<p><strong>ಶಿವಮೊಗ್ಗ:</strong> ಲೋಕಾಯುಕ್ತ ಪೊಲೀಸ್ ಅಧಿಕಾರಿಗಳ ತಂಡ ಶುಕ್ರವಾರ ಶಿವಮೊಗ್ಗ ಮಹಾನಗರ ಪಾಲಿಕೆ ಕಚೇರಿಗೆ ದಿಢೀರ್ ಭೇಟಿ ನೀಡಿ, ಕಡತಗಳ ಪರಿಶೀಲನೆ ನಡೆಸಿತು.</p>.<p>ಪಾಲಿಕೆಯ ನಲ್ಮ್ ವಿಭಾಗ, ಕಂದಾಯ ವಿಭಾಗ, ಆಡಳಿತ ವಿಭಾಗ, ನ್ಯಾಯಾಂಗ ವಿಭಾಗ, ಟಪಾಲು ವಿಭಾಗ ಸೇರಿದಂತೆ ಹಲವು ವಿಭಾಗಗಳಿಗೆ ಭೇಟಿ ನೀಡಿ ಲೋಕಾಯುಕ್ತ ಪೊಲೀಸರು ಪರಿಶೀಲಿಸಿದರು.</p>.<p>ಸರ್ಕಾರದ ಆದೇಶದ ಬಳಿಕ ಇ-ಖಾತೆ ಮತ್ತು ಬಿ-ಖಾತೆ ಇದುವರೆಗೆ ಒಟ್ಟು ಎಷ್ಟು ಖಾತೆ ಮಾಡಲಾಗಿದೆ. ಎಷ್ಟು ಬಾಕಿ ಉಳಿದಿವೆ ಮತ್ತು ಯಾವ ಹಂತದಲ್ಲಿದೆ ಎಂದು ಪರಿಶೀಲನೆ ನಡೆಸಿದರು.</p>.<p>ಲೋಕಾಯುಕ್ತ ಅಧಿಕಾರಿಗಳಿಗೆ ಎಲ್ಲಾ ದಾಖಲೆಗಳನ್ನು ನೀಡುವಂತೆ ತಮ್ಮ ಕೈಕೆಳಗಿನ ಅಧಿಕಾರಿಗಳಿಗೆ ಸೂಚಿಸಿದ ಮಹಾನಗರ ಪಾಲಿಕೆ ಆಯುಕ್ತ ಮಾಯಣ್ಣಗೌಡ, ಪಾಲಿಕೆಗೆ ಯಾವಾಗ ಬಂದರೂ ಲೋಕಾಯುಕ್ತ ಪೊಲೀಸರಿಗೆ ನಮ್ಮ ಸ್ವಾಗತವಿದೆ. ಇಲ್ಲಿ ಎಲ್ಲಾ ಕಾರ್ಯಚಟುವಟಿಕೆ ಪಾರದರ್ಶಕವಾಗಿ ನಿರ್ವಹಿಸುತ್ತಿದ್ದೇವೆ ಎಂದು ಮಾಧ್ಯಮಗಳಿಗೆ ತಿಳಿಸಿದರು.</p>.<p>ಲೋಕಾಯುಕ್ತ ಡಿವೈಎಸ್ಪಿ ಬಿ.ಪಿ.ಚಂದ್ರಶೇಖರ್, ಇನ್ಸ್ಪೆಕ್ಟರ್ಗಳಾದ ಗುರುರಾಜ್ ಮೈಲಾರ, ರುದ್ರೇಶ್, ವೀರಬಸಪ್ಪ ಮತ್ತು ಸಿಬ್ಬಂದಿಯ ತಂಡದಿಂದ ಪರಿಶೀಲನೆ ನಡೆಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿವಮೊಗ್ಗ:</strong> ಲೋಕಾಯುಕ್ತ ಪೊಲೀಸ್ ಅಧಿಕಾರಿಗಳ ತಂಡ ಶುಕ್ರವಾರ ಶಿವಮೊಗ್ಗ ಮಹಾನಗರ ಪಾಲಿಕೆ ಕಚೇರಿಗೆ ದಿಢೀರ್ ಭೇಟಿ ನೀಡಿ, ಕಡತಗಳ ಪರಿಶೀಲನೆ ನಡೆಸಿತು.</p>.<p>ಪಾಲಿಕೆಯ ನಲ್ಮ್ ವಿಭಾಗ, ಕಂದಾಯ ವಿಭಾಗ, ಆಡಳಿತ ವಿಭಾಗ, ನ್ಯಾಯಾಂಗ ವಿಭಾಗ, ಟಪಾಲು ವಿಭಾಗ ಸೇರಿದಂತೆ ಹಲವು ವಿಭಾಗಗಳಿಗೆ ಭೇಟಿ ನೀಡಿ ಲೋಕಾಯುಕ್ತ ಪೊಲೀಸರು ಪರಿಶೀಲಿಸಿದರು.</p>.<p>ಸರ್ಕಾರದ ಆದೇಶದ ಬಳಿಕ ಇ-ಖಾತೆ ಮತ್ತು ಬಿ-ಖಾತೆ ಇದುವರೆಗೆ ಒಟ್ಟು ಎಷ್ಟು ಖಾತೆ ಮಾಡಲಾಗಿದೆ. ಎಷ್ಟು ಬಾಕಿ ಉಳಿದಿವೆ ಮತ್ತು ಯಾವ ಹಂತದಲ್ಲಿದೆ ಎಂದು ಪರಿಶೀಲನೆ ನಡೆಸಿದರು.</p>.<p>ಲೋಕಾಯುಕ್ತ ಅಧಿಕಾರಿಗಳಿಗೆ ಎಲ್ಲಾ ದಾಖಲೆಗಳನ್ನು ನೀಡುವಂತೆ ತಮ್ಮ ಕೈಕೆಳಗಿನ ಅಧಿಕಾರಿಗಳಿಗೆ ಸೂಚಿಸಿದ ಮಹಾನಗರ ಪಾಲಿಕೆ ಆಯುಕ್ತ ಮಾಯಣ್ಣಗೌಡ, ಪಾಲಿಕೆಗೆ ಯಾವಾಗ ಬಂದರೂ ಲೋಕಾಯುಕ್ತ ಪೊಲೀಸರಿಗೆ ನಮ್ಮ ಸ್ವಾಗತವಿದೆ. ಇಲ್ಲಿ ಎಲ್ಲಾ ಕಾರ್ಯಚಟುವಟಿಕೆ ಪಾರದರ್ಶಕವಾಗಿ ನಿರ್ವಹಿಸುತ್ತಿದ್ದೇವೆ ಎಂದು ಮಾಧ್ಯಮಗಳಿಗೆ ತಿಳಿಸಿದರು.</p>.<p>ಲೋಕಾಯುಕ್ತ ಡಿವೈಎಸ್ಪಿ ಬಿ.ಪಿ.ಚಂದ್ರಶೇಖರ್, ಇನ್ಸ್ಪೆಕ್ಟರ್ಗಳಾದ ಗುರುರಾಜ್ ಮೈಲಾರ, ರುದ್ರೇಶ್, ವೀರಬಸಪ್ಪ ಮತ್ತು ಸಿಬ್ಬಂದಿಯ ತಂಡದಿಂದ ಪರಿಶೀಲನೆ ನಡೆಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>