<p><strong>ಹೊಳೆಹೊನ್ನೂರು</strong>: ‘ಜನ ಹಿತ ಮರೆತು ತುಘಲಕ್ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ಪಕ್ಷವನ್ನು ದೂಳಿಪಟ ಮಾಡಬೇಕಿದೆ’ ಎಂದು ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್.ಯಡಿಯೂರಪ್ಪ ತಿಳಿಸಿದರು.</p>.<p>ಸಮೀಪದ ಸೂಗೂರಿನಲ್ಲಿ ಬುಧವಾರ ಹೊಳಲೂರು ಮಹಾಶಕ್ತಿ ಕೇಂದ್ರ ವತಿಯಿಂದ ಹಮ್ಮಿಕೊಂಡಿದ್ದ ಬಹಿರಂಗ ಪ್ರಚಾರ ಸಭೆಯಲ್ಲಿ ಅವರು ಮಾತನಾಡಿದರು.</p>.<p>‘ಮುಂದಿನ ಚುನಾವಣೆಗೆ ಸ್ಪರ್ಧೆ ಮಾಡುವವರು ಭಯ ಪಡಬೇಕು. ಆ ರೀತಿಯ ಬಹುಮತಗಳೊಂದಿಗೆ ಬಿ.ವೈ. ರಾಘವೇಂದ್ರ ಗೆದ್ದು ಬರಲಿದ್ದಾರೆ. ರಾಜ್ಯ ಸರ್ಕಾರ ಸ್ಥಗಿತವಾಗಿದ್ದು ಸಂಪೂರ್ಣ ದಿವಾಳಿಯಾಗಿದೆ. ರಾಜ್ಯದಲ್ಲಿ ಕಾಂಗ್ರೆಸ್ ಪರ ಯಾವೊಬ್ಬ ಮತದಾರರನೂ ಒಲವು ತೋರುತ್ತಿಲ್ಲ. ಕಾಂಗ್ರೆಸ್ಗೆ ದಿಕ್ಕು ದಿಸೆ ಇಲ್ಲ’ ಎಂದು ಟೀಕಿಸಿದರು.</p>.<p>‘ಮತದಾರರು ಜಾಗೃತರಾಗಿದ್ದಾರೆ. ಚುನಾವಣೆಗಳಲ್ಲಿ ಹಣ ಬಲ ಬಳಸಿ ಜಾತಿಯ ವಿಷ ಬೀಜ ಬಿತ್ತಿ ಗೆಲುವು ಸಾಧಿಸುವುದು ಸುಲಭವಲ್ಲ. ಪ್ರಧಾನಿ ನರೇಂದ್ರ ಮೊದಿ 10 ವರ್ಷಗಳಲ್ಲಿ ಒಂದು ದಿನವೂ ವಿಶ್ರಾಂತಿ ತೆಗೆದುಕೊಂಡಿಲ್ಲ. ವಿಶ್ವವೇ ದೇಶದ ಕಡೆ ತಿರುಗಿ ನೋಡುವಂತಾಗಿದೆ’ ಎಂದು ಹೇಳಿದರು.</p>.<p>ಶಾಸಕಿ ಶಾರದಾ ಪೂರ್ಯಾನಾಯ್ಕ, ಮಾಜಿ ಶಾಸಕ ಅಶೋಕ್ನಾಯ್ಕ, ಮಹಿಳಾ ಘಟಕದ ಅಧ್ಯಕ್ಷೆ ನಾಗರತ್ನ, ವೈದ್ಯ ಧನಂಜಯ್ ಸರ್ಜಿ, ದಿನೇಶ್, ಷಣ್ಮುಖಪ್ಪ, ರವೀಶ್, ನವೀಲಯ್ಯ, ಷಡಾಕ್ಷರಪ್ಪ, ಬಸವರಾಜಪ್ಪ, ಅಶೋಕ್, ಶ್ರೀನಿವಾಸ್ ಇತರರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೊಳೆಹೊನ್ನೂರು</strong>: ‘ಜನ ಹಿತ ಮರೆತು ತುಘಲಕ್ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ಪಕ್ಷವನ್ನು ದೂಳಿಪಟ ಮಾಡಬೇಕಿದೆ’ ಎಂದು ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್.ಯಡಿಯೂರಪ್ಪ ತಿಳಿಸಿದರು.</p>.<p>ಸಮೀಪದ ಸೂಗೂರಿನಲ್ಲಿ ಬುಧವಾರ ಹೊಳಲೂರು ಮಹಾಶಕ್ತಿ ಕೇಂದ್ರ ವತಿಯಿಂದ ಹಮ್ಮಿಕೊಂಡಿದ್ದ ಬಹಿರಂಗ ಪ್ರಚಾರ ಸಭೆಯಲ್ಲಿ ಅವರು ಮಾತನಾಡಿದರು.</p>.<p>‘ಮುಂದಿನ ಚುನಾವಣೆಗೆ ಸ್ಪರ್ಧೆ ಮಾಡುವವರು ಭಯ ಪಡಬೇಕು. ಆ ರೀತಿಯ ಬಹುಮತಗಳೊಂದಿಗೆ ಬಿ.ವೈ. ರಾಘವೇಂದ್ರ ಗೆದ್ದು ಬರಲಿದ್ದಾರೆ. ರಾಜ್ಯ ಸರ್ಕಾರ ಸ್ಥಗಿತವಾಗಿದ್ದು ಸಂಪೂರ್ಣ ದಿವಾಳಿಯಾಗಿದೆ. ರಾಜ್ಯದಲ್ಲಿ ಕಾಂಗ್ರೆಸ್ ಪರ ಯಾವೊಬ್ಬ ಮತದಾರರನೂ ಒಲವು ತೋರುತ್ತಿಲ್ಲ. ಕಾಂಗ್ರೆಸ್ಗೆ ದಿಕ್ಕು ದಿಸೆ ಇಲ್ಲ’ ಎಂದು ಟೀಕಿಸಿದರು.</p>.<p>‘ಮತದಾರರು ಜಾಗೃತರಾಗಿದ್ದಾರೆ. ಚುನಾವಣೆಗಳಲ್ಲಿ ಹಣ ಬಲ ಬಳಸಿ ಜಾತಿಯ ವಿಷ ಬೀಜ ಬಿತ್ತಿ ಗೆಲುವು ಸಾಧಿಸುವುದು ಸುಲಭವಲ್ಲ. ಪ್ರಧಾನಿ ನರೇಂದ್ರ ಮೊದಿ 10 ವರ್ಷಗಳಲ್ಲಿ ಒಂದು ದಿನವೂ ವಿಶ್ರಾಂತಿ ತೆಗೆದುಕೊಂಡಿಲ್ಲ. ವಿಶ್ವವೇ ದೇಶದ ಕಡೆ ತಿರುಗಿ ನೋಡುವಂತಾಗಿದೆ’ ಎಂದು ಹೇಳಿದರು.</p>.<p>ಶಾಸಕಿ ಶಾರದಾ ಪೂರ್ಯಾನಾಯ್ಕ, ಮಾಜಿ ಶಾಸಕ ಅಶೋಕ್ನಾಯ್ಕ, ಮಹಿಳಾ ಘಟಕದ ಅಧ್ಯಕ್ಷೆ ನಾಗರತ್ನ, ವೈದ್ಯ ಧನಂಜಯ್ ಸರ್ಜಿ, ದಿನೇಶ್, ಷಣ್ಮುಖಪ್ಪ, ರವೀಶ್, ನವೀಲಯ್ಯ, ಷಡಾಕ್ಷರಪ್ಪ, ಬಸವರಾಜಪ್ಪ, ಅಶೋಕ್, ಶ್ರೀನಿವಾಸ್ ಇತರರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>