ಬಹುತೇಕ ಔಷಧಗಳಿಗೆ ಚೀಟಿ ಬರೆದುಕೊಡುತ್ತಾರೆ.ಸಿರಿಂಜ್, ಬ್ಯಾಂಡೇಜ್ ಸೇರಿದಂತೆ ಸಣ್ಣಪುಟ್ಟ ಸಾಮಗ್ರಿಗಳನ್ನೂ ಖಾಸಗಿ ಔಷಧಾಲಯಗಳಿಂದಖರೀದಿಸಿ ತರುವಂತೆ ರೋಗಿಗಳಿಗೆ ಸೂಚಿಸಲಾಗುತ್ತಿದೆ. ಬಹುತೇಕ ಹೊರರೋಗಿಗಳನ್ನೂ ಖಾಸಗಿ ಆಸ್ಪತ್ರೆಗಳಿಗೆ ಕಳುಹಿಸಲಾಗುತ್ತಿದೆ. ₨ 10 ಕೋಟಿ ವೆಚ್ಚದಲ್ಲಿ ಸುಸಜ್ಜಿತ ಸ್ಕ್ಯಾನಿಂಗ್ ಘಟಕವಿದ್ದರೂ ಬಳಕೆ ಮಾಡುತ್ತಿಲ್ಲ. ಕರ್ತವ್ಯದ ಅವಧಿಯಲ್ಲಿ ವೈದ್ಯರು, ಸಿಬ್ಬಂದಿ ಸಿಗುವುದಿಲ್ಲ. ಎಲ್ಲಾಏಳುರೇಡಿಯಾಲಜಿಸ್ಟ್ ಹುದ್ದೆಗಳು ಖಾಲಿಇವೆ. ಯಾವುದೇ ವಾರ್ಡ್ನಲ್ಲಿ ವೈದ್ಯರು ಇಲ್ಲ. ಆಸ್ಪತ್ರೆಯಲ್ಲಿ ಪರ್ಯಾಯ ಔಷಧಗಳು ಲಭ್ಯವಿದ್ದರೂನೀಡುತ್ತಿಲ್ಲಎಂದು ಶಾಸಕರಾದ ಆರಗ ಜ್ಞಾನೇಂದ್ರ, ಕೆ.ಬಿ. ಅಶೋಕ ನಾಯ್ಕ, ವಿಧಾನ ಪರಿಷತ್ ಸದಸ್ಯ ಆರ್. ಪ್ರಸನ್ನಕುಮಾರ್, ಉಪ ಮೇಯರ್ ಚನ್ನಬಸಪ್ಪ ಸಚಿವರ ಗಮನಕ್ಕೆ ತಂದರು.