<p><strong>ರಿಪ್ಪನ್ಪೇಟೆ</strong>:ಭಗವಾನ್ ಮಹಾವೀರರ ಅಹಿಂಸಾ ತತ್ವ, ಸಂದೇಶಗಳು ಸರ್ವ ಕಾಲಕ್ಕೂ ಪ್ರಸ್ತುತ ಎಂದು ಹೊಂಬುಜ ಮಠದ ಪೀಠಾಧಿಕಾರಿ ದೇವೇಂದ್ರ ಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯ ಸ್ವಾಮೀಜಿ ಹೇಳಿದರು.</p>.<p>ಹೊಂಬುಜ ಕ್ಷೇತ್ರದಲ್ಲಿ ಮಹಾವೀರ ಜಯಂತಿ ಅಂಗವಾಗಿ ನಡೆದ ಧಾರ್ಮಿಕ ಸಭೆಯಲ್ಲಿ ಅವರು ಮಾತನಾಡಿದರು.</p>.<p>ಪ್ರಸಕ್ತ ಕಾಲಮಾನದಲ್ಲಿ ಮಾನವನ ಸಂಕುಚಿತ ಮನೋಭಾವದಿಂದ ಮಾನವೀಯ ಸಂಬಂಧಗಳ ಮೌಲ್ಯ ಕಳೆದುಕೊಳ್ಳುತ್ತಿರುವುದು ಬೇಸರದ ಸಂಗತಿ.ಪ್ರತಿಯೊಬ್ಬ ವ್ಯಕ್ತಿಯೂ ಸದೃಢ ಸಮಾಜ ನಮ್ಮ ಗುರಿಯಾಗಿಸಿಕೊಂಡು ‘ಜೀವಿಸು ಜೀವಿಸಲು ಬಿಡು ’ ಎಂಬ ಮಹಾವೀರರ ಸಂದೇಶವನ್ನು ಜೀವನದಲ್ಲಿ ಅಳವಡಿಸಿಕೊಂಡು ಯುವ ಸಮೂಹವನ್ನು ಸನ್ಮಾರ್ಗದ ದಿಕ್ಕಿನಲ್ಲಿ ಕರೆದೊಯ್ಯಬೇಕಿದೆ ಎಂದು ಸಲಹೆ ನೀಡಿದರು.</p>.<p>ಮಹಾವೀರ ಜಯಂತಿ ಅಂಗವಾಗಿ ವಿಶೇಷ ಪೂಜಾ ಕೈಂಕರ್ಯಗಳು ನಡೆದವು. ನಂತರ ಊರಿನ ಪ್ರಮುಖ ರಸ್ತೆಯಲ್ಲಿ ಪಲ್ಲಕ್ಕಿ ಉತ್ಸವ ನಡೆಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಿಪ್ಪನ್ಪೇಟೆ</strong>:ಭಗವಾನ್ ಮಹಾವೀರರ ಅಹಿಂಸಾ ತತ್ವ, ಸಂದೇಶಗಳು ಸರ್ವ ಕಾಲಕ್ಕೂ ಪ್ರಸ್ತುತ ಎಂದು ಹೊಂಬುಜ ಮಠದ ಪೀಠಾಧಿಕಾರಿ ದೇವೇಂದ್ರ ಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯ ಸ್ವಾಮೀಜಿ ಹೇಳಿದರು.</p>.<p>ಹೊಂಬುಜ ಕ್ಷೇತ್ರದಲ್ಲಿ ಮಹಾವೀರ ಜಯಂತಿ ಅಂಗವಾಗಿ ನಡೆದ ಧಾರ್ಮಿಕ ಸಭೆಯಲ್ಲಿ ಅವರು ಮಾತನಾಡಿದರು.</p>.<p>ಪ್ರಸಕ್ತ ಕಾಲಮಾನದಲ್ಲಿ ಮಾನವನ ಸಂಕುಚಿತ ಮನೋಭಾವದಿಂದ ಮಾನವೀಯ ಸಂಬಂಧಗಳ ಮೌಲ್ಯ ಕಳೆದುಕೊಳ್ಳುತ್ತಿರುವುದು ಬೇಸರದ ಸಂಗತಿ.ಪ್ರತಿಯೊಬ್ಬ ವ್ಯಕ್ತಿಯೂ ಸದೃಢ ಸಮಾಜ ನಮ್ಮ ಗುರಿಯಾಗಿಸಿಕೊಂಡು ‘ಜೀವಿಸು ಜೀವಿಸಲು ಬಿಡು ’ ಎಂಬ ಮಹಾವೀರರ ಸಂದೇಶವನ್ನು ಜೀವನದಲ್ಲಿ ಅಳವಡಿಸಿಕೊಂಡು ಯುವ ಸಮೂಹವನ್ನು ಸನ್ಮಾರ್ಗದ ದಿಕ್ಕಿನಲ್ಲಿ ಕರೆದೊಯ್ಯಬೇಕಿದೆ ಎಂದು ಸಲಹೆ ನೀಡಿದರು.</p>.<p>ಮಹಾವೀರ ಜಯಂತಿ ಅಂಗವಾಗಿ ವಿಶೇಷ ಪೂಜಾ ಕೈಂಕರ್ಯಗಳು ನಡೆದವು. ನಂತರ ಊರಿನ ಪ್ರಮುಖ ರಸ್ತೆಯಲ್ಲಿ ಪಲ್ಲಕ್ಕಿ ಉತ್ಸವ ನಡೆಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>