<p><strong>ಶಿವಮೊಗ್ಗ</strong>: ಲೋಕ ಅದಾಲತ್ನಿಂದ ಕಕ್ಷಿದಾರರಿಗೆ ಸಾಕಷ್ಟು ಅನುಕೂಲಗಳಿವೆ. ರಾಜಿಸಂಧಾನದ ಮೂಲಕವ್ಯಾಜ್ಯಗಳನ್ನು ಬಗೆಹರಿಸಿಕೊಳ್ಳುವುದರಿಂದ ಹಣ ಮತ್ತು ಸಮಯ ಎರಡೂ ಉಳಿತಾಯವಾಗುತ್ತದೆ ಎಂದು ಶಿವಮೊಗ್ಗದ ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶ ಮುಸ್ತಾಫಾ ಹುಸೇನ್ ಹೇಳಿದರು.</p>.<p>ನಗರದ ಜಿಲ್ಲಾ ನ್ಯಾಯಾಲಯದಲ್ಲಿ ಶನಿವಾರ ನಡೆದ ರಾಷ್ಟ್ರೀಯ ಲೋಕ ಅದಾಲತ್ ಕಾರ್ಯಕ್ರಮದಲ್ಲಿ ಫಲಾನುಭವಿಗಳಿಗೆ ಚೆಕ್ ವಿತರಿಸಿ ಅವರು ಮಾತನಾಡಿದರು.</p>.<p>‘ಶಿವಮೊಗ್ಗ ಜಿಲ್ಲೆಯಲ್ಲಿ ಲೋಕ ಅದಾಲತ್ನಲ್ಲಿ ರಾಜಿಸಂಧಾನದ ಮೂಲಕ 10,070 ಪ್ರಕರಣಗಳ ವಿಲೇವಾರಿ ಮಾಡಲಾಗುತ್ತಿದೆ. ಇನ್ನೂ ಹೆಚ್ಚು ಪ್ರಕರಣ ವಿಲೇವಾರಿಯಾಗುವ ಸಾಧ್ಯತೆ ಇದೆ. ಶಿವಮೊಗ್ಗ–ತೀರ್ಥಹಳ್ಳಿ ಹೆದ್ದಾರಿಯಲ್ಲಿ ಅಪಘಾತಕ್ಕೀಡಾಗಿದ್ದ ಶರತ್ ಎಂಬ ಯುವಕನ ಕುಟುಂಬಕ್ಕೆ ₹28 ಲಕ್ಷ ಪರಿಹಾರದ ಚೆಕ್ ನೀಡುತ್ತಿದ್ದೇವೆ. 2021ರ ಫೆಬ್ರುವರಿ 20ರಂದು ನಡೆದ ಈ ಅಪಘಾತ ಪ್ರಕರಣಕ್ಕೆ ಲೋಕ ಅದಾಲತ್ನಲ್ಲಿ 1 ತಿಂಗಳೊಳಗೆ ರಾಜಿಸಂಧಾನದ ಮೂಲಕ ಪರಿಹಾರ ಸಿಕ್ಕಿದೆ. ಇದರಿಂದ ಕುಟುಂಬಕ್ಕೂ ಅನುಕೂಲವಾಗಿದೆ. ಕಡಿಮೆ ಅವಧಿಯಲ್ಲಿ ತೀರ್ಮಾನವಾಗುವುದು ಅದಾಲತ್ ವಿಶೇಷತೆ’ ಎಂದು ಹೇಳಿದರು.</p>.<p>ಜಿಲ್ಲೆಯಲ್ಲಿ 6 ಸಾವಿರಕ್ಕೂ ಅಧಿಕ ಚೆಕ್ಬೌನ್ಸ್ ಪ್ರಕರಣಗಳು ಇತ್ಯರ್ಥಕ್ಕೆ ಬಾಕಿ ಇದ್ದು, ಇಂದಿನ ಅದಾಲತ್ನಲ್ಲಿ 175 ಪ್ರಕರಣಗಳ ಇತ್ಯರ್ಥವಾಗಿದೆ.ಇದರಿಂದ ಎರಡೂ ಕಡೆಯವರಿಗೆ ಮಾನಸಿಕ, ಆರ್ಥಿಕ ಕಿರಿಕಿರಿ ಇಲ್ಲ.ಅಲ್ಲದೇ, ಕೌಟುಂಬಿಕ ನ್ಯಾಯಾಲಯದಲ್ಲಿ ಬಾಕಿ ಉಳಿದಿರುವ ಪ್ರಕರಣಗಳನ್ನು ಸಂಧಾನ ಮಾಡಿಸಿ ದಂಪತಿಯನ್ನು ಒಂದಾಗಿಸುವ ಪ್ರಕ್ರಿಯೆ ನಡೆದಿವೆ ಎಂದರು.</p>.<p>ವಕೀಲರ ಸಂಘದ ಅಧ್ಯಕ್ಷ ಶಿವಮೂರ್ತಿ, ‘4 -5 ವರ್ಷಗಳು ನ್ಯಾಯಾಲಯಕ್ಕೆ ಓಡಾಡುವ ಪ್ರಕರಣಗಳು ಅದಾಲತ್ನಲ್ಲಿ ತೀರ್ಮಾನ ಆಗಿವೆ. ಪ್ರಕರಣಗಳನ್ನು ಇಲ್ಲಿ ಇತ್ಯರ್ಥಪಡಿಸಿಕೊಳ್ಳುವುದರಿಂದ ವಕೀಲರಿಗೂ ಶುಲ್ಕ ನೀಡುವ ಅಗತ್ಯ ಇಲ್ಲ. ಕಕ್ಷಿದಾರರಿಗೆ ಹೆಚ್ಚಿನ ಅನುಕೂಲ ಸಿಗಲಿದೆ’ ಎಂದರು.</p>.<p>ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ರಾಜಣ್ಣ ಸಂಕಣ್ಣವರ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿವಮೊಗ್ಗ</strong>: ಲೋಕ ಅದಾಲತ್ನಿಂದ ಕಕ್ಷಿದಾರರಿಗೆ ಸಾಕಷ್ಟು ಅನುಕೂಲಗಳಿವೆ. ರಾಜಿಸಂಧಾನದ ಮೂಲಕವ್ಯಾಜ್ಯಗಳನ್ನು ಬಗೆಹರಿಸಿಕೊಳ್ಳುವುದರಿಂದ ಹಣ ಮತ್ತು ಸಮಯ ಎರಡೂ ಉಳಿತಾಯವಾಗುತ್ತದೆ ಎಂದು ಶಿವಮೊಗ್ಗದ ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶ ಮುಸ್ತಾಫಾ ಹುಸೇನ್ ಹೇಳಿದರು.</p>.<p>ನಗರದ ಜಿಲ್ಲಾ ನ್ಯಾಯಾಲಯದಲ್ಲಿ ಶನಿವಾರ ನಡೆದ ರಾಷ್ಟ್ರೀಯ ಲೋಕ ಅದಾಲತ್ ಕಾರ್ಯಕ್ರಮದಲ್ಲಿ ಫಲಾನುಭವಿಗಳಿಗೆ ಚೆಕ್ ವಿತರಿಸಿ ಅವರು ಮಾತನಾಡಿದರು.</p>.<p>‘ಶಿವಮೊಗ್ಗ ಜಿಲ್ಲೆಯಲ್ಲಿ ಲೋಕ ಅದಾಲತ್ನಲ್ಲಿ ರಾಜಿಸಂಧಾನದ ಮೂಲಕ 10,070 ಪ್ರಕರಣಗಳ ವಿಲೇವಾರಿ ಮಾಡಲಾಗುತ್ತಿದೆ. ಇನ್ನೂ ಹೆಚ್ಚು ಪ್ರಕರಣ ವಿಲೇವಾರಿಯಾಗುವ ಸಾಧ್ಯತೆ ಇದೆ. ಶಿವಮೊಗ್ಗ–ತೀರ್ಥಹಳ್ಳಿ ಹೆದ್ದಾರಿಯಲ್ಲಿ ಅಪಘಾತಕ್ಕೀಡಾಗಿದ್ದ ಶರತ್ ಎಂಬ ಯುವಕನ ಕುಟುಂಬಕ್ಕೆ ₹28 ಲಕ್ಷ ಪರಿಹಾರದ ಚೆಕ್ ನೀಡುತ್ತಿದ್ದೇವೆ. 2021ರ ಫೆಬ್ರುವರಿ 20ರಂದು ನಡೆದ ಈ ಅಪಘಾತ ಪ್ರಕರಣಕ್ಕೆ ಲೋಕ ಅದಾಲತ್ನಲ್ಲಿ 1 ತಿಂಗಳೊಳಗೆ ರಾಜಿಸಂಧಾನದ ಮೂಲಕ ಪರಿಹಾರ ಸಿಕ್ಕಿದೆ. ಇದರಿಂದ ಕುಟುಂಬಕ್ಕೂ ಅನುಕೂಲವಾಗಿದೆ. ಕಡಿಮೆ ಅವಧಿಯಲ್ಲಿ ತೀರ್ಮಾನವಾಗುವುದು ಅದಾಲತ್ ವಿಶೇಷತೆ’ ಎಂದು ಹೇಳಿದರು.</p>.<p>ಜಿಲ್ಲೆಯಲ್ಲಿ 6 ಸಾವಿರಕ್ಕೂ ಅಧಿಕ ಚೆಕ್ಬೌನ್ಸ್ ಪ್ರಕರಣಗಳು ಇತ್ಯರ್ಥಕ್ಕೆ ಬಾಕಿ ಇದ್ದು, ಇಂದಿನ ಅದಾಲತ್ನಲ್ಲಿ 175 ಪ್ರಕರಣಗಳ ಇತ್ಯರ್ಥವಾಗಿದೆ.ಇದರಿಂದ ಎರಡೂ ಕಡೆಯವರಿಗೆ ಮಾನಸಿಕ, ಆರ್ಥಿಕ ಕಿರಿಕಿರಿ ಇಲ್ಲ.ಅಲ್ಲದೇ, ಕೌಟುಂಬಿಕ ನ್ಯಾಯಾಲಯದಲ್ಲಿ ಬಾಕಿ ಉಳಿದಿರುವ ಪ್ರಕರಣಗಳನ್ನು ಸಂಧಾನ ಮಾಡಿಸಿ ದಂಪತಿಯನ್ನು ಒಂದಾಗಿಸುವ ಪ್ರಕ್ರಿಯೆ ನಡೆದಿವೆ ಎಂದರು.</p>.<p>ವಕೀಲರ ಸಂಘದ ಅಧ್ಯಕ್ಷ ಶಿವಮೂರ್ತಿ, ‘4 -5 ವರ್ಷಗಳು ನ್ಯಾಯಾಲಯಕ್ಕೆ ಓಡಾಡುವ ಪ್ರಕರಣಗಳು ಅದಾಲತ್ನಲ್ಲಿ ತೀರ್ಮಾನ ಆಗಿವೆ. ಪ್ರಕರಣಗಳನ್ನು ಇಲ್ಲಿ ಇತ್ಯರ್ಥಪಡಿಸಿಕೊಳ್ಳುವುದರಿಂದ ವಕೀಲರಿಗೂ ಶುಲ್ಕ ನೀಡುವ ಅಗತ್ಯ ಇಲ್ಲ. ಕಕ್ಷಿದಾರರಿಗೆ ಹೆಚ್ಚಿನ ಅನುಕೂಲ ಸಿಗಲಿದೆ’ ಎಂದರು.</p>.<p>ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ರಾಜಣ್ಣ ಸಂಕಣ್ಣವರ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>