ಶಂಕರ್ನಾಗ್ ಅವರ ಜತೆ ದುಡಿದಿದ್ದ ಜಾನ್ ದೇವರಾಜ್ ಅವರಿಗೆ ಮ್ಯೂಸಿಯಂ ಮಾಲ್ಗುಡಿ ಸಿದ್ಧಪಡಿಸಲು ರೈಲ್ವೆ ಇಲಾಖೆ ಆಹ್ವಾನ ನೀಡಿತ್ತು. ₹ 38 ಲಕ್ಷಕ್ಕೆ ಒಪ್ಪಂದ ಮಾಡಿಕೊಂಡಿತ್ತು. ದೇವರಾಜ್ ಸ್ಥಳೀಯ ಕಲಾವಿದರನ್ನು ಬಳಸಿಕೊಂಡು ₹ 32 ಲಕ್ಷ ವೆಚ್ಚದಲ್ಲೇ ಎಲ್ಲ ಕಾರ್ಯ ಪೂರ್ಣಗೊಳಿಸಿದ್ದರು. ಮಲೆನಾಡಿನ ಸಂಸ್ಕೃತಿಯ ಪ್ರತೀಕವಾಗಿ ಮ್ಯೂಸಿಯಂ ರೂಪಿಸಲಾಗಿದೆ. ಧಾರಾವಾಹಿಯಲ್ಲಿ ಬರುವ ಮೂರ್ನಾಲ್ಕು ದೃಶ್ಯಗಳನ್ನು ಸಂಯೋಜಿಸಲಾಗಿದೆ. ಮಲೆನಾಡಿನ ಸಂಸ್ಕೃತಿ, ಪರಿಸರ, ಸಮಗ್ರತೆ, ಕೃಷಿ, ಬಳಕೆ ಸಾಮಗ್ರಿಗಳು, ಪ್ರಾಚೀನ ಕಲಾಕೃತಿಗಳನ್ನು ನೆಲೆಗೊಳಿಸಲಾಗಿದೆ. ಶಂಕರ್ನಾಗ್ ಪ್ರತಿಮೆ ಸ್ಥಾಪಿಸಲಾಗಿದೆ. ಮಾಲ್ಗುಡಿಯಲ್ಲಿ ಬರುವ ನಿಲ್ದಾಣದ ಒಂಟಿ ಮರ, ಪ್ಲಾಟ್ಫಾರ್ಮ್, ಕಲ್ಲು ಬೆಂಚುಗಳು, ನಿಲ್ದಾಣದ ಸಾಲು ಕಂಬಿಗಳಿಗೂ ಜೀವ ತುಂಬಲಾಗಿದೆ.