ಹಾವೇರಿ ಜಿಲ್ಲೆಯ ರಾಣೆಬೆನ್ನೂರು ತಾಲ್ಲೂಕಿನ ದೇವರಗುಡ್ಡ ಗ್ರಾಮದ ಮಾಲತೇಶ ದೇವರ ಕಾರ್ಣಿಕೋತ್ಸವ ಅಂಗವಾಗಿ ಮಾಲತೇಶ ಹಾಗೂ ಮೈಲಾರಲಿಂಗೇಶ್ವರ ದೇವರ ಭಕ್ತರು ಹಾಗೂ ಗೊರವಯ್ಯನವರು ಸಂಪ್ರದಾಯದಂತೆ ಶಿಬಾರಕಟ್ಟೆಯಲ್ಲಿ ಧಾರ್ಮಿಕ ಕಾರ್ಯಕ್ರಮ ನೆರವೇರಿಸಿದರು. ಗೊರವಯ್ಯನವರು ಹಾಗೂ ದೇವರು ಹೊತ್ತ ಮಹಿಳೆಯರ ನೇತೃತ್ವದಲ್ಲಿ ಧಾರ್ಮಿಕ ಕಾರ್ಯಕ್ರಮಗಳು ನಡೆದವು. ಮಹಿಳೆಯರು, ಮಕ್ಕಳು ಸೇರಿ ನೂರಾರು ಸಂಖ್ಯೆಯಲ್ಲಿ ಭಕ್ತರು ಶಿಬಾರಕಟ್ಟೆ ಬಳಿ ಜಮಾಯಿಸಿದ್ದರು. ಗಟ್ ಪರವು ಪೂಜೆ ಅಂಗವಾಗಿ ಶಿಬಾರಕಟ್ಟೆಯನ್ನು ವಿವಿಧ ಪುಷ್ಪಗಳಿಂದ ಸಿಂಗರಿಸಲಾಗಿತ್ತು. ಗೊರವಯ್ಯನವರು ಬಾಳೆಹಣ್ಣು, ಸಕ್ಕರೆ, ತುಪ್ಪ, ಹಾಲು ಬೆರೆಸಿ, ಹಣ್ಣು ತುಪ್ಪದ ನೈವೇದ್ಯ ಮಾಡಿ ಭಕ್ತರಿಗೆ ವಿತರಿಸಿದರು.