<p><strong>ಸೊರಬ</strong>: ಖಾತೆ ಬದಲಾವಣೆಗಾಗಿ ಸಾರ್ವಜನಿಕರೊಬ್ಬರಿಂದ ಲಂಚ ಪಡೆಯುತ್ತಿದ್ದ ಪುರಸಭೆಯ ಕಂದಾಯ ವಿಭಾಗದ ಸೇವಾ ನಿರ್ವಾಹಕಿ ಮಂಗಳವಾರ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ.</p>.<p>ಈ ಮೊದಲು ಪೌರ ಕಾರ್ಮಿಕರಾಗಿ ಕಾರ್ಯ ನಿರ್ವಹಿಸುತ್ತಿದ್ದು, ಇದೀಗ ಕಂದಾಯ ವಿಭಾಗದ ಸೇವಾ ನಿರ್ವಾಹಕಿಯಾಗಿ ಕೆಲಸ ಮಾಡುತ್ತಿರುವ ಚಂದ್ರಕಲಾ ವ್ಯಕ್ತಿಯೊಬ್ಬರಿಂದ ₹ 15,000 ಲಂಚ ಪಡೆಯುವಾಗ ಸಿಕ್ಕಿಬಿದ್ದಿದ್ದಾರೆ.</p>.<p>ಪುರಸಭೆ ವ್ಯಾಪ್ತಿಯ ಹೊಸಪೇಟೆ ಬಡಾವಣೆಯಲ್ಲಿ ನಿವೇಶನ ಖರೀದಿಸಿದ್ದ ಬೆಂಗಳೂರು ನಿವಾಸಿ ಭಾಸ್ಕರ ಶೆಟ್ಟಿ, ಖಾತೆ ಬದಲಾವಣೆಗೆ ಜೂನ್ 17ರಂದು ಅರ್ಜಿ ಸಲ್ಲಿಸಿದ್ದರು. ಅವರ ಸೋದರ ಕೆಲಸ ಮಾಡಿಕೊಡುವಂತೆ ಜೂನ್ 21ರಂದು ಕಚೇರಿಗೆ ಬಂದಾಗ ₹ 15,000 ಲಂಚ ನೀಡುವಂತೆ ಬೇಡಿಕೆ ಇಟ್ಟಿದ್ದರು. ಈ ಕುರಿತು ಮಂಜುನಾಥ್ ಲೋಕಾಯುಕ್ತಕ್ಕೆ ದೂರು ಸಲ್ಲಿಸಿದ್ದರು</p>.<p>ಮಂಗಳವಾರ ಲಂಚ ಪಡೆಯುವ ವೇಳೆ ದಾಳಿ ನಡೆಸಿದ ಲೋಕಾಯುಕ್ತ ಪೊಲೀಸರು, ಚಂದ್ರಕಲಾ ಅವರನ್ನು ಬಂಧಿಸಿ, ನ್ಯಾಯಾಂಗ ವಶಕ್ಕೆ ಒಪ್ಪಿಸಿದ್ದಾರೆ. ಲೋಕಾಯುಕ್ತ ಡಿವೈಎಸ್ಪಿ ಉಮೇಶ್ ಈಶ್ವರ ನಾಯ್ಕ್ ಮಾರ್ಗದರ್ಶನದಲ್ಲಿ ನಡೆದ ದಾಳಿಯಲ್ಲಿ ಲೋಕಾಯುಕ್ತ ಪಿಎಸ್ಐ ರಾಧಾಕೃಷ್ಣ, ಸಿಬ್ಬಂದಿ ಪ್ರಶಾಂತ್, ಪ್ರಸನ್ನ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸೊರಬ</strong>: ಖಾತೆ ಬದಲಾವಣೆಗಾಗಿ ಸಾರ್ವಜನಿಕರೊಬ್ಬರಿಂದ ಲಂಚ ಪಡೆಯುತ್ತಿದ್ದ ಪುರಸಭೆಯ ಕಂದಾಯ ವಿಭಾಗದ ಸೇವಾ ನಿರ್ವಾಹಕಿ ಮಂಗಳವಾರ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ.</p>.<p>ಈ ಮೊದಲು ಪೌರ ಕಾರ್ಮಿಕರಾಗಿ ಕಾರ್ಯ ನಿರ್ವಹಿಸುತ್ತಿದ್ದು, ಇದೀಗ ಕಂದಾಯ ವಿಭಾಗದ ಸೇವಾ ನಿರ್ವಾಹಕಿಯಾಗಿ ಕೆಲಸ ಮಾಡುತ್ತಿರುವ ಚಂದ್ರಕಲಾ ವ್ಯಕ್ತಿಯೊಬ್ಬರಿಂದ ₹ 15,000 ಲಂಚ ಪಡೆಯುವಾಗ ಸಿಕ್ಕಿಬಿದ್ದಿದ್ದಾರೆ.</p>.<p>ಪುರಸಭೆ ವ್ಯಾಪ್ತಿಯ ಹೊಸಪೇಟೆ ಬಡಾವಣೆಯಲ್ಲಿ ನಿವೇಶನ ಖರೀದಿಸಿದ್ದ ಬೆಂಗಳೂರು ನಿವಾಸಿ ಭಾಸ್ಕರ ಶೆಟ್ಟಿ, ಖಾತೆ ಬದಲಾವಣೆಗೆ ಜೂನ್ 17ರಂದು ಅರ್ಜಿ ಸಲ್ಲಿಸಿದ್ದರು. ಅವರ ಸೋದರ ಕೆಲಸ ಮಾಡಿಕೊಡುವಂತೆ ಜೂನ್ 21ರಂದು ಕಚೇರಿಗೆ ಬಂದಾಗ ₹ 15,000 ಲಂಚ ನೀಡುವಂತೆ ಬೇಡಿಕೆ ಇಟ್ಟಿದ್ದರು. ಈ ಕುರಿತು ಮಂಜುನಾಥ್ ಲೋಕಾಯುಕ್ತಕ್ಕೆ ದೂರು ಸಲ್ಲಿಸಿದ್ದರು</p>.<p>ಮಂಗಳವಾರ ಲಂಚ ಪಡೆಯುವ ವೇಳೆ ದಾಳಿ ನಡೆಸಿದ ಲೋಕಾಯುಕ್ತ ಪೊಲೀಸರು, ಚಂದ್ರಕಲಾ ಅವರನ್ನು ಬಂಧಿಸಿ, ನ್ಯಾಯಾಂಗ ವಶಕ್ಕೆ ಒಪ್ಪಿಸಿದ್ದಾರೆ. ಲೋಕಾಯುಕ್ತ ಡಿವೈಎಸ್ಪಿ ಉಮೇಶ್ ಈಶ್ವರ ನಾಯ್ಕ್ ಮಾರ್ಗದರ್ಶನದಲ್ಲಿ ನಡೆದ ದಾಳಿಯಲ್ಲಿ ಲೋಕಾಯುಕ್ತ ಪಿಎಸ್ಐ ರಾಧಾಕೃಷ್ಣ, ಸಿಬ್ಬಂದಿ ಪ್ರಶಾಂತ್, ಪ್ರಸನ್ನ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>