<p><strong>ಶಿವಮೊಗ್ಗ:</strong> ‘ಆಧುನಿಕ ತಂತ್ರಜ್ಞಾನ ಯುಗದಲ್ಲಿಯೂ ಮಡಿವಾಳ ಸಮುದಾಯದವರು ಹಿಂದುಳಿದಿದ್ದಾರೆ. ಆದ್ದರಿಂದ, ಬಡತನದ ಸಂಕೋಲೆಯಿಂದ ಹೊರ ಬಂದು ಸುಂದರ ಬದುಕು ರೂಪಿಸಿಕೊಳ್ಳಬೇಕು. ಇದು ಶಿಕ್ಷಣದಿಂದ ಮಾತ್ರ ಸಾಧ್ಯ’ ಎಂದು ಮುಖ್ಯಮಂತ್ರಿಯವರ ಆರೋಗ್ಯ ಸಲಹೆಗಾರ ಡಾ.ಎಚ್. ರವಿಕುಮಾರ್ ಕಿವಿಮಾತು ಹೇಳಿದರು.</p>.<p>ಮಡಿವಾಳ ಸಮಾಜದ ಜಿಲ್ಲಾ ಘಟಕ ಹಾಗೂ ‘ಮನ ಮನೆಗೆ ಮಾಚಿದೇವ’ ಕಾರ್ಯಕ್ರಮ ಆಚರಣೆ ಸಮಿತಿಯಿಂದ ಇಲ್ಲಿನ ಅಂಬೇಡ್ಕರ್ ಭವನದಲ್ಲಿ ಗುರುವಾರ ಶ್ರಾವಣ ಮಾಸದ ನಿಮಿತ್ತ ಹಮ್ಮಿಕೊಂಡಿದ್ದ ವಿವಿಧ ಕಾರ್ಯಕ್ರಮಗಳನ್ನು ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ಮಡಿವಾಳ ಸಮಾಜದಲ್ಲಿ ಜಾಗೃತಿ ಮೂಡಿಸುವ ಕೆಲಸವಾಗಬೇಕು. ಮಗು ಅತ್ತಾಗ ಮಾತ್ರ ತಾಯಿ ಹಾಲು ಕುಡಿಸುತ್ತಾಳೆ. ನಮ್ಮ ಸಮಾಜದ ಏಳಿಗೆಗಾಗಿ ನಾವೇ ಎಲ್ಲರ ಮನೆ ಬಾಗಿಲಿಗೆ ಹೋಗಿ ಸಮಾಜವನ್ನು ಒಗ್ಗೂಡಿಸುವ ಕಾರ್ಯಕ್ಕೆ ಮುಂದಾಗಬೇಕು’ ಎಂದರು.</p>.<p>‘ಸಂವಿಧಾನಬದ್ಧ ಹಕ್ಕುಗಳಿಗಾಗಿ, ಸರ್ವತೋಮುಖ ಅಭಿವೃದ್ಧಿಗಾಗಿ ತಳಸಮುದಾಯಗಳು ಸಂಘಟಿತವಾಗಬೇಕು. ನಿತ್ಯ ಕಾಯಕದಲ್ಲಿ ತೊಡಗಿರುವ ಮಡಿವಾಳ ಸಮಾಜದ ಒಗ್ಗಟ್ಟಿನ ಸಂಘಟನೆಗಾಗಿ ಜಾಗೃತಿ ಅವಶ್ಯಕತೆ ಇದೆ’ ಎಂದು ವಿಧಾನ ಪರಿಷತ್ ಸದಸ್ಯ ಡಾ.ಧನಂಜಯ ಸರ್ಜಿ ಹೇಳಿದರು.</p>.<p>‘ಅಸಂಘಟಿತ ಹಾಗೂ ಜನಸಂಖ್ಯೆಯಲ್ಲಿ ಕಡಿಮೆ ಇರುವ ಕಾರಣ ರಾಜಕೀಯವಾಗಿ ಮೂಲೆಗುಂಪು ಆಗಿದ್ದೇವೆ. ನ್ಯಾಯಬದ್ಧ ಹಾಗೂ ಸಾಮಾಜಿಕ ನ್ಯಾಯದ ಅಡಿಯಲ್ಲಿ ನಮ್ಮ ಸಮುದಾಯಕ್ಕೆ ಆಳುವ ಸರ್ಕಾರಗಳು ನ್ಯಾಯ ದೊರಕಿಸಿಕೊಡಬೇಕು’ ಎಂದು ಸಮಾಜದ ಜಿಲ್ಲಾ ಘಟಕದ ಅಧ್ಯಕ್ಷ ಸದಾಶಿವಪ್ಪ ಒತ್ತಾಯಿಸಿದರು.</p>.<p>ಪ್ರಮುಖರಾದ ಮಧುಕುಮಾರ್, ಗಣೇಶ್, ಸುಧೀರ್ ಎಸ್. ಗಂಗಪ್ಪ, ಕುಮಾರ್, ತುಷಾರ್ ಡಿ. ಹೊಸೂರು ಇದ್ದರು.</p>.<p><strong>‘ಮಾಚಿದೇವರ ಆದರ್ಶ ಪಾಲಿಸಿ’</strong> </p><p>‘ಮಾಚಿದೇವ ಅವರು ಸಮಾಜದಲ್ಲಿ ತುಳಿತಕ್ಕೆ ಒಳಗಾದವರ ನೋವುಗಳನ್ನು ವಚನಗಳಲ್ಲಿ ಬಿಚ್ಚಿಟ್ಟರು. ಆ ಮೂಲಕ 12ನೇ ಶತಮಾನದಲ್ಲಿ ಮಹಾನ್ ಸಮಾಜ ಸುಧಾರಕರಾಗಿ ಹೊರಹೊಮ್ಮಿದರು. ಅವರ ವಚನಗಳ ಆಶಯಗಳನ್ನು ಪ್ರತಿಯೊಬ್ಬರೂ ಅಳವಡಿಸಿಕೊಳ್ಳಬೇಕು’ ಎಂದು ಮುಖ್ಯಮಂತ್ರಿಯವರ ಆರೋಗ್ಯ ಸಲಹೆಗಾರ ಡಾ.ಎಚ್. ರವಿಕುಮಾರ್ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿವಮೊಗ್ಗ:</strong> ‘ಆಧುನಿಕ ತಂತ್ರಜ್ಞಾನ ಯುಗದಲ್ಲಿಯೂ ಮಡಿವಾಳ ಸಮುದಾಯದವರು ಹಿಂದುಳಿದಿದ್ದಾರೆ. ಆದ್ದರಿಂದ, ಬಡತನದ ಸಂಕೋಲೆಯಿಂದ ಹೊರ ಬಂದು ಸುಂದರ ಬದುಕು ರೂಪಿಸಿಕೊಳ್ಳಬೇಕು. ಇದು ಶಿಕ್ಷಣದಿಂದ ಮಾತ್ರ ಸಾಧ್ಯ’ ಎಂದು ಮುಖ್ಯಮಂತ್ರಿಯವರ ಆರೋಗ್ಯ ಸಲಹೆಗಾರ ಡಾ.ಎಚ್. ರವಿಕುಮಾರ್ ಕಿವಿಮಾತು ಹೇಳಿದರು.</p>.<p>ಮಡಿವಾಳ ಸಮಾಜದ ಜಿಲ್ಲಾ ಘಟಕ ಹಾಗೂ ‘ಮನ ಮನೆಗೆ ಮಾಚಿದೇವ’ ಕಾರ್ಯಕ್ರಮ ಆಚರಣೆ ಸಮಿತಿಯಿಂದ ಇಲ್ಲಿನ ಅಂಬೇಡ್ಕರ್ ಭವನದಲ್ಲಿ ಗುರುವಾರ ಶ್ರಾವಣ ಮಾಸದ ನಿಮಿತ್ತ ಹಮ್ಮಿಕೊಂಡಿದ್ದ ವಿವಿಧ ಕಾರ್ಯಕ್ರಮಗಳನ್ನು ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ಮಡಿವಾಳ ಸಮಾಜದಲ್ಲಿ ಜಾಗೃತಿ ಮೂಡಿಸುವ ಕೆಲಸವಾಗಬೇಕು. ಮಗು ಅತ್ತಾಗ ಮಾತ್ರ ತಾಯಿ ಹಾಲು ಕುಡಿಸುತ್ತಾಳೆ. ನಮ್ಮ ಸಮಾಜದ ಏಳಿಗೆಗಾಗಿ ನಾವೇ ಎಲ್ಲರ ಮನೆ ಬಾಗಿಲಿಗೆ ಹೋಗಿ ಸಮಾಜವನ್ನು ಒಗ್ಗೂಡಿಸುವ ಕಾರ್ಯಕ್ಕೆ ಮುಂದಾಗಬೇಕು’ ಎಂದರು.</p>.<p>‘ಸಂವಿಧಾನಬದ್ಧ ಹಕ್ಕುಗಳಿಗಾಗಿ, ಸರ್ವತೋಮುಖ ಅಭಿವೃದ್ಧಿಗಾಗಿ ತಳಸಮುದಾಯಗಳು ಸಂಘಟಿತವಾಗಬೇಕು. ನಿತ್ಯ ಕಾಯಕದಲ್ಲಿ ತೊಡಗಿರುವ ಮಡಿವಾಳ ಸಮಾಜದ ಒಗ್ಗಟ್ಟಿನ ಸಂಘಟನೆಗಾಗಿ ಜಾಗೃತಿ ಅವಶ್ಯಕತೆ ಇದೆ’ ಎಂದು ವಿಧಾನ ಪರಿಷತ್ ಸದಸ್ಯ ಡಾ.ಧನಂಜಯ ಸರ್ಜಿ ಹೇಳಿದರು.</p>.<p>‘ಅಸಂಘಟಿತ ಹಾಗೂ ಜನಸಂಖ್ಯೆಯಲ್ಲಿ ಕಡಿಮೆ ಇರುವ ಕಾರಣ ರಾಜಕೀಯವಾಗಿ ಮೂಲೆಗುಂಪು ಆಗಿದ್ದೇವೆ. ನ್ಯಾಯಬದ್ಧ ಹಾಗೂ ಸಾಮಾಜಿಕ ನ್ಯಾಯದ ಅಡಿಯಲ್ಲಿ ನಮ್ಮ ಸಮುದಾಯಕ್ಕೆ ಆಳುವ ಸರ್ಕಾರಗಳು ನ್ಯಾಯ ದೊರಕಿಸಿಕೊಡಬೇಕು’ ಎಂದು ಸಮಾಜದ ಜಿಲ್ಲಾ ಘಟಕದ ಅಧ್ಯಕ್ಷ ಸದಾಶಿವಪ್ಪ ಒತ್ತಾಯಿಸಿದರು.</p>.<p>ಪ್ರಮುಖರಾದ ಮಧುಕುಮಾರ್, ಗಣೇಶ್, ಸುಧೀರ್ ಎಸ್. ಗಂಗಪ್ಪ, ಕುಮಾರ್, ತುಷಾರ್ ಡಿ. ಹೊಸೂರು ಇದ್ದರು.</p>.<p><strong>‘ಮಾಚಿದೇವರ ಆದರ್ಶ ಪಾಲಿಸಿ’</strong> </p><p>‘ಮಾಚಿದೇವ ಅವರು ಸಮಾಜದಲ್ಲಿ ತುಳಿತಕ್ಕೆ ಒಳಗಾದವರ ನೋವುಗಳನ್ನು ವಚನಗಳಲ್ಲಿ ಬಿಚ್ಚಿಟ್ಟರು. ಆ ಮೂಲಕ 12ನೇ ಶತಮಾನದಲ್ಲಿ ಮಹಾನ್ ಸಮಾಜ ಸುಧಾರಕರಾಗಿ ಹೊರಹೊಮ್ಮಿದರು. ಅವರ ವಚನಗಳ ಆಶಯಗಳನ್ನು ಪ್ರತಿಯೊಬ್ಬರೂ ಅಳವಡಿಸಿಕೊಳ್ಳಬೇಕು’ ಎಂದು ಮುಖ್ಯಮಂತ್ರಿಯವರ ಆರೋಗ್ಯ ಸಲಹೆಗಾರ ಡಾ.ಎಚ್. ರವಿಕುಮಾರ್ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>