ಸೊರಬ: ತಾಲ್ಲೂಕಿನ ಚಂದ್ರಗುತ್ತಿ ಗ್ರಾಮದಲ್ಲಿ ಪ್ರೇಮ ವೈಫಲ್ಯದಿಂದ ಮನನೊಂದ ಯುವಕ ಮಂಗಳವಾರ ಹೊಂಡಕ್ಕೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಚಂದ್ರಗುತ್ತಿ ಗ್ರಾಮದ ಎಸ್. ಪ್ರವೀಣ್ (25) ಮೃತ ಯುವಕ. ಪ್ರವೀಣ್ ನಾಲ್ಕು ವರ್ಷಗಳಿಂದ ಯುವತಿಯೊಬ್ಬರನ್ನು ಪ್ರೀತಿಸುತ್ತಿದ್ದು, ಆಕೆ ವಿವಾಹಕ್ಕೆ ನಿರಾಕರಿಸಿ ಕಳೆದೊಂದು ವರ್ಷದಿಂದ ಸಂಪರ್ಕ ಕಡಿದುಕೊಂಡಿದ್ದರು ಎನ್ನಲಾಗಿದೆ. ಇದರಿಂದ ಪ್ರವೀಣ್ ಮನ ನೊಂದಿದ್ದರು ಎಂದು ತಿಳಿದುಬಂದಿದೆ.
ನಾಲ್ಕು ದಿನಗಳ ಹಿಂದೆ ಮನೆ ಬಿಟ್ಟು ಹೋಗಿದ್ದ ಪ್ರವೀಣ್ ಭಾನುವಾರ ಬೆಳಿಗ್ಗೆ ಚಂದ್ರಗುತ್ತಿ ದೇವಸ್ಥಾನ ಸಮೀಪದ ಅಮ್ಮನ ಹೊಂಡದಲ್ಲಿ ಶವವಾಗಿ ಪತ್ತೆಯಾಗಿದ್ದಾನೆ. ಸ್ಥಳಕ್ಕೆ ಪೊಲೀಸರು ತೆರಳಿ, ಸ್ಥಳೀಯರ ಸಹಕಾರದೊಂದಿಗೆ ಮೃತ ದೇಹವನ್ನು ಮೇಲೆತ್ತಿದ್ದಾರೆ.