ತೀರ್ಥಹಳ್ಳಿ: ಸುಬ್ರಮಣ್ಯ ಷಷ್ಠಿ ಅಂಗವಾಗಿ ಗೃಹ ಸಚಿವರ ಸ್ವಕ್ಷೇತ್ರವಾದ ತಾಲ್ಲೂಕಿನ ಅರಳಸುರುಳಿ ಗ್ರಾಮದಲ್ಲಿ ಕೋವಿಡ್ ಲಾಕ್ಡೌನ್ ನಿಯಮ ಉಲ್ಲಂಘಿಸಿ ಶನಿವಾರ ಜಾತ್ರೆ ನಡೆಯಿತು.
ಬೆಳಿಗ್ಗೆಯಿಂದ ನಡೆದ ಜಾತ್ರಾ ಮಹೋತ್ಸವದಲ್ಲಿ ನೂರಾರು ಭಕ್ತಾದಿಗಳು ಕೋವಿಡ್ ಮುಂಜಾಗ್ರತಾ ಕ್ರಮ, ಅಂತರ ಕಾಯ್ದುಕೊಳ್ಳದೇ ಭಾಗವಹಿಸಿದ್ದರು. ವಿಷಯ ತಿಳಿದ ಪೊಲೀಸರು ಮಧ್ಯಾಹ್ನ ಮೂರೂವರೆ ಸುಮಾರಿಗೆ ಜಾತ್ರೆಯನ್ನು ಬಂದ್ ಮಾಡಿಸಿದರು.
‘ಅರಳಸುರಳಿ ಗ್ರಾಮ ಪಂಚಾಯಿತಿ ಅಧಿಕಾರಿಗಳು ಕೋವಿಡ್ ನಿಯಮ ಉಲ್ಲಂಘಿಸಿ ಜಾತ್ರಾ ಮಹೋತ್ಸವಕ್ಕೆ ಸಹಕಾರ ನೀಡಿದೆ. ರಾಜ್ಯ ಸರ್ಕಾರ ಕೊರೋನಾ ನಿಯಮ ಗಾಳಿಗೆ ತೂರಿ ಜಾಣ ಕುರುಡು ಪ್ರದರ್ಶಿಸಿದ್ದಾರೆ. ರಾಜ್ಯದ್ಯಂತ ಕಾನೂನು ಸುವ್ಯವಸ್ಥೆ ಕಾಪಾಡುವ ಗೃಹ ಸಚಿವರ ಸ್ವಕ್ಷೇತ್ರದಲ್ಲಿ ಕಾನೂನು ಪಾಲನೆ ಆಗಿಲ್ಲ’ ಎಂಬ ಆರೋಪ ಕೇಳಿ ಬರುತ್ತಿದೆ.