<p><strong>ಶಿವಮೊಗ್ಗ:</strong> 'ಶೋಭಾ ಕರಂದ್ಲಾಜೆ ಗೆ ಹಠ ಹಿಡಿದು ಟಿಕೆಟ್ ಕೊಡಿಸಿದ ಯಡಿಯೂರಪ್ಪ, ನನ್ನ ಪುತ್ರ ಕಾಂತೇಶಗೆ ಹಾವೇರಿ ಕ್ಷೇತ್ರದಿಂದ ಟಿಕೆಟ್ ಕೊಡಿಸಲಿಲ್ಲ. ಬಸವರಾಜ ಬೊಮ್ಮಾಯಿ ಬೇಡ ಎಂದರೂ ಅವರಿಗೆ ಟಿಕೆಟ್ ಕೊಡಿಸಿದ್ದಾರೆ' ಎಂದು ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಆಕ್ರೋಶ ವ್ಯಕ್ತಪಡಿಸಿದರು.</p>.<p>ನಗರದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,</p><p>'ಶೋಭಾ ಕರಂದ್ಲಾಜೆ ಅವರು ದೆಹಲಿಗೆ ಹೋಗಿ ಟಿಕೆಟ್ ಕೇಳಲಿಲ್ಲ. ಯಡಿಯೂರಪ್ಪ ಅವರ ಪರವಾಗಿ ಹೈಕಮಾಂಡ್ ಜೊತೆ ಮಾತನಾಡಿ ಟಿಕೆಟ್ ಕೊಡಿಸಿದ್ದಾರೆ' ಎಂದರು.</p><p>'ಹಿಂದುತ್ವದ ಪರ ಹಾಗೂ ಸಂಘ ನಿಷ್ಠ ಬಿಜೆಪಿ ಮುಖಂಡರನ್ನು ಯಡಿಯೂರಪ್ಪ ಬದಿಗೆ ಸರಿಸುವ ಕೆಲಸ ಮಾಡಿದ್ದಾರೆ. ಅದಕ್ಕೆ ನಾನು, ನಳಿನ್ ಕುಮಾರ ಕಟೀಲ್, ಪ್ರತಾಪಸಿಂಹ, ಸಿ.ಟಿ.ರವಿ, ಡಿ.ವಿ.ಸದಾನಂದಗೌಡ, ಬಸನಗೌಡ ಪಾಟೀಲ ಯತ್ನಾಳ ಸಾಕ್ಷಿ' ಎಂದು ವಾಗ್ದಾಳಿ ನಡೆಸಿದರು.</p><p>ಈ ವಿಚಾರದಲ್ಲಿ ನನ್ನ ಅಭಿಮಾನಿಗಳು ಏನು ಹೇಳುತ್ತಾರೊ ಅದನ್ನು ಕೇಳುತ್ತೇನೆ.</p><p>ಪಕ್ಷದ ನಿಷ್ಠಾವಂತ ಕಾರ್ಯಕರ್ತರನ್ನು ಬಿಜೆಪಿಯಲ್ಲಿ ಕಡೆಗಣಿಸುತ್ತಿದ್ದಾರೆ. ಪಕ್ಷ ಕರ್ನಾಟಕದಲ್ಲಿ ಒಂದು ಕುಟುಂಬದ ಹಿಡಿತದಲ್ಲಿದೆ. ಯಡಿಯೂರಪ್ಪ ವೈಯಕ್ತಿಕ ಹಿತಾಸಕ್ತಿಯಿಂದ ತಾಯಿಯ ಕುತ್ತಿಗೆ ಹಿಸುಕುತ್ತಿದ್ದಾರೆ</p><p>ಪಕ್ಷ ಉಳಿಸಬೇಕಿದೆ. ಹೀಗಾಗಿ ಅದರ ವಿರುದ್ಧ ನಾನು ಧ್ವನಿ ಎತ್ತಲಿದ್ದೇನೆ ಎಂದರು.</p><p>ಕಾಂತೇಶ್ ಗೆ ಪದವೀಧರ ಕ್ಷೇತ್ರದ ಟಿಕೆಟ್ ಕೊಡಿಸುತ್ತೇವೆ ಎಂದು ಕರ್ನಾಟಕ ಚುನಾವಣೆ ಉಸ್ತುವಾರಿ ರಾಧಾಮೋಹನ್ ಹೇಳಿದ್ದಾರೆ. ನಾನು ಇನ್ನು ಆ ಬಗ್ಗೆ ಏನು ತೀರ್ಮಾನ ಮಾಡಿಲ್ಲ.</p><p>'ನಾನು ಯಾವಾಗಲೂ ಮೋದಿ ಪರವಾಗಿಯೇ ಇರುತ್ತೇನೆ. ಪಕ್ಷೇತರನಾಗಿ ಸ್ಪರ್ಧೆ ಮಾಡಿದರೂ ನನ್ನ ಬೆಂಬಲ ಅವರಿಗೆ ಇರಲಿದೆ' ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿವಮೊಗ್ಗ:</strong> 'ಶೋಭಾ ಕರಂದ್ಲಾಜೆ ಗೆ ಹಠ ಹಿಡಿದು ಟಿಕೆಟ್ ಕೊಡಿಸಿದ ಯಡಿಯೂರಪ್ಪ, ನನ್ನ ಪುತ್ರ ಕಾಂತೇಶಗೆ ಹಾವೇರಿ ಕ್ಷೇತ್ರದಿಂದ ಟಿಕೆಟ್ ಕೊಡಿಸಲಿಲ್ಲ. ಬಸವರಾಜ ಬೊಮ್ಮಾಯಿ ಬೇಡ ಎಂದರೂ ಅವರಿಗೆ ಟಿಕೆಟ್ ಕೊಡಿಸಿದ್ದಾರೆ' ಎಂದು ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಆಕ್ರೋಶ ವ್ಯಕ್ತಪಡಿಸಿದರು.</p>.<p>ನಗರದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,</p><p>'ಶೋಭಾ ಕರಂದ್ಲಾಜೆ ಅವರು ದೆಹಲಿಗೆ ಹೋಗಿ ಟಿಕೆಟ್ ಕೇಳಲಿಲ್ಲ. ಯಡಿಯೂರಪ್ಪ ಅವರ ಪರವಾಗಿ ಹೈಕಮಾಂಡ್ ಜೊತೆ ಮಾತನಾಡಿ ಟಿಕೆಟ್ ಕೊಡಿಸಿದ್ದಾರೆ' ಎಂದರು.</p><p>'ಹಿಂದುತ್ವದ ಪರ ಹಾಗೂ ಸಂಘ ನಿಷ್ಠ ಬಿಜೆಪಿ ಮುಖಂಡರನ್ನು ಯಡಿಯೂರಪ್ಪ ಬದಿಗೆ ಸರಿಸುವ ಕೆಲಸ ಮಾಡಿದ್ದಾರೆ. ಅದಕ್ಕೆ ನಾನು, ನಳಿನ್ ಕುಮಾರ ಕಟೀಲ್, ಪ್ರತಾಪಸಿಂಹ, ಸಿ.ಟಿ.ರವಿ, ಡಿ.ವಿ.ಸದಾನಂದಗೌಡ, ಬಸನಗೌಡ ಪಾಟೀಲ ಯತ್ನಾಳ ಸಾಕ್ಷಿ' ಎಂದು ವಾಗ್ದಾಳಿ ನಡೆಸಿದರು.</p><p>ಈ ವಿಚಾರದಲ್ಲಿ ನನ್ನ ಅಭಿಮಾನಿಗಳು ಏನು ಹೇಳುತ್ತಾರೊ ಅದನ್ನು ಕೇಳುತ್ತೇನೆ.</p><p>ಪಕ್ಷದ ನಿಷ್ಠಾವಂತ ಕಾರ್ಯಕರ್ತರನ್ನು ಬಿಜೆಪಿಯಲ್ಲಿ ಕಡೆಗಣಿಸುತ್ತಿದ್ದಾರೆ. ಪಕ್ಷ ಕರ್ನಾಟಕದಲ್ಲಿ ಒಂದು ಕುಟುಂಬದ ಹಿಡಿತದಲ್ಲಿದೆ. ಯಡಿಯೂರಪ್ಪ ವೈಯಕ್ತಿಕ ಹಿತಾಸಕ್ತಿಯಿಂದ ತಾಯಿಯ ಕುತ್ತಿಗೆ ಹಿಸುಕುತ್ತಿದ್ದಾರೆ</p><p>ಪಕ್ಷ ಉಳಿಸಬೇಕಿದೆ. ಹೀಗಾಗಿ ಅದರ ವಿರುದ್ಧ ನಾನು ಧ್ವನಿ ಎತ್ತಲಿದ್ದೇನೆ ಎಂದರು.</p><p>ಕಾಂತೇಶ್ ಗೆ ಪದವೀಧರ ಕ್ಷೇತ್ರದ ಟಿಕೆಟ್ ಕೊಡಿಸುತ್ತೇವೆ ಎಂದು ಕರ್ನಾಟಕ ಚುನಾವಣೆ ಉಸ್ತುವಾರಿ ರಾಧಾಮೋಹನ್ ಹೇಳಿದ್ದಾರೆ. ನಾನು ಇನ್ನು ಆ ಬಗ್ಗೆ ಏನು ತೀರ್ಮಾನ ಮಾಡಿಲ್ಲ.</p><p>'ನಾನು ಯಾವಾಗಲೂ ಮೋದಿ ಪರವಾಗಿಯೇ ಇರುತ್ತೇನೆ. ಪಕ್ಷೇತರನಾಗಿ ಸ್ಪರ್ಧೆ ಮಾಡಿದರೂ ನನ್ನ ಬೆಂಬಲ ಅವರಿಗೆ ಇರಲಿದೆ' ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>