<p><strong>ತ್ಯಾಗರ್ತಿ</strong>: ‘ಮುಂದೆ ಗುರಿ ಇದ್ದು, ನಮ್ಮೊಂದಿಗೆ ಗುರುಗಳಿದ್ದರೆ ಏನನ್ನಾದರೂ ಸಾಧಿಸಬಹುದು’ ಎಂದು ತ್ಯಾಗರ್ತಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಪ್ರಭಾವತಿ ಲೋಕಪ್ಪ ಹೇಳಿದರು.</p>.<p>ಸಾಗರ ತಾಲ್ಲೂಕಿನ ತ್ಯಾಗರ್ತಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ಹಬ್ಬ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ‘ಕಳೆದ ಸಮಯ ಮತ್ತೆ ಸಿಗುವುದಿಲ್ಲ. ವಿದ್ಯಾರ್ಥಿ ಜೀವನದಲ್ಲಿ ದೊರೆತ ವಿದ್ಯೆಯನ್ನು ಸದುಪಯೋಗಪಡಿಸಿಕೊಂಡರೆ ಮುಂದಿನ ದಿನಗಳಲ್ಲಿ ಆತ್ಮವಿಶ್ವಾಸದಿಂದ ತಲೆಎತ್ತಿ ನಿಲ್ಲಬಹುದು’ ಎಂದು ಹೇಳಿದರು.</p>.<p>ವಿದ್ಯೆಯಷ್ಟೇ ಸಂಸ್ಕಾರವೂ ಮುಖ್ಯ ಎಂದು ತಾಲ್ಲೂಕು ಪಂಚಾಯಿತಿ ಮಾಜಿ ಸದಸ್ಯ ಸೋಮಶೇಖರ್ ಲ್ಯಾವಿಗೆರೆ ಹೇಳಿದರು. </p>.<p>ನಿವೃತ್ತಿ ಹೊಂದಿದ ಸಾವಿತ್ರಿ ಎಂ., ರಾಘವೇಂದ್ರ ಹಾಗೂ ವರ್ಗಾವಣೆಗೊಂಡ ಶಿಕ್ಷಕರನ್ನು ಸನ್ಮಾನಿಸಲಾಯಿತು. ಎಸ್ಡಿಎಂಸಿ ಅಧ್ಯಕ್ಷ ಪ್ರಕಾಶ್, ಉಪಾಧ್ಯಕ್ಷೆ ರಾಧಾ ನೀಚಡಿ, ತ್ಯಾಗರ್ತಿ ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ರೇಣುಕಾ ಸುರೇಶ್, ಸದಸ್ಯರಾದ ಇಸಾಕ್, ಸುಭಾಶ್ಚಂದ್ರ, ಉಷಾ ರಾಘವೇಂದ್ರ, ಯಶೋಧಾ ದಿವಾಕರ್, ಬರೂರು ಗ್ರಾಮಪಂಚಾಯಿತಿ ಅಧ್ಯಕ್ಷ ಖಂಡೋಜಪ್ಪ, ಹಿರೇಬಿಲಗುಂಜಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಪ್ರಶಾಂತ್, ಶಿಕ್ಷಣ ಸಂಯೋಜಕರಾದ ಫಾಲಾಕ್ಷಪ್ಪ, ಮಾಲತೇಶ್, ತ್ಯಾಗರ್ತಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನಿರ್ದೇಶಕರಾದ ಲಿಂಗರಾಜು, ಸಿಆರ್ಪಿ ಪ್ರವೀಣ್ ಹಾಗೂ ಸತೀಶ್, ಲೋಕಪ್ಪ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತ್ಯಾಗರ್ತಿ</strong>: ‘ಮುಂದೆ ಗುರಿ ಇದ್ದು, ನಮ್ಮೊಂದಿಗೆ ಗುರುಗಳಿದ್ದರೆ ಏನನ್ನಾದರೂ ಸಾಧಿಸಬಹುದು’ ಎಂದು ತ್ಯಾಗರ್ತಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಪ್ರಭಾವತಿ ಲೋಕಪ್ಪ ಹೇಳಿದರು.</p>.<p>ಸಾಗರ ತಾಲ್ಲೂಕಿನ ತ್ಯಾಗರ್ತಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ಹಬ್ಬ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ‘ಕಳೆದ ಸಮಯ ಮತ್ತೆ ಸಿಗುವುದಿಲ್ಲ. ವಿದ್ಯಾರ್ಥಿ ಜೀವನದಲ್ಲಿ ದೊರೆತ ವಿದ್ಯೆಯನ್ನು ಸದುಪಯೋಗಪಡಿಸಿಕೊಂಡರೆ ಮುಂದಿನ ದಿನಗಳಲ್ಲಿ ಆತ್ಮವಿಶ್ವಾಸದಿಂದ ತಲೆಎತ್ತಿ ನಿಲ್ಲಬಹುದು’ ಎಂದು ಹೇಳಿದರು.</p>.<p>ವಿದ್ಯೆಯಷ್ಟೇ ಸಂಸ್ಕಾರವೂ ಮುಖ್ಯ ಎಂದು ತಾಲ್ಲೂಕು ಪಂಚಾಯಿತಿ ಮಾಜಿ ಸದಸ್ಯ ಸೋಮಶೇಖರ್ ಲ್ಯಾವಿಗೆರೆ ಹೇಳಿದರು. </p>.<p>ನಿವೃತ್ತಿ ಹೊಂದಿದ ಸಾವಿತ್ರಿ ಎಂ., ರಾಘವೇಂದ್ರ ಹಾಗೂ ವರ್ಗಾವಣೆಗೊಂಡ ಶಿಕ್ಷಕರನ್ನು ಸನ್ಮಾನಿಸಲಾಯಿತು. ಎಸ್ಡಿಎಂಸಿ ಅಧ್ಯಕ್ಷ ಪ್ರಕಾಶ್, ಉಪಾಧ್ಯಕ್ಷೆ ರಾಧಾ ನೀಚಡಿ, ತ್ಯಾಗರ್ತಿ ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ರೇಣುಕಾ ಸುರೇಶ್, ಸದಸ್ಯರಾದ ಇಸಾಕ್, ಸುಭಾಶ್ಚಂದ್ರ, ಉಷಾ ರಾಘವೇಂದ್ರ, ಯಶೋಧಾ ದಿವಾಕರ್, ಬರೂರು ಗ್ರಾಮಪಂಚಾಯಿತಿ ಅಧ್ಯಕ್ಷ ಖಂಡೋಜಪ್ಪ, ಹಿರೇಬಿಲಗುಂಜಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಪ್ರಶಾಂತ್, ಶಿಕ್ಷಣ ಸಂಯೋಜಕರಾದ ಫಾಲಾಕ್ಷಪ್ಪ, ಮಾಲತೇಶ್, ತ್ಯಾಗರ್ತಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನಿರ್ದೇಶಕರಾದ ಲಿಂಗರಾಜು, ಸಿಆರ್ಪಿ ಪ್ರವೀಣ್ ಹಾಗೂ ಸತೀಶ್, ಲೋಕಪ್ಪ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>