<p><strong>ಶಿವಮೊಗ್ಗ:</strong> ಹಬ್ಬದ ವೇಳೆ ಪೊಲೀಸರ ಸಲಹೆ ಸೂಚನೆಗಳ ಉಲ್ಲಂಘನೆ ಮಾಡಿ ಸಮಸ್ಯೆಗಳ ಸೃಷ್ಟಿಸಿದಲ್ಲಿ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಸ್ಪಿ ಜಿ.ಕೆ.ಮಿಥುನ್ಕುಮಾರ್ ಹೇಳಿದರು.</p>.<p>ಗೌರಿ ಗಣೇಶ ಹಾಗೂ ಈದ್ ಮಿಲಾದ್ ಹಬ್ಬಗಳ ಆಚರಣೆ ಹಿನ್ನೆಲೆಯಲ್ಲಿ ಬುಧವಾರ ರಾತ್ರಿ ಶಿವಮೊಗ್ಗದ ರಾಗಿಗುಡ್ಡದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಗಣೇಶ ಪ್ರತಿಷ್ಠಾಪನಾ ಸಮಿತಿ ಮತ್ತು ಈದ್ ಮಿಲಾದ್ ಸಮಿತಿ ಸದಸ್ಯರ ಸಭೆ ನಡೆಸಿ ಸಲಹೆ ಸೂಚನೆಗಳ ನೀಡಿದರು.</p>.<p>ಯಾವುದೇ ಪ್ರದೇಶದಲ್ಲಿ ಅಹಿತಕರ ಘಟನೆಗಳು ಜರುಗಿದಾಗ, ಹೊರಗಿನವರು ಆ ಪ್ರದೇಶದ ಹೆಸರು ಕೇಳಿದರೆ ತಪ್ಪಾಗಿ ಗ್ರಹಿಸುತ್ತಾರೆ. ಇದರಿಂದ ಆ ಪ್ರದೇಶದ ಸಾಮಾಜಿಕ ಹಾಗೂ ಆರ್ಥಿಕ ವ್ಯವಸ್ಥೆಯ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತದೆ. ಯಾರದ್ದೋ ಮಾತು ಕೇಳಿ, ಸತ್ಯಾಸತ್ಯತೆ ತಿಳಿಯದೇ ಆ ಕ್ಷಣದಲ್ಲಿ ಅತಿರೇಕದ ವರ್ತನೆ ತೋರುವುದರಿಂದ ಆ ಪ್ರದೇಶದ ಮೇಲೆ ಬೀರುವ ವ್ಯತಿರಿಕ್ತ ಪರಿಣಾಮಕ್ಕೆ ಕಾರಣರಾಗುತ್ತೀರಿ. ಅದು ಸರಿಯಲ್ಲ ಎಂದು ಕಿವಿಮಾತು ಹೇಳಿದರು.</p>.<p>ಯಾವುದೇ ಸಮಸ್ಯೆ / ಭಿನ್ನಾಭಿಪ್ರಾಯಗಳಿದ್ದಲ್ಲಿ ಹಬ್ಬ ಹಾಗೂ ಮೆರವಣಿಗೆ ಸಂದರ್ಭಗಳಲ್ಲಿ ಅದನ್ನು ವ್ಯಕ್ತಪಡಿಸದೇ, ಮುಂಚಿತವಾಗಿಯೇ ಗುರು ಹಿರಿಯರು ಮತ್ತು ಪೊಲೀಸ್ ಇಲಾಖೆಯ ಗಮನಕ್ಕೆ ತಂದು ಮೂಲದಲ್ಲಿಯೇ ಪರಿಹರಿಸಿಕೊಳ್ಳಿ ಎಂದು ಸಲಹೆ ನೀಡಿದರು.</p>.<p>ಎರಡೂ ಹಬ್ಬಗಳನ್ನು ಸೌಹಾರ್ದತೆಯಿಂದ ಆಚರಣೆ ಮಾಡುವ ಮೂಲಕ ಇತರರಿಗೂ ಮಾದರಿಯಾಗಿ ಎಂದರು.<br> <br>ಈ ಸಂದರ್ಭದಲ್ಲಿ ಎಎಸ್ಪಿ ಅನಿಲ್ ಕುಮಾರ್ ಭೂಮರಡ್ಡಿ, ಡಿವೈಎಸ್ಪಿ ಎಂ. ಸುರೇಶ್, ಗ್ರಾಮಾಂತರ ಠಾಣೆ ಇನ್ಸ್ಪೆಕ್ಟರ್ ಎಂ. ಸತ್ಯನಾರಾಯಣ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿವಮೊಗ್ಗ:</strong> ಹಬ್ಬದ ವೇಳೆ ಪೊಲೀಸರ ಸಲಹೆ ಸೂಚನೆಗಳ ಉಲ್ಲಂಘನೆ ಮಾಡಿ ಸಮಸ್ಯೆಗಳ ಸೃಷ್ಟಿಸಿದಲ್ಲಿ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಸ್ಪಿ ಜಿ.ಕೆ.ಮಿಥುನ್ಕುಮಾರ್ ಹೇಳಿದರು.</p>.<p>ಗೌರಿ ಗಣೇಶ ಹಾಗೂ ಈದ್ ಮಿಲಾದ್ ಹಬ್ಬಗಳ ಆಚರಣೆ ಹಿನ್ನೆಲೆಯಲ್ಲಿ ಬುಧವಾರ ರಾತ್ರಿ ಶಿವಮೊಗ್ಗದ ರಾಗಿಗುಡ್ಡದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಗಣೇಶ ಪ್ರತಿಷ್ಠಾಪನಾ ಸಮಿತಿ ಮತ್ತು ಈದ್ ಮಿಲಾದ್ ಸಮಿತಿ ಸದಸ್ಯರ ಸಭೆ ನಡೆಸಿ ಸಲಹೆ ಸೂಚನೆಗಳ ನೀಡಿದರು.</p>.<p>ಯಾವುದೇ ಪ್ರದೇಶದಲ್ಲಿ ಅಹಿತಕರ ಘಟನೆಗಳು ಜರುಗಿದಾಗ, ಹೊರಗಿನವರು ಆ ಪ್ರದೇಶದ ಹೆಸರು ಕೇಳಿದರೆ ತಪ್ಪಾಗಿ ಗ್ರಹಿಸುತ್ತಾರೆ. ಇದರಿಂದ ಆ ಪ್ರದೇಶದ ಸಾಮಾಜಿಕ ಹಾಗೂ ಆರ್ಥಿಕ ವ್ಯವಸ್ಥೆಯ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತದೆ. ಯಾರದ್ದೋ ಮಾತು ಕೇಳಿ, ಸತ್ಯಾಸತ್ಯತೆ ತಿಳಿಯದೇ ಆ ಕ್ಷಣದಲ್ಲಿ ಅತಿರೇಕದ ವರ್ತನೆ ತೋರುವುದರಿಂದ ಆ ಪ್ರದೇಶದ ಮೇಲೆ ಬೀರುವ ವ್ಯತಿರಿಕ್ತ ಪರಿಣಾಮಕ್ಕೆ ಕಾರಣರಾಗುತ್ತೀರಿ. ಅದು ಸರಿಯಲ್ಲ ಎಂದು ಕಿವಿಮಾತು ಹೇಳಿದರು.</p>.<p>ಯಾವುದೇ ಸಮಸ್ಯೆ / ಭಿನ್ನಾಭಿಪ್ರಾಯಗಳಿದ್ದಲ್ಲಿ ಹಬ್ಬ ಹಾಗೂ ಮೆರವಣಿಗೆ ಸಂದರ್ಭಗಳಲ್ಲಿ ಅದನ್ನು ವ್ಯಕ್ತಪಡಿಸದೇ, ಮುಂಚಿತವಾಗಿಯೇ ಗುರು ಹಿರಿಯರು ಮತ್ತು ಪೊಲೀಸ್ ಇಲಾಖೆಯ ಗಮನಕ್ಕೆ ತಂದು ಮೂಲದಲ್ಲಿಯೇ ಪರಿಹರಿಸಿಕೊಳ್ಳಿ ಎಂದು ಸಲಹೆ ನೀಡಿದರು.</p>.<p>ಎರಡೂ ಹಬ್ಬಗಳನ್ನು ಸೌಹಾರ್ದತೆಯಿಂದ ಆಚರಣೆ ಮಾಡುವ ಮೂಲಕ ಇತರರಿಗೂ ಮಾದರಿಯಾಗಿ ಎಂದರು.<br> <br>ಈ ಸಂದರ್ಭದಲ್ಲಿ ಎಎಸ್ಪಿ ಅನಿಲ್ ಕುಮಾರ್ ಭೂಮರಡ್ಡಿ, ಡಿವೈಎಸ್ಪಿ ಎಂ. ಸುರೇಶ್, ಗ್ರಾಮಾಂತರ ಠಾಣೆ ಇನ್ಸ್ಪೆಕ್ಟರ್ ಎಂ. ಸತ್ಯನಾರಾಯಣ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>