<p><strong>ಹೊಸನಗರ</strong>: ಮಲೆನಾಡಿನಲ್ಲಿ ಕುಡಿಯುವ ನೀರಿನ ಸಮಸ್ಯೆ ಉದ್ಭವಿಸುವ ಸಾಧ್ಯತೆ ಇದ್ದು, ಅಧಿಕಾರಿಗಳು ಸೋಮಾರಿತನ ತಾಳದೇ ಜಾಗೃತರಾಗಿರಬೇಕು ಎಂದು ಸಚಿವ ಮಧು ಬಂಗಾರಪ್ಪ ಸೂಚಿಸಿದರು.</p>.<p>ಇಲ್ಲಿನ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ನಡೆದ ಬರ ನಿರ್ವಹಣೆ ಮತ್ತು ಕುಡಿಯುವ ನೀರು ಸಮಸ್ಯೆ ಕುರಿತ ಅಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡಿದರು.</p>.<p>ತಾಲ್ಲೂಕಿನಲ್ಲಿ ಜನರಿಗೆ ಕುಡಿಯುವ ನೀರು ಸರಬರಾಜು ಮಾಡಲು ಯಾವುದೇ ತೊಂದರೆಯಾಗಬಾರದು. ಅಧಿಕಾರಿಗಳು ಲಭ್ಯವಿರುವ ನೀರನ್ನು ಪರಿಣಾಮಕಾರಿಯಾಗಿ ಬಳಸಿಕೊಳ್ಳಬೇಕು. ಈಗಿನಿಂದಲೇ ಅಗತ್ಯ ಯೋಜನೆ ರೂಪಿಸಿಕೊಳ್ಳಬೇಕು. ಗ್ರಾಮ ಪಂಚಾಯಿತಿ ಪಿಡಿಒಗಳು ತಮ್ಮ ವ್ಯಾಪ್ತಿಯಲ್ಲಿನ ನೀರು ಬಳಕೆ ಕುರಿತು ಯೋಜನೆ ತಯಾರಿಸಬೇಕು ಎಂದು ಸೂಚಿಸಿದರು.</p>.<p>ತೆರೆದಬಾವಿ ನಿರ್ಮಾಣಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು. ಇದರಿಂದ ನೀರು ಸರಬರಾಜು ಸುಲಭವಾಗಲಿದೆ ಎಂದು ತಿಳಿಸಿದರು.</p>.<p>ಮಳೆಗಾಲದಲ್ಲಿ ತಾಲ್ಲೂಕಿನ ಹಳ್ಳಕೊಳ್ಳಗಳು ತುಂಬಿ ಹರಿಯುವುದರಿಂದ ಕಾಲುಸಂಕ ನಿರ್ಮಾಣದ ಅಗತ್ಯವಿದ್ದು, ನರೇಗಾ ಅಡಿ ₹ 10 ಲಕ್ಷ ವೆಚ್ಚದ ಕಾಮಗಾರಿ ನಡೆಸಲು ಅವಕಾಶ ನೀಡಬೇಕು ಎಂದು ತಾಲ್ಲೂಕು ಪಂಚಾಯಿತಿ ಇಒ ನರೇಂದ್ರಕುಮಾರ್ ತಿಳಿಸಿದರು.</p>.<p>ತಾಲ್ಲೂಕಿನಲ್ಲಿ ಜಲಜೀವನ್ ಮಿಷನ್ ಯೋಜನೆ ಅಡಿ ಕುಡಿಯುವ ನೀರು ಕಾಮಗಾರಿ ಪ್ರಗತಿಯಲ್ಲಿದೆ. ಆದರೆ, ಪೈಪ್ಲೈನ್ ಕಾಮಗಾರಿಗೆ ಸೀಮಿತವಾಗಿದೆ. ಗ್ರಾಮಗಳಲ್ಲಿ ಓವರ್ ಹೆಡ್ ಟ್ಯಾಂಕ್ ನಿರ್ಮಾಣ ತ್ವರಿತಗತಿಯಲ್ಲಿ ನಡೆಸಬೇಕು ಎಂದು ಗ್ರಾಮ ಪಂಚಾಯಿತಿ ಪಿಡಿಒಗಳು ಸಚಿವರ ಗಮನಕ್ಕೆ ತಂದರು.</p>.<p>ಸಚಿವ ಮಧು ಬಂಗಾರಪ್ಪ, ‘ಜೆಜೆಎಂ ಯೋಜನೆ ಅಡಿ ಕೂಡಲೇ ಹಣ ಬಿಡುಗಡೆಗೊಳಿಸಿ ನೀರಿನ ಟ್ಯಾಂಕ್ ನಿರ್ಮಾಣ ಮಾಡಬೇಕು’ ಎಂದು ಸೂಚಿಸಿದರು.</p>.<p>ತಾಲ್ಲೂಕಿನಲ್ಲಿ ಶುದ್ಧ ಕುಡಿಯುವ ನೀರು ಪೂರೈಕೆ ಮಾಡಬೇಕು. ಇಲ್ಲಿನ ಕೆಲ ಗ್ರಾಮಗಳ ಬಾವಿಯಲ್ಲಿ ಪ್ಲೋರೈಡ್ಯುಕ್ತ ನೀರು ಇದ್ದು, ಇದನ್ನು ಶುದ್ಧಿಕರಿಸಿ ಕುಡಿಯಲು ಪೂರೈಸಬೇಕು ಎಂದು ಸೂಚಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೊಸನಗರ</strong>: ಮಲೆನಾಡಿನಲ್ಲಿ ಕುಡಿಯುವ ನೀರಿನ ಸಮಸ್ಯೆ ಉದ್ಭವಿಸುವ ಸಾಧ್ಯತೆ ಇದ್ದು, ಅಧಿಕಾರಿಗಳು ಸೋಮಾರಿತನ ತಾಳದೇ ಜಾಗೃತರಾಗಿರಬೇಕು ಎಂದು ಸಚಿವ ಮಧು ಬಂಗಾರಪ್ಪ ಸೂಚಿಸಿದರು.</p>.<p>ಇಲ್ಲಿನ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ನಡೆದ ಬರ ನಿರ್ವಹಣೆ ಮತ್ತು ಕುಡಿಯುವ ನೀರು ಸಮಸ್ಯೆ ಕುರಿತ ಅಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡಿದರು.</p>.<p>ತಾಲ್ಲೂಕಿನಲ್ಲಿ ಜನರಿಗೆ ಕುಡಿಯುವ ನೀರು ಸರಬರಾಜು ಮಾಡಲು ಯಾವುದೇ ತೊಂದರೆಯಾಗಬಾರದು. ಅಧಿಕಾರಿಗಳು ಲಭ್ಯವಿರುವ ನೀರನ್ನು ಪರಿಣಾಮಕಾರಿಯಾಗಿ ಬಳಸಿಕೊಳ್ಳಬೇಕು. ಈಗಿನಿಂದಲೇ ಅಗತ್ಯ ಯೋಜನೆ ರೂಪಿಸಿಕೊಳ್ಳಬೇಕು. ಗ್ರಾಮ ಪಂಚಾಯಿತಿ ಪಿಡಿಒಗಳು ತಮ್ಮ ವ್ಯಾಪ್ತಿಯಲ್ಲಿನ ನೀರು ಬಳಕೆ ಕುರಿತು ಯೋಜನೆ ತಯಾರಿಸಬೇಕು ಎಂದು ಸೂಚಿಸಿದರು.</p>.<p>ತೆರೆದಬಾವಿ ನಿರ್ಮಾಣಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು. ಇದರಿಂದ ನೀರು ಸರಬರಾಜು ಸುಲಭವಾಗಲಿದೆ ಎಂದು ತಿಳಿಸಿದರು.</p>.<p>ಮಳೆಗಾಲದಲ್ಲಿ ತಾಲ್ಲೂಕಿನ ಹಳ್ಳಕೊಳ್ಳಗಳು ತುಂಬಿ ಹರಿಯುವುದರಿಂದ ಕಾಲುಸಂಕ ನಿರ್ಮಾಣದ ಅಗತ್ಯವಿದ್ದು, ನರೇಗಾ ಅಡಿ ₹ 10 ಲಕ್ಷ ವೆಚ್ಚದ ಕಾಮಗಾರಿ ನಡೆಸಲು ಅವಕಾಶ ನೀಡಬೇಕು ಎಂದು ತಾಲ್ಲೂಕು ಪಂಚಾಯಿತಿ ಇಒ ನರೇಂದ್ರಕುಮಾರ್ ತಿಳಿಸಿದರು.</p>.<p>ತಾಲ್ಲೂಕಿನಲ್ಲಿ ಜಲಜೀವನ್ ಮಿಷನ್ ಯೋಜನೆ ಅಡಿ ಕುಡಿಯುವ ನೀರು ಕಾಮಗಾರಿ ಪ್ರಗತಿಯಲ್ಲಿದೆ. ಆದರೆ, ಪೈಪ್ಲೈನ್ ಕಾಮಗಾರಿಗೆ ಸೀಮಿತವಾಗಿದೆ. ಗ್ರಾಮಗಳಲ್ಲಿ ಓವರ್ ಹೆಡ್ ಟ್ಯಾಂಕ್ ನಿರ್ಮಾಣ ತ್ವರಿತಗತಿಯಲ್ಲಿ ನಡೆಸಬೇಕು ಎಂದು ಗ್ರಾಮ ಪಂಚಾಯಿತಿ ಪಿಡಿಒಗಳು ಸಚಿವರ ಗಮನಕ್ಕೆ ತಂದರು.</p>.<p>ಸಚಿವ ಮಧು ಬಂಗಾರಪ್ಪ, ‘ಜೆಜೆಎಂ ಯೋಜನೆ ಅಡಿ ಕೂಡಲೇ ಹಣ ಬಿಡುಗಡೆಗೊಳಿಸಿ ನೀರಿನ ಟ್ಯಾಂಕ್ ನಿರ್ಮಾಣ ಮಾಡಬೇಕು’ ಎಂದು ಸೂಚಿಸಿದರು.</p>.<p>ತಾಲ್ಲೂಕಿನಲ್ಲಿ ಶುದ್ಧ ಕುಡಿಯುವ ನೀರು ಪೂರೈಕೆ ಮಾಡಬೇಕು. ಇಲ್ಲಿನ ಕೆಲ ಗ್ರಾಮಗಳ ಬಾವಿಯಲ್ಲಿ ಪ್ಲೋರೈಡ್ಯುಕ್ತ ನೀರು ಇದ್ದು, ಇದನ್ನು ಶುದ್ಧಿಕರಿಸಿ ಕುಡಿಯಲು ಪೂರೈಸಬೇಕು ಎಂದು ಸೂಚಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>