<p><strong>ಶಿವಮೊಗ್ಗ:</strong> ‘ಸಂವಿಧಾನ ಓದಬೇಕು ಎಂದು ಪಠ್ಯದಲ್ಲಿ ಅಳವಡಿಸಿ ವಿದ್ಯಾರ್ಥಿಗಳನ್ನು ಈ ರೀತಿ ತೊಡಗಿಸಿಕೊಳ್ಳುವ ಅರ್ಥಪೂರ್ಣ ಕಾರ್ಯಕ್ರಮ ರೂಪಿಸಿದ್ದಕ್ಕೆ ಅಭಿನಂದನೆಗಳು. ಸಂವಿಧಾನ ಓದುವ ಜೊತೆಗೆ ಅದನ್ನು ಪ್ರೀತಿಸಿ’ ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ಎಂ.ಎಸ್. ಸಂತೋಷ ಸಲಹೆ ನೀಡಿದರು.</p>.<p>ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ, ಸಹ್ಯಾದ್ರಿ ವಾಣಿಜ್ಯ ಮತ್ತು ನಿರ್ವಹಣಾ ಕಾಲೇಜು ಸಹಯೋಗದಲ್ಲಿ ಶಿವಮೊಗ್ಗ ತಾಲ್ಲೂಕು ಪದವಿ ಕಾಲೇಜು ವಿದ್ಯಾರ್ಥಿಗಳಿಗೆ ಸಂವಿಧಾನ ಮತ್ತು ಡಾ.ಬಿ.ಆರ್. ಅಂಬೇಡ್ಕರ್ ಕುರಿತು ಏರ್ಪಡಿಸಿದ್ದ ರಸಪ್ರಶ್ನೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.<br /> <br />‘ಸಂವಿಧಾನ ನೆಲದ ಮೂಲ ಕಾನೂನು. ಅದನ್ನು ಅರ್ಥ ಮಾಡಿಕೊಳ್ಳಬೇಕು. ಅದನ್ನು ನಾವು ಪ್ರೀತಿಸಿದರೆ ಅದು ಹೇಗೆ ಇದೆಯೋ ಹಾಗೇ ನಾವು ಅರ್ಥ ಮಾಡಿಕೊಳ್ಳಲು ಸಾಧ್ಯ’ ಎಂದು ವಿವರಿಸಿದರು.<br /> <br />ಕನ್ನಡ ಸಾಹಿತ್ಯ ಪರಿಷತ್ತು ಜಿಲ್ಲಾ ಘಟಕದ ಅಧ್ಯಕ್ಷರಾದ ಡಿ. ಮಂಜುನಾಥ ಮಾತನಾಡಿ, ‘ಸಂವಿಧಾನ ಅರಿಯದ ಹಲವು ಮಂದಿ ಉನ್ನತ ಸ್ಥಾನದಲ್ಲಿದ್ದು ತಪ್ಪು ಮಾಡುತ್ತ ಸಾರ್ವಜನಿಕ ಹಣ, ಸಮಯ ವ್ಯರ್ಥ ಮಾಡುತ್ತಿದ್ದಾರೆ. ಅದನ್ನು ನೋಡಿದರೆ ಸಂವಿಧಾನ ಅರಿವಿದ್ದಿದ್ದರೆ ಹೀಗೆಲ್ಲ ಆಗುತ್ತಿರಲಿಲ್ಲ. ಹೊಸ ತಲೆಮಾರು ಈ ತಪ್ಪುಗಳನ್ನು ಮಾಡದಿರಲೆಂದು ಪ್ರೇರಣೆ ನೀಡುವ ಸಲುವಾಗಿ ರಸಪ್ರಶ್ನೆ ಕಾರ್ಯಕ್ರಮ ರೂಪಿಸಲಾಗಿದೆ’ ಎಂದು ವಿವರಿಸಿದರು.<br /> <br />‘ಸಂವಿಧಾನ ಕರಡು ಪ್ರತಿಯನ್ನು ಸಾರ್ವಜನಿಕ ಚರ್ಚೆಗೆ ಇಡಲಾಗಿತ್ತು. ಆಗಲೇ ಯಾವುದೇ ಸೌಲಭ್ಯಗಳಿಲ್ಲದ ಕಾಲದಲ್ಲಿ 7,695 ಪ್ರಶ್ನೆಗಳು ಬಂದಿದ್ದವು. ಆದರೆ ಇವತ್ತು ತಿದ್ದುಪಡಿಗಳನ್ನು ಸಾರ್ವಜನಿಕ ಚರ್ಚೆಗೆ ಇಡದೇ ಅಸಡ್ಡೆ ಮಾಡಲಾಗುತ್ತಿದೆ’ ಎಂದು ವಕೀಲ ಕೆ.ಪಿ. ಶ್ರೀಪಾಲ್ ಹೇಳಿದರು.<br /> <br />ಕಾಲೇಜಿನ ಪ್ರಾಚಾರ್ಯ ಪ್ರೊ.ಟಿ. ಅವಿನಾಶ್ ಅಧ್ಯಕ್ಷತೆ ವಹಿಸಿದ್ದರು. ಅನನ್ಯ ಗಿರೀಶ್ ಉಪಸ್ಥಿತರಿದ್ದರು. ಕಸಾಪ ತಾಲ್ಲೂಕು ಘಟಕದ ಅಧ್ಯಕ್ಷೆ ಮಹಾದೇವಿ, ಜಿ.ಆರ್. ಲವ, ಪ್ರಕಾಶ್ ಮರ್ಗನಹಳ್ಳಿ ಹಾಜರಿದ್ದರು. ಎಚ್.ಟಿ.ಕೃಷ್ಣಮೂರ್ತಿ ರಸಪ್ರಶ್ನೆ ಕಾರ್ಯಕ್ರಮ ನಡೆಸಿಕೊಟ್ಟರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿವಮೊಗ್ಗ:</strong> ‘ಸಂವಿಧಾನ ಓದಬೇಕು ಎಂದು ಪಠ್ಯದಲ್ಲಿ ಅಳವಡಿಸಿ ವಿದ್ಯಾರ್ಥಿಗಳನ್ನು ಈ ರೀತಿ ತೊಡಗಿಸಿಕೊಳ್ಳುವ ಅರ್ಥಪೂರ್ಣ ಕಾರ್ಯಕ್ರಮ ರೂಪಿಸಿದ್ದಕ್ಕೆ ಅಭಿನಂದನೆಗಳು. ಸಂವಿಧಾನ ಓದುವ ಜೊತೆಗೆ ಅದನ್ನು ಪ್ರೀತಿಸಿ’ ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ಎಂ.ಎಸ್. ಸಂತೋಷ ಸಲಹೆ ನೀಡಿದರು.</p>.<p>ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ, ಸಹ್ಯಾದ್ರಿ ವಾಣಿಜ್ಯ ಮತ್ತು ನಿರ್ವಹಣಾ ಕಾಲೇಜು ಸಹಯೋಗದಲ್ಲಿ ಶಿವಮೊಗ್ಗ ತಾಲ್ಲೂಕು ಪದವಿ ಕಾಲೇಜು ವಿದ್ಯಾರ್ಥಿಗಳಿಗೆ ಸಂವಿಧಾನ ಮತ್ತು ಡಾ.ಬಿ.ಆರ್. ಅಂಬೇಡ್ಕರ್ ಕುರಿತು ಏರ್ಪಡಿಸಿದ್ದ ರಸಪ್ರಶ್ನೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.<br /> <br />‘ಸಂವಿಧಾನ ನೆಲದ ಮೂಲ ಕಾನೂನು. ಅದನ್ನು ಅರ್ಥ ಮಾಡಿಕೊಳ್ಳಬೇಕು. ಅದನ್ನು ನಾವು ಪ್ರೀತಿಸಿದರೆ ಅದು ಹೇಗೆ ಇದೆಯೋ ಹಾಗೇ ನಾವು ಅರ್ಥ ಮಾಡಿಕೊಳ್ಳಲು ಸಾಧ್ಯ’ ಎಂದು ವಿವರಿಸಿದರು.<br /> <br />ಕನ್ನಡ ಸಾಹಿತ್ಯ ಪರಿಷತ್ತು ಜಿಲ್ಲಾ ಘಟಕದ ಅಧ್ಯಕ್ಷರಾದ ಡಿ. ಮಂಜುನಾಥ ಮಾತನಾಡಿ, ‘ಸಂವಿಧಾನ ಅರಿಯದ ಹಲವು ಮಂದಿ ಉನ್ನತ ಸ್ಥಾನದಲ್ಲಿದ್ದು ತಪ್ಪು ಮಾಡುತ್ತ ಸಾರ್ವಜನಿಕ ಹಣ, ಸಮಯ ವ್ಯರ್ಥ ಮಾಡುತ್ತಿದ್ದಾರೆ. ಅದನ್ನು ನೋಡಿದರೆ ಸಂವಿಧಾನ ಅರಿವಿದ್ದಿದ್ದರೆ ಹೀಗೆಲ್ಲ ಆಗುತ್ತಿರಲಿಲ್ಲ. ಹೊಸ ತಲೆಮಾರು ಈ ತಪ್ಪುಗಳನ್ನು ಮಾಡದಿರಲೆಂದು ಪ್ರೇರಣೆ ನೀಡುವ ಸಲುವಾಗಿ ರಸಪ್ರಶ್ನೆ ಕಾರ್ಯಕ್ರಮ ರೂಪಿಸಲಾಗಿದೆ’ ಎಂದು ವಿವರಿಸಿದರು.<br /> <br />‘ಸಂವಿಧಾನ ಕರಡು ಪ್ರತಿಯನ್ನು ಸಾರ್ವಜನಿಕ ಚರ್ಚೆಗೆ ಇಡಲಾಗಿತ್ತು. ಆಗಲೇ ಯಾವುದೇ ಸೌಲಭ್ಯಗಳಿಲ್ಲದ ಕಾಲದಲ್ಲಿ 7,695 ಪ್ರಶ್ನೆಗಳು ಬಂದಿದ್ದವು. ಆದರೆ ಇವತ್ತು ತಿದ್ದುಪಡಿಗಳನ್ನು ಸಾರ್ವಜನಿಕ ಚರ್ಚೆಗೆ ಇಡದೇ ಅಸಡ್ಡೆ ಮಾಡಲಾಗುತ್ತಿದೆ’ ಎಂದು ವಕೀಲ ಕೆ.ಪಿ. ಶ್ರೀಪಾಲ್ ಹೇಳಿದರು.<br /> <br />ಕಾಲೇಜಿನ ಪ್ರಾಚಾರ್ಯ ಪ್ರೊ.ಟಿ. ಅವಿನಾಶ್ ಅಧ್ಯಕ್ಷತೆ ವಹಿಸಿದ್ದರು. ಅನನ್ಯ ಗಿರೀಶ್ ಉಪಸ್ಥಿತರಿದ್ದರು. ಕಸಾಪ ತಾಲ್ಲೂಕು ಘಟಕದ ಅಧ್ಯಕ್ಷೆ ಮಹಾದೇವಿ, ಜಿ.ಆರ್. ಲವ, ಪ್ರಕಾಶ್ ಮರ್ಗನಹಳ್ಳಿ ಹಾಜರಿದ್ದರು. ಎಚ್.ಟಿ.ಕೃಷ್ಣಮೂರ್ತಿ ರಸಪ್ರಶ್ನೆ ಕಾರ್ಯಕ್ರಮ ನಡೆಸಿಕೊಟ್ಟರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>