ಹೊಸನಗರ: ಯಡೂರು ಸಮೀಪ ಮೇಕೇರಿ ಬಳಿ ಶನಿವಾರ ಸಂಜೆ ಕೆಎಸ್ಆರ್ಟಿಸಿ ಬಸ್ ಮತ್ತು ಲಾರಿ ಡಿಕ್ಕಿಯಾಗಿ 10ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದಾರೆ.
ಬಸ್ಸಿನಲ್ಲಿ 30ಕ್ಕೂ ಹೆಚ್ಚುಪ್ರಯಾಣಿಕರಿದ್ದರು. 10 ಜನರು ಗಾಯಗೊಂಡಿದ್ದಾರೆ. ಪ್ರಯಾಣಿಸುತ್ತಿದ್ದವರಲ್ಲಿ ಬಹುತೇಕ ಕಾಲೇಜು ವಿದ್ಯಾರ್ಥಿಗಳೇ ಇದ್ದರು. ಗಾಯಗೊಂಡವರಿಗೆ ತೀರ್ಥಹಳ್ಳಿ ಸರ್ಕಾರಿ ಆಸ್ಪತ್ರೆ ಮತ್ತು ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆನೀಡಲಾಗಿದೆ.
ಬೆಂಗಳೂರಿನಿಂದ ಕುಂದಾಪುರಕ್ಕೆ ಹೋಗುತ್ತಿದ್ದ ಬಸ್ ಹಾಗೂ ಕುಂದಾಪುರ ಕಡೆಯಿಂದ ಶಿವಮೊಗ್ಗ ಕಡೆ ಸಾಗುತ್ತಿದ್ದ ಇಟ್ಟಿಗೆ ತುಂಬಿದ ಲಾರಿ ನಡುವೆ ಡಿಕ್ಕಿಯಾಗಿದೆ.