಾಗದು ಎಂದರು.</p>.<p>ಆಡು ಭಾಷೆ ಕೂಡ ಹೇಗೆ ಸಾಹಿತ್ಯದ ಭಾಷೆಯಾಗಿ ಪರಿವರ್ತನೆಯಾಗಲು ಸಾಧ್ಯ ಎಂಬ ವಿಸ್ಮಯವನ್ನು ವಿದ್ಯಾರ್ಥಿಗಳು ಸೂಕ್ಷ್ಮವಾಗಿ ಗ್ರಹಿಸಬೇಕು. ಭಾಷಾ ಪ್ರಯೋಗದಲ್ಲಿ ಸಹಜತೆಯನ್ನು ಕಾಪಾಡಿಕೊಳ್ಳುವ ಸವಾಲುಗಳನ್ನು ಕನ್ನಡದ ಲೇಖಕರು ಯಾವ ರೀತಿ ಎದುರಿಸಿದ್ದಾರೆ ಎಂಬುದನ್ನು ವಿದ್ಯಾರ್ಥಿಗಳು ಅಧ್ಯಯನ ಮಾಡಬೇಕು ಎಂದು ಕಿವಿಮಾತು ಹೇಳಿದರು.</p>.<p>ಸೆಮಿಸ್ಟರ್ ಪದ್ದತಿಯ ಶಿಕ್ಷಣ ಕ್ರಮ ಜಾರಿಗೆ ಬಂದ ನಂತರ ವಿದ್ಯಾರ್ಥಿಗಳಲ್ಲಿನ ಸೃಜನಶೀಲತೆಯ ಅಭಿವ್ಯಕ್ತಿಗೆ ತೊಡಕಾಗುತ್ತಿದೆ. ಸಾಹಿತ್ಯ, ಸಾಂಸ್ಕೃತಿಕ ಕ್ಷೇತ್ರದಲ್ಲಿ ಈ ಹಿಂದಿನಂತೆ ವಿದ್ಯಾರ್ಥಿಗಳು ತೊಡಗಿಸಿಕೊಳ್ಳಲು ಯಾಕೆ ಸಾಧ್ಯವಾಗುತ್ತಿಲ್ಲ ಎಂಬುದನ್ನು ಶಿಕ್ಷಣ ತಜ್ಞರು ಗುರುತಿಸಿ ಅದಕ್ಕೆ ಪರಿಹಾರ ಕಂಡುಕೊಳ್ಳಬೇಕಿದೆ ಎಂದು ಲೇಖಕ ಲಕ್ಷ್ಮಣ ಕೊಡಸೆ ಎಂದರು.</p>.<p>ಪರಸ್ಪರ ಸಾಹಿತ್ಯ ವೇದಿಕೆ ಅಧ್ಯಕ್ಷ ಸರ್ಫ್ರಾಜ್ ಚಂದ್ರಗುತ್ತಿ ಅಧ್ಯಕ್ಷತೆ ವಹಿಸಿದ್ದರು. ಕುವೆಂಪು ಅವರ ಬೆರಳ್ಗೆ ಕೊರಳ್ ಕುರಿತು ಯಶವಂತ ಕೆ. , ಯು.ಆರ್.ಅನಂತಮೂರ್ತಿ ಅವರ ಸಂಸ್ಕಾರ ಕುರಿತು ಕವನ ಎಸ್. ನಾ.ಡಿಸೋಜ ಅವರ ಕುಂಜಾಲು ಕಣಿವೆಯ ಕೆಂಪು ಹೂ ಕುರಿತು ಕವನ ಮಾತನಾಡಿದರು.</p>.<p>ಸರ್ಕಾರಿ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಸತ್ಯನಾರಾಯಣ ಕೆ.ಸಿ. ಕನ್ನಡದಲ್ಲಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಅಭಿನಂದನಾ ಪತ್ರ ವಿತರಿಸಿದರು. ಕೆ.ಎಸ್.ದೇವೇಂದ್ರ ಸ್ವಾಗತಿಸಿದರು. ಹರೀಶ್ ನಿರೂಪಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>