<p><strong>ಶಿವಮೊಗ್ಗ:</strong> ಜಿಲ್ಲೆಯ ಮಲೆನಾಡು ಭಾಗದಲ್ಲಿ ಮಳೆಯ ಆರ್ಭಟ ಮುಂದುವರೆದಿದೆ. ಹೀಗಾಗಿ ಗುರುವಾರ ಜಿಲ್ಲೆಯಲ್ಲಿ ತೀರ್ಥಹಳ್ಳಿ ತಾಲ್ಲೂಕು ಹಾಗೂ ಹೊಸನಗರ ತಾಲ್ಲೂಕಿನ ನಗರ ಹೋಬಳಿಯ ಶಾಲೆ-ಕಾಲೇಜುಗಳಿಗೆ ಜಿಲ್ಲಾಡಳಿತ ರಜೆ ಘೋಷಿಸಿದೆ. </p>.ಶಿವಮೊಗ್ಗ | ಭದ್ರಾ ಎಡದಂಡೆ ನಾಲೆಗೆ ಹೊಸ ಗೇಟ್: ಮುಂಗಾರು ಹಂಗಾಮಿಗೆ ನೀರು ಇಲ್ಲ.<p>ಗುರುವಾರ ಬೆಳಿಗ್ಗೆ 8 ಗಂಟೆಗೆ ಕೊನೆಗೊಂಡಂತೆ ಕಳೆದ 24 ಗಂಟೆಗಳಲ್ಲಿ ಹೊಸನಗರ ತಾಲ್ಲೂಕಿನ ಚಕ್ರಾದ ವಾರಾಹಿ ಯೋಜನಾ ಪ್ರದೇಶದಲ್ಲಿ ದಾಖಲೆಯ 19.5 ಸೆಂ.ಮೀ ಮಳೆ ಆಗಿದೆ. ಯಡೂರಿನಲ್ಲಿ 14.6 ಹಾಗೂ ಮಾಸ್ತಿಕಟ್ಟೆಯಲ್ಲಿ 14 ಸೆಂ.ಮೀ ಮಳೆ ಸುರಿದಿದೆ.</p><p> <strong>ಜಲಾಶಯಗಳಲ್ಲಿ ನೀರಿನ ಮಟ್ಟ ಏರಿಕೆ:</strong> </p><p>ಮಳೆ ಬಿರುಸುಗೊಂಡಿರುವುದರಿಂದ ಜಿಲ್ಲೆಯ ಪ್ರಮುಖ ಜಲಾಶಯಗಳ ಒಳಹರಿವು ಏರಿಕೆ ಆಗಿದೆ. ಕಾರ್ಗಲ್ ನ ಲಿಂಗನಮಕ್ಕಿ ಜಲಾಶಯಕ್ಕೆ ಒಳಹರಿವು 55,337 ಕ್ಯುಸೆಕ್ ಗೆ ಏರಿಕೆಯಾಗಿದೆ. ಲಿಂಗನಮಕ್ಕಿ ಜಲಾಶಯದ ಗರಿಷ್ಟ ನೀರಿನಮಟ್ಟ 1819 ಅಡಿ. ಸದ್ಯ 1781.55 ಅಡಿ ನೀರಿನ ಸಂಗ್ರಹ ಇದೆ. ಕಳೆದ ವರ್ಷ ಇದೇ ಅವಧಿಯಲ್ಲಿ ಜಲಾಶಯದಲ್ಲಿ 1745.60 ಅಡಿ ನೀರು ಇತ್ತು.</p>.ಶಿವಮೊಗ್ಗ: ಅಡಗಡಿ ಗ್ರಾಮದಲ್ಲಿ ಮಳೆಗೆ ಮನೆ ಕುಸಿದು ವೃದ್ಧೆ ಸಾವು .<p>ಗಾಜನೂರಿನ ತುಂಗಾ ಜಲಾಶಯಕ್ಕೆ 44,158 ಕ್ಯುಸೆಕ್ ಗೆ ಹೆಚ್ಚಳಗೊಂಡಿದೆ. ತುಂಗಾ ಹಾಗೂ ಶಿಕಾರಿಪುರದ ಅಂಜನಾಪುರ ಜಲಾಶಯ ಭರ್ತಿ ಆಗಿವೆ. ತುಂಗಾ ಜಲಾಶಯದಿಂದ ಅಷ್ಟೇ ಪ್ರಮಾಣದ ನೀರನ್ನು ನದಿಗೆ ಹರಿಸಲಾಗುತ್ತಿದೆ. ಹೀಗಾಗಿ ಶಿವಮೊಗ್ಗದ ಹೃದಯ ಭಾಗದಲ್ಲಿ ಹರಿಯುವ ತುಂಗೆ ಮೈದುಂಬಿದ್ದಾಳೆ.</p><p>ಲಕ್ಕವಳ್ಳಿಯ ಭದ್ರಾ ಜಲಾಶಯಕ್ಕೆ ಒಳಹರಿವು 22,407 ಕ್ಯುಸೆಕ್ ಇದ್ದು, ನೀರಿನಮಟ್ಟ 157.1 ಅಡಿಗೆ ಏರಿಕೆಯಾಗಿದೆ. ಜಲಾಶಯhದ ಗರಿಷ್ಠ ನೀರಿನ ಮಟ್ಟ 186 ಅಡಿ. ಕಳೆದ ವರ್ಷ ಇದೇ ಅವಧಿಯಲ್ಲಿ ಭದ್ರೆಯಲ್ಲಿ 120 ಅಡಿ ನೀರಿನ ಸಂಗ್ರಹವಿತ್ತು.</p> .ಶಿವಮೊಗ್ಗ ಜಿಲ್ಲೆ; ಮತ್ತೆ ಬಿರುಸುಗೊಂಡ ಮಳೆ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿವಮೊಗ್ಗ:</strong> ಜಿಲ್ಲೆಯ ಮಲೆನಾಡು ಭಾಗದಲ್ಲಿ ಮಳೆಯ ಆರ್ಭಟ ಮುಂದುವರೆದಿದೆ. ಹೀಗಾಗಿ ಗುರುವಾರ ಜಿಲ್ಲೆಯಲ್ಲಿ ತೀರ್ಥಹಳ್ಳಿ ತಾಲ್ಲೂಕು ಹಾಗೂ ಹೊಸನಗರ ತಾಲ್ಲೂಕಿನ ನಗರ ಹೋಬಳಿಯ ಶಾಲೆ-ಕಾಲೇಜುಗಳಿಗೆ ಜಿಲ್ಲಾಡಳಿತ ರಜೆ ಘೋಷಿಸಿದೆ. </p>.ಶಿವಮೊಗ್ಗ | ಭದ್ರಾ ಎಡದಂಡೆ ನಾಲೆಗೆ ಹೊಸ ಗೇಟ್: ಮುಂಗಾರು ಹಂಗಾಮಿಗೆ ನೀರು ಇಲ್ಲ.<p>ಗುರುವಾರ ಬೆಳಿಗ್ಗೆ 8 ಗಂಟೆಗೆ ಕೊನೆಗೊಂಡಂತೆ ಕಳೆದ 24 ಗಂಟೆಗಳಲ್ಲಿ ಹೊಸನಗರ ತಾಲ್ಲೂಕಿನ ಚಕ್ರಾದ ವಾರಾಹಿ ಯೋಜನಾ ಪ್ರದೇಶದಲ್ಲಿ ದಾಖಲೆಯ 19.5 ಸೆಂ.ಮೀ ಮಳೆ ಆಗಿದೆ. ಯಡೂರಿನಲ್ಲಿ 14.6 ಹಾಗೂ ಮಾಸ್ತಿಕಟ್ಟೆಯಲ್ಲಿ 14 ಸೆಂ.ಮೀ ಮಳೆ ಸುರಿದಿದೆ.</p><p> <strong>ಜಲಾಶಯಗಳಲ್ಲಿ ನೀರಿನ ಮಟ್ಟ ಏರಿಕೆ:</strong> </p><p>ಮಳೆ ಬಿರುಸುಗೊಂಡಿರುವುದರಿಂದ ಜಿಲ್ಲೆಯ ಪ್ರಮುಖ ಜಲಾಶಯಗಳ ಒಳಹರಿವು ಏರಿಕೆ ಆಗಿದೆ. ಕಾರ್ಗಲ್ ನ ಲಿಂಗನಮಕ್ಕಿ ಜಲಾಶಯಕ್ಕೆ ಒಳಹರಿವು 55,337 ಕ್ಯುಸೆಕ್ ಗೆ ಏರಿಕೆಯಾಗಿದೆ. ಲಿಂಗನಮಕ್ಕಿ ಜಲಾಶಯದ ಗರಿಷ್ಟ ನೀರಿನಮಟ್ಟ 1819 ಅಡಿ. ಸದ್ಯ 1781.55 ಅಡಿ ನೀರಿನ ಸಂಗ್ರಹ ಇದೆ. ಕಳೆದ ವರ್ಷ ಇದೇ ಅವಧಿಯಲ್ಲಿ ಜಲಾಶಯದಲ್ಲಿ 1745.60 ಅಡಿ ನೀರು ಇತ್ತು.</p>.ಶಿವಮೊಗ್ಗ: ಅಡಗಡಿ ಗ್ರಾಮದಲ್ಲಿ ಮಳೆಗೆ ಮನೆ ಕುಸಿದು ವೃದ್ಧೆ ಸಾವು .<p>ಗಾಜನೂರಿನ ತುಂಗಾ ಜಲಾಶಯಕ್ಕೆ 44,158 ಕ್ಯುಸೆಕ್ ಗೆ ಹೆಚ್ಚಳಗೊಂಡಿದೆ. ತುಂಗಾ ಹಾಗೂ ಶಿಕಾರಿಪುರದ ಅಂಜನಾಪುರ ಜಲಾಶಯ ಭರ್ತಿ ಆಗಿವೆ. ತುಂಗಾ ಜಲಾಶಯದಿಂದ ಅಷ್ಟೇ ಪ್ರಮಾಣದ ನೀರನ್ನು ನದಿಗೆ ಹರಿಸಲಾಗುತ್ತಿದೆ. ಹೀಗಾಗಿ ಶಿವಮೊಗ್ಗದ ಹೃದಯ ಭಾಗದಲ್ಲಿ ಹರಿಯುವ ತುಂಗೆ ಮೈದುಂಬಿದ್ದಾಳೆ.</p><p>ಲಕ್ಕವಳ್ಳಿಯ ಭದ್ರಾ ಜಲಾಶಯಕ್ಕೆ ಒಳಹರಿವು 22,407 ಕ್ಯುಸೆಕ್ ಇದ್ದು, ನೀರಿನಮಟ್ಟ 157.1 ಅಡಿಗೆ ಏರಿಕೆಯಾಗಿದೆ. ಜಲಾಶಯhದ ಗರಿಷ್ಠ ನೀರಿನ ಮಟ್ಟ 186 ಅಡಿ. ಕಳೆದ ವರ್ಷ ಇದೇ ಅವಧಿಯಲ್ಲಿ ಭದ್ರೆಯಲ್ಲಿ 120 ಅಡಿ ನೀರಿನ ಸಂಗ್ರಹವಿತ್ತು.</p> .ಶಿವಮೊಗ್ಗ ಜಿಲ್ಲೆ; ಮತ್ತೆ ಬಿರುಸುಗೊಂಡ ಮಳೆ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>