<p><strong>ಸಾಗರ:</strong> ಇಲ್ಲಿನ ಮಾರಿಕಾಂಬಾ ದೇವಿಯ ಜಾತ್ರಾ ಮಹೋತ್ಸವದ 6 ನೇ ದಿನವಾದ ಭಾನುವಾರ ದೇವಿಯ ದರ್ಶನ ಪಡೆಯಲು ಜನಸಾಗರವೆ ಹರಿದು ಬಂದಿತ್ತು. ಬೆಳಗಿನ ಜಾವ 6 ಗಂಟೆಯಿಂದಲೆ ನಗರದ ಬಹುತೇಕ ರಸ್ತೆಗಳಲ್ಲಿ ಜನ ಸಂದಣಿ ವಿಪರೀತವಾಗಿದ್ದು ವಾಹನಗಳು ಸಂಚರಿಸುವುದು ಕಷ್ಟಕರವಾಗಿತ್ತು.</p>.<p>ಭಾನುವಾರ ರಜಾ ದಿನವಾಗಿದ್ದರಿಂದ ಹೆಚ್ಚಿನ ಸಂಖ್ಯೆಯಲ್ಲಿ ಜನರು ಸೇರುತ್ತಾರೆ ಎಂಬ ನಿರೀಕ್ಷೆಯಿಂದ ಪೊಲೀಸ್ ಆಡಳಿತ ವಾಹನ ಸಂಚಾರದ ನಿಯಂತ್ರಣಕ್ಕೆ ಹೆಚ್ಚಿನ ಸಿಬ್ಬಂದಿ ನಿಯೋಜಿಸಿದ್ದರೂ ಸುಗಮ ಸಂಚಾರ ವ್ಯವಸ್ಥೆಗೆ ಹರಸಾಹಸ ಪಡಬೇಕಾಯಿತು.</p>.<p>ಮಧ್ಯಾಹ್ನ ಹಾಗೂ ಸಂಜೆಯ ವೇಳೆ ದೇವಸ್ಥಾನ ಹಾಗೂ ಅಮ್ಯೂಸ್ ಮೆಂಟ್ ಪಾರ್ಕ್ ಗೆ ಸಂಪರ್ಕ ಕಲ್ಪಿಸುವ ನಗರದ ವಿವಿಧ ವೃತ್ತಗಳಲ್ಲಿ ಟ್ರಾಫಿಕ್ ಜಾಮ್ ಆಗಿ ಗಂಟೆಗಟ್ಟಲೆ ಕಾಯಬೇಕಾದ ಪರಿಸ್ಥಿತಿ ನಿರ್ಮಾಣವಾಗಿತ್ತು.</p>.<p>ಸಂಸದ ಬಿ.ವೈ.ರಾಘವೇಂದ್ರ ತಮ್ಮ ಪಕ್ಷದ ಪ್ರಮುಖರೊಂದಿಗೆ ಮಾರಿಕಾಂಬಾ ದೇವಿಯ ದರ್ಶನ ಪಡೆದು ಪೂಜೆ ಸಲ್ಲಿಸಿದರು. ನಂತರ ಅವರು ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಅವರ ನಿವಾಸಕ್ಕೆ ತೆರಳಿ ಅವರ ಯೋಗಕ್ಷೇಮ ವಿಚಾರಿಸಿದರು. </p>.<p>ಕಳೆದ ವಿಧಾನಸಭೆ ಚುನಾವಣೆಯಲ್ಲಿ ಗೋಪಾಲಕೃಷ್ಣ ಬೇಳೂರು ವಿಜಯಶಾಲಿಯಾದರೆ ಮಾರಿಕಾಂಬಾ ದೇವಿಗೆ ಬೆಳ್ಳಿಯ ಕಿರೀಟ ತೊಡಿಸುವುದಾಗಿ ಎಪಿಎಂಸಿ ಮಾಜಿ ಅಧ್ಯಕ್ಷ ಚೇತನ್ ರಾಜ್ ಕಣ್ಣೂರು ಹರಕೆ ಹೊತ್ತಿದ್ದರು. ಆ ಪ್ರಕಾರ ಇಂದು ಅವರು ಶಾಸಕ ಬೇಳೂರು ಸಮ್ಮುಖದಲ್ಲಿ ತವರುಮನೆ ಮಾರಿಕಾಂಬಾ ದೇವಾಲಯದಲ್ಲಿ ದೇವಿಗೆ ಬೆಳ್ಳಿಯ ಕಿರೀಟ ಸಮರ್ಪಿಸಿದರು.</p>.<p>ರಾಜ್ಯ ಬಿಜೆಪಿ ಉಪಾಧ್ಯಕ್ಷ ಎಚ್.ಹಾಲಪ್ಪ ಹರತಾಳು ತಮ್ಮ ಕುಟುಂಬದ ಸದಸ್ಯರೊಂದಿಗೆ ದೇವಸ್ಥಾನಕ್ಕೆ ಭೇಟಿ ನೀಡಿ ದೇವಿಯ ದರ್ಶನ ಪಡೆದರು. ಮಾರಿಕಾಂಬಾ ದೇವಸ್ಥಾನದ ಸಮಿತಿ ಅಧ್ಯಕ್ಷ ಕೆ.ಎನ್.ನಾಗೇಂದ್ರ, ಕಾರ್ಯದರ್ಶಿ ಬಿ.ಗಿರಿಧರರಾವ್, ಉಪಾಧ್ಯಕ್ಷ ಸುಂದರ್ ಸಿಂಗ್, ಖಜಾಂಚಿ ನಾಗೇಂದ್ರ ಕುಮಟಾ ಇದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸಾಗರ:</strong> ಇಲ್ಲಿನ ಮಾರಿಕಾಂಬಾ ದೇವಿಯ ಜಾತ್ರಾ ಮಹೋತ್ಸವದ 6 ನೇ ದಿನವಾದ ಭಾನುವಾರ ದೇವಿಯ ದರ್ಶನ ಪಡೆಯಲು ಜನಸಾಗರವೆ ಹರಿದು ಬಂದಿತ್ತು. ಬೆಳಗಿನ ಜಾವ 6 ಗಂಟೆಯಿಂದಲೆ ನಗರದ ಬಹುತೇಕ ರಸ್ತೆಗಳಲ್ಲಿ ಜನ ಸಂದಣಿ ವಿಪರೀತವಾಗಿದ್ದು ವಾಹನಗಳು ಸಂಚರಿಸುವುದು ಕಷ್ಟಕರವಾಗಿತ್ತು.</p>.<p>ಭಾನುವಾರ ರಜಾ ದಿನವಾಗಿದ್ದರಿಂದ ಹೆಚ್ಚಿನ ಸಂಖ್ಯೆಯಲ್ಲಿ ಜನರು ಸೇರುತ್ತಾರೆ ಎಂಬ ನಿರೀಕ್ಷೆಯಿಂದ ಪೊಲೀಸ್ ಆಡಳಿತ ವಾಹನ ಸಂಚಾರದ ನಿಯಂತ್ರಣಕ್ಕೆ ಹೆಚ್ಚಿನ ಸಿಬ್ಬಂದಿ ನಿಯೋಜಿಸಿದ್ದರೂ ಸುಗಮ ಸಂಚಾರ ವ್ಯವಸ್ಥೆಗೆ ಹರಸಾಹಸ ಪಡಬೇಕಾಯಿತು.</p>.<p>ಮಧ್ಯಾಹ್ನ ಹಾಗೂ ಸಂಜೆಯ ವೇಳೆ ದೇವಸ್ಥಾನ ಹಾಗೂ ಅಮ್ಯೂಸ್ ಮೆಂಟ್ ಪಾರ್ಕ್ ಗೆ ಸಂಪರ್ಕ ಕಲ್ಪಿಸುವ ನಗರದ ವಿವಿಧ ವೃತ್ತಗಳಲ್ಲಿ ಟ್ರಾಫಿಕ್ ಜಾಮ್ ಆಗಿ ಗಂಟೆಗಟ್ಟಲೆ ಕಾಯಬೇಕಾದ ಪರಿಸ್ಥಿತಿ ನಿರ್ಮಾಣವಾಗಿತ್ತು.</p>.<p>ಸಂಸದ ಬಿ.ವೈ.ರಾಘವೇಂದ್ರ ತಮ್ಮ ಪಕ್ಷದ ಪ್ರಮುಖರೊಂದಿಗೆ ಮಾರಿಕಾಂಬಾ ದೇವಿಯ ದರ್ಶನ ಪಡೆದು ಪೂಜೆ ಸಲ್ಲಿಸಿದರು. ನಂತರ ಅವರು ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಅವರ ನಿವಾಸಕ್ಕೆ ತೆರಳಿ ಅವರ ಯೋಗಕ್ಷೇಮ ವಿಚಾರಿಸಿದರು. </p>.<p>ಕಳೆದ ವಿಧಾನಸಭೆ ಚುನಾವಣೆಯಲ್ಲಿ ಗೋಪಾಲಕೃಷ್ಣ ಬೇಳೂರು ವಿಜಯಶಾಲಿಯಾದರೆ ಮಾರಿಕಾಂಬಾ ದೇವಿಗೆ ಬೆಳ್ಳಿಯ ಕಿರೀಟ ತೊಡಿಸುವುದಾಗಿ ಎಪಿಎಂಸಿ ಮಾಜಿ ಅಧ್ಯಕ್ಷ ಚೇತನ್ ರಾಜ್ ಕಣ್ಣೂರು ಹರಕೆ ಹೊತ್ತಿದ್ದರು. ಆ ಪ್ರಕಾರ ಇಂದು ಅವರು ಶಾಸಕ ಬೇಳೂರು ಸಮ್ಮುಖದಲ್ಲಿ ತವರುಮನೆ ಮಾರಿಕಾಂಬಾ ದೇವಾಲಯದಲ್ಲಿ ದೇವಿಗೆ ಬೆಳ್ಳಿಯ ಕಿರೀಟ ಸಮರ್ಪಿಸಿದರು.</p>.<p>ರಾಜ್ಯ ಬಿಜೆಪಿ ಉಪಾಧ್ಯಕ್ಷ ಎಚ್.ಹಾಲಪ್ಪ ಹರತಾಳು ತಮ್ಮ ಕುಟುಂಬದ ಸದಸ್ಯರೊಂದಿಗೆ ದೇವಸ್ಥಾನಕ್ಕೆ ಭೇಟಿ ನೀಡಿ ದೇವಿಯ ದರ್ಶನ ಪಡೆದರು. ಮಾರಿಕಾಂಬಾ ದೇವಸ್ಥಾನದ ಸಮಿತಿ ಅಧ್ಯಕ್ಷ ಕೆ.ಎನ್.ನಾಗೇಂದ್ರ, ಕಾರ್ಯದರ್ಶಿ ಬಿ.ಗಿರಿಧರರಾವ್, ಉಪಾಧ್ಯಕ್ಷ ಸುಂದರ್ ಸಿಂಗ್, ಖಜಾಂಚಿ ನಾಗೇಂದ್ರ ಕುಮಟಾ ಇದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>