<p><strong>ಶಿವಮೊಗ್ಗ</strong>: ‘ಹಿಂಸೆ, ಅರಾಜಕತೆ, ಭ್ರಷ್ಟಾಚಾರ ತಾಂಡವಾಡುತ್ತಿರುವ ಈ ದಿನಗಳಲ್ಲಿ ಜಗತ್ತಿಗೆ ಅಹಿಂಸೆ, ವಿಶ್ವ ಭ್ರಾತೃತ್ವ, ಗ್ರಾಮ ಸ್ವರಾಜ್ಯ ಸಮಾನತೆ, ಸರಳತೆಯ ಪಾಠ ಹೇಳಿಕೊಟ್ಟ ಮಹಾತ್ಮ ಗಾಂಧೀಜಿ ಇಂದಿಗೂ ಪ್ರಸ್ತುತ’ ಎಂದು ಕರ್ನಾಟಕ ಗಾಂಧಿ ಸ್ಮಾರಕ ನಿಧಿಯ ಅಧ್ಯಕ್ಷ ವೂಡೆ ಪಿ. ಕೃಷ್ಣ ಅಭಿಪ್ರಾಯಪಟ್ಟರು.</p>.<p>ಇಲ್ಲಿನ ಸಹ್ಯಾದ್ರಿ ವಿಜ್ಞಾನ ಕಾಲೇಜಿನಲ್ಲಿ ಸೋಮವಾರ ಆರಂಭವಾದ ‘ಗಾಂಧೀಜಿ ಚಿಂತನೆಗಳ ಪ್ರಸ್ತುತತೆ, ಸತ್ಯಶೋಧನೆ 100’ ವಿಷಯದ ಬಗ್ಗೆ ಎರಡು ದಿನಗಳ ರಾಜ್ಯ ಮಟ್ಟದ ವಿಚಾರ ಸಂಕಿರಣ ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ಸಮಾಜ, ಸಾಮಾಜಿಕ, ನೈತಿಕ ಸ್ವಾತಂತ್ರ್ಯ ಹಾಗೂ ಗಾಂಧಿ ಅವರ ಜೀವನ ಸಂದೇಶವನ್ನು ವಿವೇಚನಾತ್ಮಕವಾಗಿ ಚಿಂತಿಸಿದಲ್ಲಿ ಮೂಲಭೂತವಾದಿಗಳ, ಕೋಮುವಾದಿಗಳ ವಿರುದ್ಧ ಹೋರಾಟ ನಡೆಸಬಹುದು. ಬಹುತ್ವದ ಚಿಂತನೆ ನಮ್ಮ ಶಕ್ತಿಯಾಗಿದೆ. ಗಾಂಧೀ ಪ್ರಪಂಚಕ್ಕೆ ಬೆಳಕಾದವರು’ ಎಂದರು.</p>.<p>‘ವರ್ತಮಾನದಲ್ಲಿ ಗಾಂಧಿ ನಮಗೆ ಪ್ರಸ್ತುತ. ಗಾಂಧೀಜಿಯವರ ಬದುಕಿನ ಸಂದೇಶ ನೀಡಿದ ಸತ್ಯಶೋಧನೆಗೆ 100 ಸಂವತ್ಸರಗಳು ತುಂಬಿರುವ ಆತ್ಮಕಥನವನ್ನು ಇಂದು ಮತ್ತೆ ಮತ್ತೆ ಅಧ್ಯಯನ ಮಾಡಿ ಅರ್ಥೈಸಿಕೊಳ್ಳಬೇಕಿದೆ’ ಎಂದರು.</p>.<p>ಕುವೆಂಪು ವಿ.ವಿ. ಕನ್ನಡ ಅಧ್ಯಾಪಕರ ವೇದಿಕೆಯ ಅಧ್ಯಕ್ಷ ಪ್ರೊ. ಕುಂಸಿ ಉಮೇಶ್ ಮಾತನಾಡಿ, ‘ಗಾಂಧೀಜಿಯವರ ಹೋರಾಟಕ್ಕೆ ಇಂಬುಕೊಟ್ಟು ಮೊದಲು ಸ್ವಾತಂತ್ರ್ಯ ಪಡೆದ ಗ್ರಾಮ ಈಸೂರು. ನಮ್ಮ ನೆರೆಯದ್ದು. ಈ ನಿಟ್ಟಿನಲ್ಲಿ ಈ ವಿಚಾರ ಸಂಕಿರಣ ಸಕಾಲಿಕ’ ಎಂದು ಹೇಳಿದರು.</p>.<p>ಮಂಡ್ಯ ಕರ್ನಾಟಕ ಸಂಘದ ಅಧ್ಯಕ್ಷ ಪ್ರೊ.ಜಯಪ್ರಕಾಶ ಗೌಡ ಮಾತನಾಡಿ, ‘ಗಾಂಧಿ ವಿಚಾರವಾದವು ಇಂದಿನ ವಿದ್ಯಾರ್ಥಿಗಳಿಗೆ ಅಗತ್ಯ ಮತ್ತು ಅನಿವಾರ್ಯತೆ ಇದ್ದು, ವಿಚಾರ ಸಂಕಿರಣ ಹಮ್ಮಿಕೊಂಡಿರುವುದು ಅರ್ಥಪೂರ್ಣ’ ಎಂದರು.</p>.<p>ಕಾರ್ಯಕ್ರಮದ ಸಂಚಾಲಕ ಪ್ರೊ.ಹಾ.ಮ.ನಾಗಾರ್ಜುನ ಪ್ರಾಸ್ತಾವಿಕವಾಗಿ ಮಾತನಾಡಿದರು. ಕಾಲೇಜಿನ ಪ್ರಾಚಾರ್ಯರಾದ ಪ್ರೊ.ಎನ್.ರಾಜೇಶ್ವರಿ ಅಧ್ಯಕ್ಷತೆ ವಹಿಸಿದ್ದರು.</p>.<p>ಕೆ.ಬಿ.ಸಿ ಸೇವಾ ಟ್ರಸ್ಟ್ ಅಧ್ಯಕ್ಷ ಕತ್ತಿಗೆ ಚನ್ನಪ್ಪ, ಮಂಡ್ಯ ಕರ್ನಾಟಕ ಸಂಘದ ಕಾರ್ಯದರ್ಶಿಗಳಾದ ಸೋಮಶೇಖರ್, ಉದಯಶಂಕರ್, ಹರೀಶ್ ಕುಮಾರ್ ಹಾಗೂ ಹಿರಿಯ ಗಾಂಧೀವಾದಿ ಪ್ರೊ.ಸೋಮಶೇಖರ್, ರತ್ನಯ್ಯ ಉಪಸ್ಥಿತರಿದ್ದರು.</p>.<p>ಪ್ರೊ.ಶಂಕರೇಗೌಡ, ಪದ್ಮಿನಿ ನಾಗರಾಜು, ಪ್ರೊ. ತುಕಾರಾಂ, ಪ್ರೊ.ಚಿತ್ತಯ್ಯ ಪೂಜಾರ್ ಉಪನ್ಯಾಸ ನೀಡಿದರು. ಪರಿಣತಿ, ವೈಷ್ಣವಿ, ಕಾರ್ತಿಕ, ಸಿಂಧೂ, ಅಮಿತ್, ನವೀನ ಕಾರ್ಯಕ್ರಮ ನಿರೂಪಿಸಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿವಮೊಗ್ಗ</strong>: ‘ಹಿಂಸೆ, ಅರಾಜಕತೆ, ಭ್ರಷ್ಟಾಚಾರ ತಾಂಡವಾಡುತ್ತಿರುವ ಈ ದಿನಗಳಲ್ಲಿ ಜಗತ್ತಿಗೆ ಅಹಿಂಸೆ, ವಿಶ್ವ ಭ್ರಾತೃತ್ವ, ಗ್ರಾಮ ಸ್ವರಾಜ್ಯ ಸಮಾನತೆ, ಸರಳತೆಯ ಪಾಠ ಹೇಳಿಕೊಟ್ಟ ಮಹಾತ್ಮ ಗಾಂಧೀಜಿ ಇಂದಿಗೂ ಪ್ರಸ್ತುತ’ ಎಂದು ಕರ್ನಾಟಕ ಗಾಂಧಿ ಸ್ಮಾರಕ ನಿಧಿಯ ಅಧ್ಯಕ್ಷ ವೂಡೆ ಪಿ. ಕೃಷ್ಣ ಅಭಿಪ್ರಾಯಪಟ್ಟರು.</p>.<p>ಇಲ್ಲಿನ ಸಹ್ಯಾದ್ರಿ ವಿಜ್ಞಾನ ಕಾಲೇಜಿನಲ್ಲಿ ಸೋಮವಾರ ಆರಂಭವಾದ ‘ಗಾಂಧೀಜಿ ಚಿಂತನೆಗಳ ಪ್ರಸ್ತುತತೆ, ಸತ್ಯಶೋಧನೆ 100’ ವಿಷಯದ ಬಗ್ಗೆ ಎರಡು ದಿನಗಳ ರಾಜ್ಯ ಮಟ್ಟದ ವಿಚಾರ ಸಂಕಿರಣ ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ಸಮಾಜ, ಸಾಮಾಜಿಕ, ನೈತಿಕ ಸ್ವಾತಂತ್ರ್ಯ ಹಾಗೂ ಗಾಂಧಿ ಅವರ ಜೀವನ ಸಂದೇಶವನ್ನು ವಿವೇಚನಾತ್ಮಕವಾಗಿ ಚಿಂತಿಸಿದಲ್ಲಿ ಮೂಲಭೂತವಾದಿಗಳ, ಕೋಮುವಾದಿಗಳ ವಿರುದ್ಧ ಹೋರಾಟ ನಡೆಸಬಹುದು. ಬಹುತ್ವದ ಚಿಂತನೆ ನಮ್ಮ ಶಕ್ತಿಯಾಗಿದೆ. ಗಾಂಧೀ ಪ್ರಪಂಚಕ್ಕೆ ಬೆಳಕಾದವರು’ ಎಂದರು.</p>.<p>‘ವರ್ತಮಾನದಲ್ಲಿ ಗಾಂಧಿ ನಮಗೆ ಪ್ರಸ್ತುತ. ಗಾಂಧೀಜಿಯವರ ಬದುಕಿನ ಸಂದೇಶ ನೀಡಿದ ಸತ್ಯಶೋಧನೆಗೆ 100 ಸಂವತ್ಸರಗಳು ತುಂಬಿರುವ ಆತ್ಮಕಥನವನ್ನು ಇಂದು ಮತ್ತೆ ಮತ್ತೆ ಅಧ್ಯಯನ ಮಾಡಿ ಅರ್ಥೈಸಿಕೊಳ್ಳಬೇಕಿದೆ’ ಎಂದರು.</p>.<p>ಕುವೆಂಪು ವಿ.ವಿ. ಕನ್ನಡ ಅಧ್ಯಾಪಕರ ವೇದಿಕೆಯ ಅಧ್ಯಕ್ಷ ಪ್ರೊ. ಕುಂಸಿ ಉಮೇಶ್ ಮಾತನಾಡಿ, ‘ಗಾಂಧೀಜಿಯವರ ಹೋರಾಟಕ್ಕೆ ಇಂಬುಕೊಟ್ಟು ಮೊದಲು ಸ್ವಾತಂತ್ರ್ಯ ಪಡೆದ ಗ್ರಾಮ ಈಸೂರು. ನಮ್ಮ ನೆರೆಯದ್ದು. ಈ ನಿಟ್ಟಿನಲ್ಲಿ ಈ ವಿಚಾರ ಸಂಕಿರಣ ಸಕಾಲಿಕ’ ಎಂದು ಹೇಳಿದರು.</p>.<p>ಮಂಡ್ಯ ಕರ್ನಾಟಕ ಸಂಘದ ಅಧ್ಯಕ್ಷ ಪ್ರೊ.ಜಯಪ್ರಕಾಶ ಗೌಡ ಮಾತನಾಡಿ, ‘ಗಾಂಧಿ ವಿಚಾರವಾದವು ಇಂದಿನ ವಿದ್ಯಾರ್ಥಿಗಳಿಗೆ ಅಗತ್ಯ ಮತ್ತು ಅನಿವಾರ್ಯತೆ ಇದ್ದು, ವಿಚಾರ ಸಂಕಿರಣ ಹಮ್ಮಿಕೊಂಡಿರುವುದು ಅರ್ಥಪೂರ್ಣ’ ಎಂದರು.</p>.<p>ಕಾರ್ಯಕ್ರಮದ ಸಂಚಾಲಕ ಪ್ರೊ.ಹಾ.ಮ.ನಾಗಾರ್ಜುನ ಪ್ರಾಸ್ತಾವಿಕವಾಗಿ ಮಾತನಾಡಿದರು. ಕಾಲೇಜಿನ ಪ್ರಾಚಾರ್ಯರಾದ ಪ್ರೊ.ಎನ್.ರಾಜೇಶ್ವರಿ ಅಧ್ಯಕ್ಷತೆ ವಹಿಸಿದ್ದರು.</p>.<p>ಕೆ.ಬಿ.ಸಿ ಸೇವಾ ಟ್ರಸ್ಟ್ ಅಧ್ಯಕ್ಷ ಕತ್ತಿಗೆ ಚನ್ನಪ್ಪ, ಮಂಡ್ಯ ಕರ್ನಾಟಕ ಸಂಘದ ಕಾರ್ಯದರ್ಶಿಗಳಾದ ಸೋಮಶೇಖರ್, ಉದಯಶಂಕರ್, ಹರೀಶ್ ಕುಮಾರ್ ಹಾಗೂ ಹಿರಿಯ ಗಾಂಧೀವಾದಿ ಪ್ರೊ.ಸೋಮಶೇಖರ್, ರತ್ನಯ್ಯ ಉಪಸ್ಥಿತರಿದ್ದರು.</p>.<p>ಪ್ರೊ.ಶಂಕರೇಗೌಡ, ಪದ್ಮಿನಿ ನಾಗರಾಜು, ಪ್ರೊ. ತುಕಾರಾಂ, ಪ್ರೊ.ಚಿತ್ತಯ್ಯ ಪೂಜಾರ್ ಉಪನ್ಯಾಸ ನೀಡಿದರು. ಪರಿಣತಿ, ವೈಷ್ಣವಿ, ಕಾರ್ತಿಕ, ಸಿಂಧೂ, ಅಮಿತ್, ನವೀನ ಕಾರ್ಯಕ್ರಮ ನಿರೂಪಿಸಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>