<p><strong>ಸೊರಬ:</strong> ಸಚಿವ ಮಧು ಬಂಗಾರಪ್ಪ ಅವರು ತಮ್ಮ ಜನ್ಮದಿನದ ಅಂಗವಾಗಿ ಶನಿವಾರ ಬಂಗಾರ ಧಾಮಕ್ಕೆ ತೆರಳಿ ತಂದೆ ಎಸ್.ಬಂಗಾರಪ್ಪ ಹಾಗೂ ತಾಯಿ ಶುಕುಂತಲಾ ಬಂಗಾರಪ್ಪ ಅವರ ಸಮಾಧಿಗೆ ಪೂಜೆ ಸಲ್ಲಿಸಿದರು. </p>.<p>ಮಧು ಬಂಗಾರಪ್ಪ ಅವರ ಭಾವ, ನಟ ಶಿವರಾಜ್ ಕುಮಾರ್ ಹಾಗೂ ಅಕ್ಕ ಗೀತಾ ಶಿವರಾಜ್ ಕುಮಾರ್ ಮತ್ತು ಬೆಂಬಲಿಗರು ಜೊತೆಯಲ್ಲಿದ್ದರು.</p>.<p>ಮನರಂಜನೆ ಅಂಗವಾಗಿ ಶಹನಾಯಿ ಹಾಗೂ ಡೊಳ್ಳು ನೃತ್ಯ ಏರ್ಪಡಿಸಲಾಗಿತ್ತು. ಮಧು ಬಂಗಾರಪ್ಪ ಅವರು ಡೊಳ್ಳು ನೃತ್ಯದಲ್ಲಿ ಸ್ವತಃ ತಾಳ ಬಾರಿಸುವ ಮೂಲಕ ಹೆಜ್ಜೆ ಹಾಕಿದರು.</p>.<p>ಮಧು ಬಂಗಾರಪ್ಪ ಅವರು ತಮ್ಮ ತಂದೆ ಎಸ್.ಬಂಗಾರಪ್ಪ ಅವರ ಸಮಾಧಿ ಸ್ಥಳವನ್ನು ಅದ್ಭುತವಾಗಿ ನಿರ್ಮಿಸಿದ್ದಾರೆ. ಈ ಕ್ಷೇತ್ರ ಸಕಾರಾತ್ಮಕ ಶಕ್ತಿ ನೀಡುವಂತಿದೆ ಎಂದು ನಟ ಶಿವರಾಜ್ ಕುಮಾರ್ ತಿಳಿಸಿದರು.</p>.<p>ಶಿವರಾಜ್ ಕುಮಾರ್ ಅವರು ‘ಮುತ್ತಣ್ಣ’ ಚಲನಚಿತ್ರದ ‘ನನ್ನ ತಂಗಿಯ ಮದುವೆ’ ಗೀಹಾಡಿ ಹಾಡುತ್ತಾ ಕುಣಿಯುತ್ತಿದ್ದಂತೆ ಅಭಿಮಾನಿಗಳು ಸಿಳ್ಳೆ, ಕೇಕೆ ಹಾಕಿ ಸಂಭ್ರಮಿಸಿದರು. ಸಚಿವ ಮಧು ಬಂಗಾರಪ್ಪ ಅವರನ್ನು ಅಧಿಕಾರಿಗಳು, ಜನಪ್ರತಿನಿಧಿಗಳು ಹಾಗೂ ಅಭಿಮಾನಿಗಳು ಸನ್ಮಾನಿಸಿ ಶುಭ ಕೋರಿದರು.</p>.<p>ಹಾಪ್ ಕಾಮ್ಸ್ ಜಿಲ್ಲಾ ಅಧ್ಯಕ್ಷ ಕೆ.ವಿ.ಗೌಡ, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಶಿವಲಿಂಗಗೌಡ, ಫಯಾಜ್ ಅಹಮ್ಮದ್, ಎಚ್.ಗಣಪತಿ, ಉಮಾಪತಿ, ಭರತ್ ತಾಳಗುಪ್ಪ, ಕಾಂಗ್ರೆಸ್ ಯುವ ಘಟಕದ ಅಧ್ಯಕ್ಷ ಪ್ರವೀಣ್ ಕುಮಾರ್, ಸಂಜಯ್ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸೊರಬ:</strong> ಸಚಿವ ಮಧು ಬಂಗಾರಪ್ಪ ಅವರು ತಮ್ಮ ಜನ್ಮದಿನದ ಅಂಗವಾಗಿ ಶನಿವಾರ ಬಂಗಾರ ಧಾಮಕ್ಕೆ ತೆರಳಿ ತಂದೆ ಎಸ್.ಬಂಗಾರಪ್ಪ ಹಾಗೂ ತಾಯಿ ಶುಕುಂತಲಾ ಬಂಗಾರಪ್ಪ ಅವರ ಸಮಾಧಿಗೆ ಪೂಜೆ ಸಲ್ಲಿಸಿದರು. </p>.<p>ಮಧು ಬಂಗಾರಪ್ಪ ಅವರ ಭಾವ, ನಟ ಶಿವರಾಜ್ ಕುಮಾರ್ ಹಾಗೂ ಅಕ್ಕ ಗೀತಾ ಶಿವರಾಜ್ ಕುಮಾರ್ ಮತ್ತು ಬೆಂಬಲಿಗರು ಜೊತೆಯಲ್ಲಿದ್ದರು.</p>.<p>ಮನರಂಜನೆ ಅಂಗವಾಗಿ ಶಹನಾಯಿ ಹಾಗೂ ಡೊಳ್ಳು ನೃತ್ಯ ಏರ್ಪಡಿಸಲಾಗಿತ್ತು. ಮಧು ಬಂಗಾರಪ್ಪ ಅವರು ಡೊಳ್ಳು ನೃತ್ಯದಲ್ಲಿ ಸ್ವತಃ ತಾಳ ಬಾರಿಸುವ ಮೂಲಕ ಹೆಜ್ಜೆ ಹಾಕಿದರು.</p>.<p>ಮಧು ಬಂಗಾರಪ್ಪ ಅವರು ತಮ್ಮ ತಂದೆ ಎಸ್.ಬಂಗಾರಪ್ಪ ಅವರ ಸಮಾಧಿ ಸ್ಥಳವನ್ನು ಅದ್ಭುತವಾಗಿ ನಿರ್ಮಿಸಿದ್ದಾರೆ. ಈ ಕ್ಷೇತ್ರ ಸಕಾರಾತ್ಮಕ ಶಕ್ತಿ ನೀಡುವಂತಿದೆ ಎಂದು ನಟ ಶಿವರಾಜ್ ಕುಮಾರ್ ತಿಳಿಸಿದರು.</p>.<p>ಶಿವರಾಜ್ ಕುಮಾರ್ ಅವರು ‘ಮುತ್ತಣ್ಣ’ ಚಲನಚಿತ್ರದ ‘ನನ್ನ ತಂಗಿಯ ಮದುವೆ’ ಗೀಹಾಡಿ ಹಾಡುತ್ತಾ ಕುಣಿಯುತ್ತಿದ್ದಂತೆ ಅಭಿಮಾನಿಗಳು ಸಿಳ್ಳೆ, ಕೇಕೆ ಹಾಕಿ ಸಂಭ್ರಮಿಸಿದರು. ಸಚಿವ ಮಧು ಬಂಗಾರಪ್ಪ ಅವರನ್ನು ಅಧಿಕಾರಿಗಳು, ಜನಪ್ರತಿನಿಧಿಗಳು ಹಾಗೂ ಅಭಿಮಾನಿಗಳು ಸನ್ಮಾನಿಸಿ ಶುಭ ಕೋರಿದರು.</p>.<p>ಹಾಪ್ ಕಾಮ್ಸ್ ಜಿಲ್ಲಾ ಅಧ್ಯಕ್ಷ ಕೆ.ವಿ.ಗೌಡ, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಶಿವಲಿಂಗಗೌಡ, ಫಯಾಜ್ ಅಹಮ್ಮದ್, ಎಚ್.ಗಣಪತಿ, ಉಮಾಪತಿ, ಭರತ್ ತಾಳಗುಪ್ಪ, ಕಾಂಗ್ರೆಸ್ ಯುವ ಘಟಕದ ಅಧ್ಯಕ್ಷ ಪ್ರವೀಣ್ ಕುಮಾರ್, ಸಂಜಯ್ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>