<p><strong>ಆನಂದಪುರ</strong>: ‘ಇಲ್ಲಿನ ಇತಿಹಾಸ ಪ್ರಸಿದ್ಧ ಕಡ್ಲೆಹಂಕ್ಲು ಮಾರಿಕಾಂಬ ದೇವಸ್ಥಾನದ ತವರು ಮನೆ ದೇವಸ್ಥಾನವನ್ನು ₹ 1 ಕೋಟಿ ವೆಚ್ಚದಲ್ಲಿ ನಿರ್ಮಾಣ ಮಾಡಲಾಗುತ್ತಿದೆ’ ಎಂದು ಮಾರಿಕಾಂಬ ಜಾತ್ರಾ ಸಮಿತಿಯ ಅಧ್ಯಕ್ಷ ಎಲ್.ವೆಂಕಟೇಶ್ ಹೇಳಿದರು.</p>.<p>ಅವರು ಕಡ್ಲೆಹಂಕ್ಲು ಮಾರಿಕಾಂಬ ದೇವಸ್ಥಾನದಲ್ಲಿ ಆಯೋಜಿಸಿದ್ದ ದೀಪೋತ್ಸವ ಕಾರ್ಯಕ್ರಮವನ್ನು ನೆರವೇರಿಸಿ ನಂತರ ನಡೆದ ಸಭಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>‘ತವರು ಮನೆಯ ದೇವಸ್ಥಾನದ ನಿರ್ಮಾಣಕ್ಕೆ ಈಗಾಗಲೇ ಭೂಮಿ ಪೂಜೆ ನೆರವೆರಿಸಿ ಕಾಮಗಾರಿ ಆರಂಭಿಸಲಾಗಿದೆ. ವರ್ಷದೊಳಗೆ ನಿರ್ಮಾಣ ಮಾಡುವ ಗುರಿಯನ್ನು ಹೊಂದಲಾಗಿದೆ. 32ಕ್ಕೂ ಹೆಚ್ಚು ಗ್ರಾಮಗಳನ್ನು ಒಳಗೊಂಡ ಮಾರಿಕಾಂಬ ದೇವಸ್ಥಾನದ ಭಕ್ತರು ದೇವಾಲಯ ನಿರ್ಮಾಣಕ್ಕೆ ಸಹಕರಿಸಬೇಕು’ ಎಂದು ಮನವಿ ಮಾಡಿದರು.</p>.<p>ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ರತ್ನಾಕರ್ ಹೊನಗೋಡು ಮಾತನಾಡಿ, ‘ಆನಂದಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳ ಜನರಿಗೆ ಅನುಕೂಲವಾಗಲಿ ಎನ್ನುವ ದೃಷ್ಟಿಯಿಂದ ಮುಕ್ತಿ ವಾಹನ ನೀಡುತ್ತಿದ್ದೇನೆ. ಕಡ್ಲೆಹಂಕ್ಲು ಮಾರಿಕಾಂಬ ದೇವಸ್ಥಾನ ಸಮಿತಿಯವರು ವಾಹನದ ನಿರ್ವಹಣೆ ಮಾಡಬೇಕು. ಸುಂದರವಾಗಿ ತವರು ಮನೆ ದೇವಸ್ಥಾನದ ನಿರ್ಮಾಣಕ್ಕೆ ಭಕ್ತರು ತಮ್ಮ ಕೈಲಾದಷ್ಟು ಸಹಾಯ ಮಾಡಬೇಕು’ ಎಂದು ಹೇಳಿದರು.</p>.<p>ಗ್ರಾಮ ಪಂಚಾಯಿತಿ ಅಧ್ಯಕ್ಷ ಎಸ್.ಮೋಹನ್ ಕುಮಾರ್, ಸಮಿತಿಯ ಬಾಲಗಂಗಾಧರಪ್ಪಗೌಡ, ಈರಪ್ಪ, ರಾಜು ದೇವಾಡಿಗ, ಎಣಾಕ್ಷ, ಖೈರಾ ಜಯಪ್ಪಗೌಡ, ನಾರಿ ಲೋಕಪ್ಪ, ಶೇಖರಪ್ಪ, ಸೀನಪ್ಪ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಆನಂದಪುರ</strong>: ‘ಇಲ್ಲಿನ ಇತಿಹಾಸ ಪ್ರಸಿದ್ಧ ಕಡ್ಲೆಹಂಕ್ಲು ಮಾರಿಕಾಂಬ ದೇವಸ್ಥಾನದ ತವರು ಮನೆ ದೇವಸ್ಥಾನವನ್ನು ₹ 1 ಕೋಟಿ ವೆಚ್ಚದಲ್ಲಿ ನಿರ್ಮಾಣ ಮಾಡಲಾಗುತ್ತಿದೆ’ ಎಂದು ಮಾರಿಕಾಂಬ ಜಾತ್ರಾ ಸಮಿತಿಯ ಅಧ್ಯಕ್ಷ ಎಲ್.ವೆಂಕಟೇಶ್ ಹೇಳಿದರು.</p>.<p>ಅವರು ಕಡ್ಲೆಹಂಕ್ಲು ಮಾರಿಕಾಂಬ ದೇವಸ್ಥಾನದಲ್ಲಿ ಆಯೋಜಿಸಿದ್ದ ದೀಪೋತ್ಸವ ಕಾರ್ಯಕ್ರಮವನ್ನು ನೆರವೇರಿಸಿ ನಂತರ ನಡೆದ ಸಭಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>‘ತವರು ಮನೆಯ ದೇವಸ್ಥಾನದ ನಿರ್ಮಾಣಕ್ಕೆ ಈಗಾಗಲೇ ಭೂಮಿ ಪೂಜೆ ನೆರವೆರಿಸಿ ಕಾಮಗಾರಿ ಆರಂಭಿಸಲಾಗಿದೆ. ವರ್ಷದೊಳಗೆ ನಿರ್ಮಾಣ ಮಾಡುವ ಗುರಿಯನ್ನು ಹೊಂದಲಾಗಿದೆ. 32ಕ್ಕೂ ಹೆಚ್ಚು ಗ್ರಾಮಗಳನ್ನು ಒಳಗೊಂಡ ಮಾರಿಕಾಂಬ ದೇವಸ್ಥಾನದ ಭಕ್ತರು ದೇವಾಲಯ ನಿರ್ಮಾಣಕ್ಕೆ ಸಹಕರಿಸಬೇಕು’ ಎಂದು ಮನವಿ ಮಾಡಿದರು.</p>.<p>ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ರತ್ನಾಕರ್ ಹೊನಗೋಡು ಮಾತನಾಡಿ, ‘ಆನಂದಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳ ಜನರಿಗೆ ಅನುಕೂಲವಾಗಲಿ ಎನ್ನುವ ದೃಷ್ಟಿಯಿಂದ ಮುಕ್ತಿ ವಾಹನ ನೀಡುತ್ತಿದ್ದೇನೆ. ಕಡ್ಲೆಹಂಕ್ಲು ಮಾರಿಕಾಂಬ ದೇವಸ್ಥಾನ ಸಮಿತಿಯವರು ವಾಹನದ ನಿರ್ವಹಣೆ ಮಾಡಬೇಕು. ಸುಂದರವಾಗಿ ತವರು ಮನೆ ದೇವಸ್ಥಾನದ ನಿರ್ಮಾಣಕ್ಕೆ ಭಕ್ತರು ತಮ್ಮ ಕೈಲಾದಷ್ಟು ಸಹಾಯ ಮಾಡಬೇಕು’ ಎಂದು ಹೇಳಿದರು.</p>.<p>ಗ್ರಾಮ ಪಂಚಾಯಿತಿ ಅಧ್ಯಕ್ಷ ಎಸ್.ಮೋಹನ್ ಕುಮಾರ್, ಸಮಿತಿಯ ಬಾಲಗಂಗಾಧರಪ್ಪಗೌಡ, ಈರಪ್ಪ, ರಾಜು ದೇವಾಡಿಗ, ಎಣಾಕ್ಷ, ಖೈರಾ ಜಯಪ್ಪಗೌಡ, ನಾರಿ ಲೋಕಪ್ಪ, ಶೇಖರಪ್ಪ, ಸೀನಪ್ಪ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>