<p><strong>ಶಿವಮೊಗ್ಗ:</strong> ಆದಾಯ ಮೀರಿ ಅಕ್ರಮ ಆಸ್ತಿ ಗಳಿಸಿದ ಆರೋಪಕ್ಕೆ ಸಂಬಂಧಿಸಿದಂತೆ ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ, ಅವರ ಪುತ್ರ ಕೆ.ಈ. ಕಾಂತೇಶ್ ಹಾಗೂ ಸೊಸೆ ಶಾಲಿನಿ ವಿರುದ್ಧ ಶಿವಮೊಗ್ಗದ ಲೋಕಾಯುಕ್ತ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ.</p>.<p>ಶಿವಮೊಗ್ಗದ ವಕೀಲ ಬಿ.ವಿನೋದ್ ಸಲ್ಲಿಸಿದ್ದ ಖಾಸಗಿ ದೂರಿಗೆ ಸಂಬಂಧಿಸಿದಂತೆ, ‘ಶಾಸಕರು- ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಚಾರಣೆ’ಯ ವಿಶೇಷ ನ್ಯಾಯಾಲಯ ಕ್ರಿಮಿನಲ್ ಪ್ರಕರಣದ ಬಗ್ಗೆ ತನಿಖೆ ನಡೆಸಿ ವರದಿ ಸಲ್ಲಿಸುವಂತೆ ಏಪ್ರಿಲ್ 24ರಂದು ಲೋಕಾಯುಕ್ತ ಪೊಲೀಸರಿಗೆ ಆದೇಶಿಸಿತ್ತು. ಲೋಕಾಯುಕ್ತ ಡಿವೈಎಸ್ಪಿ ಬಿ.ಪಿ. ಚಂದ್ರಶೇಖರ್ ಅವರನ್ನು ತನಿಖಾಧಿಕಾರಿಯಾಗಿ ನೇಮಿಸಲಾಗಿತ್ತು.</p>.<p>ಕಾನೂನು ತಜ್ಞರ ಅಭಿಪ್ರಾಯ ಪಡೆದ ಲೋಕಾಯುಕ್ತ ಪೊಲೀಸರು ಬುಧವಾರ ಎಫ್ಐಆರ್ ದಾಖಲಿಸಿಕೊಂಡು ತನಿಖೆಗೆ ಮುಂದಾಗಿದ್ದಾರೆ ಎಂದು ತಿಳಿದುಬಂದಿದೆ.</p>.<p>ಪ್ರಕರಣವೇನು?: ‘ಈಶ್ವರಪ್ಪ ಅವರು ಜಲಸಂಪನ್ಮೂಲ ಸಚಿವರಾಗಿದ್ದ ಸಂದರ್ಭ ಆದಾಯ ಮೀರಿ ಅಕ್ರಮ ಆಸ್ತಿ ಗಳಿಸಿದ್ದಾರೆ’ ಎಂಬುದು ಆರೋಪ. ಈ ಸಂಬಂಧ ಭ್ರಷ್ಟಾಚಾರ ನಿಗ್ರಹ ಕಾಯ್ದೆ- 1988ರ ಕಲಂ 13(1)(ಡಿ) ಹಾಗೂ 13(1)(ಇ) ಮತ್ತು ಭಾರತೀಯ ದಂಡ ಸಂಹಿತೆ-1860ರ ಕಲಂ 420ರ ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು.</p>.<p>ದೂರುದಾರ ಬಿ.ವಿನೋದ್ ಅವರು 2016ರಲ್ಲಿ ಸಲ್ಲಿಸಿದ್ದ ಈ ಖಾಸಗಿ ದೂರನ್ನು ಲೋಕಾಯುಕ್ತ ಕೋರ್ಟ್ ವಜಾಗೊಳಿಸಿತ್ತು. ವಜಾ ಆದೇಶವನ್ನು ಪ್ರಶ್ನಿಸಿ ವಿನೋದ್ ಹೈಕೋರ್ಟ್ ಮೆಟ್ಟಿಲೇರಿದ್ದರು. ಅರ್ಜಿ ವಿಚಾರಣೆ ನಡೆಸಿದ್ದ ಹೈಕೋರ್ಟ್ ದೂರಿನ ಮರು ಪರಿಗಣನೆಗೆ ಆದೇಶಿಸಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿವಮೊಗ್ಗ:</strong> ಆದಾಯ ಮೀರಿ ಅಕ್ರಮ ಆಸ್ತಿ ಗಳಿಸಿದ ಆರೋಪಕ್ಕೆ ಸಂಬಂಧಿಸಿದಂತೆ ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ, ಅವರ ಪುತ್ರ ಕೆ.ಈ. ಕಾಂತೇಶ್ ಹಾಗೂ ಸೊಸೆ ಶಾಲಿನಿ ವಿರುದ್ಧ ಶಿವಮೊಗ್ಗದ ಲೋಕಾಯುಕ್ತ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ.</p>.<p>ಶಿವಮೊಗ್ಗದ ವಕೀಲ ಬಿ.ವಿನೋದ್ ಸಲ್ಲಿಸಿದ್ದ ಖಾಸಗಿ ದೂರಿಗೆ ಸಂಬಂಧಿಸಿದಂತೆ, ‘ಶಾಸಕರು- ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಚಾರಣೆ’ಯ ವಿಶೇಷ ನ್ಯಾಯಾಲಯ ಕ್ರಿಮಿನಲ್ ಪ್ರಕರಣದ ಬಗ್ಗೆ ತನಿಖೆ ನಡೆಸಿ ವರದಿ ಸಲ್ಲಿಸುವಂತೆ ಏಪ್ರಿಲ್ 24ರಂದು ಲೋಕಾಯುಕ್ತ ಪೊಲೀಸರಿಗೆ ಆದೇಶಿಸಿತ್ತು. ಲೋಕಾಯುಕ್ತ ಡಿವೈಎಸ್ಪಿ ಬಿ.ಪಿ. ಚಂದ್ರಶೇಖರ್ ಅವರನ್ನು ತನಿಖಾಧಿಕಾರಿಯಾಗಿ ನೇಮಿಸಲಾಗಿತ್ತು.</p>.<p>ಕಾನೂನು ತಜ್ಞರ ಅಭಿಪ್ರಾಯ ಪಡೆದ ಲೋಕಾಯುಕ್ತ ಪೊಲೀಸರು ಬುಧವಾರ ಎಫ್ಐಆರ್ ದಾಖಲಿಸಿಕೊಂಡು ತನಿಖೆಗೆ ಮುಂದಾಗಿದ್ದಾರೆ ಎಂದು ತಿಳಿದುಬಂದಿದೆ.</p>.<p>ಪ್ರಕರಣವೇನು?: ‘ಈಶ್ವರಪ್ಪ ಅವರು ಜಲಸಂಪನ್ಮೂಲ ಸಚಿವರಾಗಿದ್ದ ಸಂದರ್ಭ ಆದಾಯ ಮೀರಿ ಅಕ್ರಮ ಆಸ್ತಿ ಗಳಿಸಿದ್ದಾರೆ’ ಎಂಬುದು ಆರೋಪ. ಈ ಸಂಬಂಧ ಭ್ರಷ್ಟಾಚಾರ ನಿಗ್ರಹ ಕಾಯ್ದೆ- 1988ರ ಕಲಂ 13(1)(ಡಿ) ಹಾಗೂ 13(1)(ಇ) ಮತ್ತು ಭಾರತೀಯ ದಂಡ ಸಂಹಿತೆ-1860ರ ಕಲಂ 420ರ ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು.</p>.<p>ದೂರುದಾರ ಬಿ.ವಿನೋದ್ ಅವರು 2016ರಲ್ಲಿ ಸಲ್ಲಿಸಿದ್ದ ಈ ಖಾಸಗಿ ದೂರನ್ನು ಲೋಕಾಯುಕ್ತ ಕೋರ್ಟ್ ವಜಾಗೊಳಿಸಿತ್ತು. ವಜಾ ಆದೇಶವನ್ನು ಪ್ರಶ್ನಿಸಿ ವಿನೋದ್ ಹೈಕೋರ್ಟ್ ಮೆಟ್ಟಿಲೇರಿದ್ದರು. ಅರ್ಜಿ ವಿಚಾರಣೆ ನಡೆಸಿದ್ದ ಹೈಕೋರ್ಟ್ ದೂರಿನ ಮರು ಪರಿಗಣನೆಗೆ ಆದೇಶಿಸಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>