ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪ್ರೇಮ ವೈಫಲ್ಯ: ಹೊಂಡಕ್ಕೆ ಹಾರಿ ಯುವಕ ಆತ್ಮಹತ್ಯೆ

Last Updated 21 ಸೆಪ್ಟೆಂಬರ್ 2022, 5:05 IST
ಅಕ್ಷರ ಗಾತ್ರ

ಸೊರಬ: ತಾಲ್ಲೂಕಿನ ಚಂದ್ರಗುತ್ತಿ ಗ್ರಾಮದಲ್ಲಿ ಪ್ರೇಮ ವೈಫಲ್ಯದಿಂದ ಮನನೊಂದ ಯುವಕ ಮಂಗಳವಾರ ಹೊಂಡಕ್ಕೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಚಂದ್ರಗುತ್ತಿ ಗ್ರಾಮದ ಎಸ್. ಪ್ರವೀಣ್ (25) ಮೃತ ಯುವಕ. ಪ್ರವೀಣ್ ನಾಲ್ಕು ವರ್ಷಗಳಿಂದ ಯುವತಿಯೊಬ್ಬರನ್ನು ಪ್ರೀತಿಸುತ್ತಿದ್ದು, ಆಕೆ ವಿವಾಹಕ್ಕೆ ನಿರಾಕರಿಸಿ ಕಳೆದೊಂದು ವರ್ಷದಿಂದ ಸಂಪರ್ಕ ಕಡಿದುಕೊಂಡಿದ್ದರು ಎನ್ನಲಾಗಿದೆ. ಇದರಿಂದ ಪ್ರವೀಣ್ ಮನ ನೊಂದಿದ್ದರು ಎಂದು ತಿಳಿದುಬಂದಿದೆ.

ನಾಲ್ಕು ದಿನಗಳ ಹಿಂದೆ ಮನೆ ಬಿಟ್ಟು ಹೋಗಿದ್ದ ಪ್ರವೀಣ್ ಭಾನುವಾರ ಬೆಳಿಗ್ಗೆ ಚಂದ್ರಗುತ್ತಿ ದೇವಸ್ಥಾನ ಸಮೀಪದ ಅಮ್ಮನ ಹೊಂಡದಲ್ಲಿ ಶವವಾಗಿ ಪತ್ತೆಯಾಗಿದ್ದಾನೆ. ಸ್ಥಳಕ್ಕೆ ಪೊಲೀಸರು ತೆರಳಿ, ಸ್ಥಳೀಯರ ಸಹಕಾರದೊಂದಿಗೆ ಮೃತ ದೇಹವನ್ನು ಮೇಲೆತ್ತಿದ್ದಾರೆ.

ಸೊರಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT