<p><strong>ಆನಂದಪುರ:</strong> ಯುವಕನೊಬ್ಬ ಲಾಂಗ್ ಹಿಡಿದು ವಾಹನಗಳಿಗೆ ಬಿಸುತ್ತ ಒಡಾಡಿದ ಘಟನೆ ಭಾನುವಾರ ಆನಂದಪುರದ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ಘಟನೆಗೆ ಸಂಬಂಧಿಸಿದಂತೆ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ.</p>.<p>ಸಾಗರದ ಶ್ರೀಧರ್ ನಗರದ ಸಮೀರ್, ಇಮ್ರಾನ್, ಅಕ್ರಂ, ಶಿವರಾಜ್ ಬಂಧಿತರು. ಇಮ್ರಾನ್, ಅಕ್ರಂ, ಶಿವರಾಜ್ ಆನಂದಪುರ ಸಮೀಪದ ಯಡೇಹಳ್ಳಿಯಲ್ಲಿ ಕಾರ್ಯಕ್ರಮ ಒಂದಕ್ಕೆ ಬಂದಿದ್ದರು. ನಂತರ ಆನಂದಪುರದ ಅಂಗಡಿಯೊಂದರಲ್ಲಿ ಗಲಾಟೆ ಮಾಡಿಕೊಂಡಿದ್ದಾರೆ. ಈ ಗಲಾಟೆ ಹಿನ್ನೆಲೆಯಲ್ಲಿ ಇನ್ನೊಬ್ಬ ಯುವಕ ಸಮೀರ್ ಸಾಗರದಿಂದ ಬಂದಿದ್ದಾನೆ. ಸಮೀರ್ ಆನಂದಪುರದಲ್ಲಿ ಮಾರಟಕ್ಕಿಟ್ಟಿದ್ದ ಲಾಂಗ್ ತೆಗೆದುಕೊಂಡು ಹೆದ್ದಾರಿಯಲ್ಲಿ ವಾಹನಗಳನ್ನು ನಿಲ್ಲಿಸಿ ಎಂದು ಕೂಗಾಡುತ್ತಾ ಲಾಂಗ್ ಬಿಸುತ್ತಾ ಓಡಿದ್ದಾನೆ.</p>.<p>ಅನಾಹುತ ತಪ್ಪಿಸಿದ ಸ್ಥಳೀಯರು: ಲಾಂಗ್ ಬಿಸುತ್ತ ರಾಷ್ಟ್ರೀಯ ಹೆದ್ದಾರಿಯಲ್ಲಿ ಹೋಗುವುದನ್ನು ಗಮನಿಸಿದ ಸ್ಥಳೀಯರು ಯುವಕನನ್ನು ಹಿಂಬಾಲಿಸಿ ಲಾಂಗ್ ಕಸಿದು ಕೆರೆಗೆ ಎಸೆದು ಆಗಬಹುದಾದ ಅನಾಹುತ ತಪ್ಪಿಸಿದ್ದಾರೆ. ಬಳಿಕ ಯುವಕನನ್ನು ಆನಂದಪುರ ಪೊಲೀಸ್ ಠಾಣೆಗೆ ಒಪ್ಪಿಸಿದ್ದಾರೆ. ನಂತರ ಪೋಲಿಸರು ಉಳಿದ ಮೂವರು ಆರೋಪಿಗಳನ್ನು ಸಾಗರ ಸಮೀಪ ಬಂಧಿಸಿದ್ದಾರೆ.</p>.<p>ಗಾಂಜಾ ಸೇವನೆ ಮಾಡಿದ್ದ ಆರೋಪಿಗಳು: ಆರೋಪಿಗಳನ್ನು ಸಾಗರದ ಆಸ್ಪತ್ರೆಯಲ್ಲಿ ವೈದ್ಯಕೀಯ ತಪಾಸಣೆಗೆ ಒಳಪಡಿಸಿದಾಗ ಗಾಂಜಾ ಸೇವನೆಗೆ ಮಾಡಿರುವುದು ತಿಳಿದುಬಂದಿದೆ. ಆರೋಪಿಗಳನ್ನು ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಗಿದೆ ಎಂದು ಪೋಲಿಸರು ಮಾಹಿತಿ ನೀಡಿದ್ದಾರೆ.</p>.<p>ಆನಂದಪುರ ಪೊಲೀಸ್ ಠಾಣೆಯ ಸಬ್ಇನ್ಸ್ಪೆಕ್ಟರ್ ಯುವರಾಜ್ ಕಂಬಳಿ, ಸಾಗರದ ಸಬ್ಇನ್ಸ್ಪೆಕ್ಟರ್ ಯಲ್ಲಪ್ಪ ಹಾಗೂ ಸಿಬ್ಬಂದಿ ಉಳಿದ ಮೂವರ ಆರೋಪಿಗಳನ್ನು ಸೆರೆ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಆನಂದಪುರ:</strong> ಯುವಕನೊಬ್ಬ ಲಾಂಗ್ ಹಿಡಿದು ವಾಹನಗಳಿಗೆ ಬಿಸುತ್ತ ಒಡಾಡಿದ ಘಟನೆ ಭಾನುವಾರ ಆನಂದಪುರದ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ಘಟನೆಗೆ ಸಂಬಂಧಿಸಿದಂತೆ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ.</p>.<p>ಸಾಗರದ ಶ್ರೀಧರ್ ನಗರದ ಸಮೀರ್, ಇಮ್ರಾನ್, ಅಕ್ರಂ, ಶಿವರಾಜ್ ಬಂಧಿತರು. ಇಮ್ರಾನ್, ಅಕ್ರಂ, ಶಿವರಾಜ್ ಆನಂದಪುರ ಸಮೀಪದ ಯಡೇಹಳ್ಳಿಯಲ್ಲಿ ಕಾರ್ಯಕ್ರಮ ಒಂದಕ್ಕೆ ಬಂದಿದ್ದರು. ನಂತರ ಆನಂದಪುರದ ಅಂಗಡಿಯೊಂದರಲ್ಲಿ ಗಲಾಟೆ ಮಾಡಿಕೊಂಡಿದ್ದಾರೆ. ಈ ಗಲಾಟೆ ಹಿನ್ನೆಲೆಯಲ್ಲಿ ಇನ್ನೊಬ್ಬ ಯುವಕ ಸಮೀರ್ ಸಾಗರದಿಂದ ಬಂದಿದ್ದಾನೆ. ಸಮೀರ್ ಆನಂದಪುರದಲ್ಲಿ ಮಾರಟಕ್ಕಿಟ್ಟಿದ್ದ ಲಾಂಗ್ ತೆಗೆದುಕೊಂಡು ಹೆದ್ದಾರಿಯಲ್ಲಿ ವಾಹನಗಳನ್ನು ನಿಲ್ಲಿಸಿ ಎಂದು ಕೂಗಾಡುತ್ತಾ ಲಾಂಗ್ ಬಿಸುತ್ತಾ ಓಡಿದ್ದಾನೆ.</p>.<p>ಅನಾಹುತ ತಪ್ಪಿಸಿದ ಸ್ಥಳೀಯರು: ಲಾಂಗ್ ಬಿಸುತ್ತ ರಾಷ್ಟ್ರೀಯ ಹೆದ್ದಾರಿಯಲ್ಲಿ ಹೋಗುವುದನ್ನು ಗಮನಿಸಿದ ಸ್ಥಳೀಯರು ಯುವಕನನ್ನು ಹಿಂಬಾಲಿಸಿ ಲಾಂಗ್ ಕಸಿದು ಕೆರೆಗೆ ಎಸೆದು ಆಗಬಹುದಾದ ಅನಾಹುತ ತಪ್ಪಿಸಿದ್ದಾರೆ. ಬಳಿಕ ಯುವಕನನ್ನು ಆನಂದಪುರ ಪೊಲೀಸ್ ಠಾಣೆಗೆ ಒಪ್ಪಿಸಿದ್ದಾರೆ. ನಂತರ ಪೋಲಿಸರು ಉಳಿದ ಮೂವರು ಆರೋಪಿಗಳನ್ನು ಸಾಗರ ಸಮೀಪ ಬಂಧಿಸಿದ್ದಾರೆ.</p>.<p>ಗಾಂಜಾ ಸೇವನೆ ಮಾಡಿದ್ದ ಆರೋಪಿಗಳು: ಆರೋಪಿಗಳನ್ನು ಸಾಗರದ ಆಸ್ಪತ್ರೆಯಲ್ಲಿ ವೈದ್ಯಕೀಯ ತಪಾಸಣೆಗೆ ಒಳಪಡಿಸಿದಾಗ ಗಾಂಜಾ ಸೇವನೆಗೆ ಮಾಡಿರುವುದು ತಿಳಿದುಬಂದಿದೆ. ಆರೋಪಿಗಳನ್ನು ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಗಿದೆ ಎಂದು ಪೋಲಿಸರು ಮಾಹಿತಿ ನೀಡಿದ್ದಾರೆ.</p>.<p>ಆನಂದಪುರ ಪೊಲೀಸ್ ಠಾಣೆಯ ಸಬ್ಇನ್ಸ್ಪೆಕ್ಟರ್ ಯುವರಾಜ್ ಕಂಬಳಿ, ಸಾಗರದ ಸಬ್ಇನ್ಸ್ಪೆಕ್ಟರ್ ಯಲ್ಲಪ್ಪ ಹಾಗೂ ಸಿಬ್ಬಂದಿ ಉಳಿದ ಮೂವರ ಆರೋಪಿಗಳನ್ನು ಸೆರೆ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>