ಭದ್ರಾವತಿ: ನಗರದ ಅಂಬೇಡ್ಕರ್ ವೃತ್ತದ ಬಳಿ ಬುಧವಾರ ತಡರಾತ್ರಿ ರೈಲ್ವೆ ಅಂಡರ್ ಪಾಸ್ ಮೂಲಕ ಸಂಚರಿಸುತ್ತಿದ್ದ ಲಾರಿಯೊಂದು ರೈಲ್ವೆ ಹಳಿ ಹಾಗೂ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ, ಹಳಿಗಳು ಏರುಪೇರಾಗಿದ್ದು, ಗುರುವಾರ ಬೆಳಿಗ್ಗೆ ಸಂಚರಿಸುವ ಎರಡು ರೈಲುಗಳ ಸಂಚಾರದಲ್ಲಿ ವಿಳಂಬವಾಯಿತು. ಎರಡು ರೈಲುಗಳು ಸುಮಾರು ಎರಡು ಗಂಟೆ ತಡವಾಗಿ ಸಂಚರಿಸಿದವು.