ನಗರದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದ ಪ್ರತೀ ಜಿಲ್ಲೆಯಲ್ಲೂ ಜನರ ಸಮಸ್ಯೆಗಳು ವಿಭಿನ್ನವಾಗಿವೆ. ಮಲೆನಾಡಿನ ಶಿವಮೊಗ್ಗದ ಜನರ ಬೇಡಿಕೆಗಳು ಬೇರೆ ಇದ್ದರೆ, ಕರಾವಳಿ, ಉತ್ತರ ಕರ್ನಾಟಕದ ಬಯಲು ಸೀಮೆಯ ಜಿಲ್ಲೆಗಳ ತೊಂದರೆ ಬೇರೆ ಇವೆ. ಇವುಗಳನ್ನು ಗಮನದಲ್ಲಿಟ್ಟುಕೊಂಡು ಜಿಲ್ಲೆಗೊಂದು ಪ್ರಣಾಳಿಕೆ ರೂಪಿಸಲಾಗುತ್ತಿದೆ ಎಂದರು.