<p><strong>ಶಿಕಾರಿಪುರ:</strong> ಮನಸ್ಸಿನ ಕಲ್ಮಶ ಹೋಗಲಾಡಿಸಿ ಶಾಂತತೆ ಮೂಡಿಸುವ ಧ್ಯಾನ ಜೀವನದ ಯಶಸ್ಸಿಗೂ ಕಾರಣವಾಗುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು.</p>.<p>ಪಟ್ಟಣದ ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದಲ್ಲಿ ಭಾನುವಾರ ನಡೆದ ವಿಶ್ವ ಧ್ಯಾನ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.</p>.<p>ಆಧುನಿಕ ಕಾಲಘಟ್ಟದಲ್ಲಿ ಎಲ್ಲರೂ ಒತ್ತಡ ಜೀವನ ಸಾಗಿಸುತ್ತಿರುವುದು ಕಳವಳಕಾರಿ. ಧ್ಯಾನ ಒತ್ತಡ ದೂರವಾಗಿಸುತ್ತದೆ. ಅಲ್ಲದೆ ಮನಸ್ಸಿನಲ್ಲಿರುವ ಕಲ್ಮಶ, ಕೆಟ್ಟತನ ಹೋಗಲಾಡಿಸಿ ಎಲ್ಲರನ್ನೂ ಪ್ರೀತಿಯಿಂದ ನೋಡುವುದಕ್ಕೂ ಕಾರಣವಾಗುತ್ತದೆ. ಹಾಗಾಗಿ ಎಲ್ಲರೂ ಪ್ರತಿದಿನ ಧ್ಯಾನ, ಯೋಗಕ್ಕೆ ಸಮಯ ಮೀಸಲಿಡಬೇಕು ಎಂದರು.</p>.<p>ಧ್ಯಾನ ಓಡುವ ಮನಸ್ಸಿಗೆ ಕಡಿವಾಣ ಹಾಕುತ್ತದೆ. ಎಲ್ಲರಲ್ಲೂ ಪ್ರೀತಿ ವಿಶ್ವಾಸ ಮೂಡಿಸುವ ಕೆಲಸದ ಜೊತೆ ನಮ್ಮನ್ನು ನಾವು ಗೆಲ್ಲುವುದಕ್ಕೆ ಕಾರಣವಾಗುತ್ತದೆ ಎಂದು ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದ ಸಂಚಾಲಕಿ ಸ್ನೇಕಾ ಅಕ್ಕ ಹೇಳಿದರು.</p>.<p>ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯ ರಾಣೇಬೆನ್ನೂರಿನ ಮಾಲತಿ ಅಕ್ಕ, ಬ್ಯಾಡಗಿಯ ಸುರೇಖಕ್ಕ, ಹಲಗೇರಿಯ ಕಸ್ತೂರಿಯಕ್ಕ ಮಾತನಾಡಿದರು.</p>.<p>ವೀರಶೈವ ಮಹಾಸಭಾ ಅಧ್ಯಕ್ಷ ಸುಧೀರ್, ರೋಟರಿ ಕ್ಲಬ್ನ ರಘು, ಜೇಸಿಸ್ನ ಶಾಂತರಾಮ್, ಪರೋಪಕಾಂನ ಮಧುಕೇಶವ, ಮುಖಂಡರಾದ ಕೆ.ಎಸ್.ಗುರುಮೂರ್ತಿ, ನಿವೇದಿತಾ ರಾಜು, ಕಾಂಚನಾ ಕುಮಾರ್, ಶಿವಕುಮಾರ್ ಇದ್ದರು.<br /><br /></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿಕಾರಿಪುರ:</strong> ಮನಸ್ಸಿನ ಕಲ್ಮಶ ಹೋಗಲಾಡಿಸಿ ಶಾಂತತೆ ಮೂಡಿಸುವ ಧ್ಯಾನ ಜೀವನದ ಯಶಸ್ಸಿಗೂ ಕಾರಣವಾಗುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು.</p>.<p>ಪಟ್ಟಣದ ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದಲ್ಲಿ ಭಾನುವಾರ ನಡೆದ ವಿಶ್ವ ಧ್ಯಾನ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.</p>.<p>ಆಧುನಿಕ ಕಾಲಘಟ್ಟದಲ್ಲಿ ಎಲ್ಲರೂ ಒತ್ತಡ ಜೀವನ ಸಾಗಿಸುತ್ತಿರುವುದು ಕಳವಳಕಾರಿ. ಧ್ಯಾನ ಒತ್ತಡ ದೂರವಾಗಿಸುತ್ತದೆ. ಅಲ್ಲದೆ ಮನಸ್ಸಿನಲ್ಲಿರುವ ಕಲ್ಮಶ, ಕೆಟ್ಟತನ ಹೋಗಲಾಡಿಸಿ ಎಲ್ಲರನ್ನೂ ಪ್ರೀತಿಯಿಂದ ನೋಡುವುದಕ್ಕೂ ಕಾರಣವಾಗುತ್ತದೆ. ಹಾಗಾಗಿ ಎಲ್ಲರೂ ಪ್ರತಿದಿನ ಧ್ಯಾನ, ಯೋಗಕ್ಕೆ ಸಮಯ ಮೀಸಲಿಡಬೇಕು ಎಂದರು.</p>.<p>ಧ್ಯಾನ ಓಡುವ ಮನಸ್ಸಿಗೆ ಕಡಿವಾಣ ಹಾಕುತ್ತದೆ. ಎಲ್ಲರಲ್ಲೂ ಪ್ರೀತಿ ವಿಶ್ವಾಸ ಮೂಡಿಸುವ ಕೆಲಸದ ಜೊತೆ ನಮ್ಮನ್ನು ನಾವು ಗೆಲ್ಲುವುದಕ್ಕೆ ಕಾರಣವಾಗುತ್ತದೆ ಎಂದು ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದ ಸಂಚಾಲಕಿ ಸ್ನೇಕಾ ಅಕ್ಕ ಹೇಳಿದರು.</p>.<p>ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯ ರಾಣೇಬೆನ್ನೂರಿನ ಮಾಲತಿ ಅಕ್ಕ, ಬ್ಯಾಡಗಿಯ ಸುರೇಖಕ್ಕ, ಹಲಗೇರಿಯ ಕಸ್ತೂರಿಯಕ್ಕ ಮಾತನಾಡಿದರು.</p>.<p>ವೀರಶೈವ ಮಹಾಸಭಾ ಅಧ್ಯಕ್ಷ ಸುಧೀರ್, ರೋಟರಿ ಕ್ಲಬ್ನ ರಘು, ಜೇಸಿಸ್ನ ಶಾಂತರಾಮ್, ಪರೋಪಕಾಂನ ಮಧುಕೇಶವ, ಮುಖಂಡರಾದ ಕೆ.ಎಸ್.ಗುರುಮೂರ್ತಿ, ನಿವೇದಿತಾ ರಾಜು, ಕಾಂಚನಾ ಕುಮಾರ್, ಶಿವಕುಮಾರ್ ಇದ್ದರು.<br /><br /></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>