ಶಿವಮೊಗ್ಗ: ಮೆಗ್ಗಾನ್ ಆಸ್ಪತ್ರೆಯ ಜಾಗ, ಆಸ್ತಿ ಸೇರಿದಂತೆ ಒತ್ತುವರಿ ಮಾಡಿರುವ ಎಲ್ಲನಿರ್ಮಾಣಗಳನ್ನೂ ತೆರವುಗೊಳಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಸೂಚಿಸಿದರು.
ಶಿವಮೊಗ್ಗ ವೈದ್ಯಕೀಯ ಕಾಲೇಜು ಸಭಾಂಗಣದಲ್ಲಿ ಶುಕ್ರವಾರನಡೆದಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು.
ಒತ್ತುವರಿ ತೆರವಿಗೆ ಕಠಿಣ ಕ್ರಮ ಕೈಗೊಳ್ಳಬೇಕು. ಆಸ್ತಿ ಸಂರಕ್ಷಿಸಬೇಕು. ಹೊರಗುತ್ತಿಗೆ ಆಧಾರದಲ್ಲಿ ಸಿಬ್ಬಂದಿಗಳ ನೇಮಕಾತಿ ಪ್ರಕ್ರಿಯೆತ್ವರಿತವಾಗಿ ಪೂರ್ಣಗೊಳಿಸಬೇಕು ಎಂದು ತಾಕೀತು ಮಾಡಿದರು.
ಮೆಗ್ಗಾನ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಕಟ್ಟಡದಲ್ಲಿಮೇ 27ರಂದು ಹೃದಯ ಕಾಯಿಲೆಗಳ ತಪಾಸಣೆಗೆ ಹೊರ ರೋಗಿ ವಿಭಾಗ ಆರಂಭಿಸಲಾಗುತ್ತಿದೆ. ಒಪಿಡಿಯಲ್ಲಿ ಪ್ರತಿ ದಿನ 80ರಿಂದ 100 ಮಂದಿ ಹೃದಯ ಕಾಯಿಲೆ ಇರುವ ರೋಗಿಗಳಿಗೆ ಸೂಕ್ತ ತಪಾಸಣೆ, ಸಲಹೆ ಮತ್ತು ಚಿಕಿತ್ಸೆ ನೀಡಲು ಸಾಧ್ಯವಾಗಲಿದೆ. ಹೃದ್ರೋಗ ತಜ್ಞರಾದ ಡಾ.ಪರಮೇಶ್ವರ,ಡಾ.ಮಹೇಶಮೂರ್ತಿಅವರು ಸೇವೆ ಸಲ್ಲಿಸುತ್ತಾರೆ ಎಂದರು.
ಕಾರ್ಡಿಯಾಕ್ ಕ್ಯಾಥ್ಲ್ಯಾಬ್ ಆರಂಭಿಸಲು ಈಗಾಗಲೇ ಟೆಂಡರ್ ಅಂತಿಮಗೊಳಿಸಲಾಗಿದೆ. ತಕ್ಷಣ ಸದರಿ ಕಂಪನಿಗೆ ಕಾರ್ಯಾದೇಶ ನೀಡಬೇಕು.ಹೃದಯಕ್ಕೆ ಸಂಬಂಧಿಸಿದ ಹೆಚ್ಚಿನ ಚಿಕಿತ್ಸೆಗಳಾದ ಆಂಜಿಯೋಗ್ರಾಮ್, ಆಂಜಿಯೋಪ್ಲಾಸ್ಟಿ, ಹೃದಯನಾಳಕ್ಕೆ ಸ್ಟಂಟ್ ಅಳವಡಿಕೆ, ಹೃದಯ ಕವಾಟಗಳ ಚಿಕಿತ್ಸೆ ಮತ್ತು ಹುಟ್ಟಿದಾಗಿನಿಂದ ಬಂದಂತಹ ಹೃದಯನ್ಯೂನತೆಗಳಿಗೆಚಿಕಿತ್ಸೆ ದೊರೆಯಲಿದೆ ಎಂದುಮಾಹಿತಿ ನೀಡಿದರು.
ಇದೇ ರೀತಿ ನರರೋಗ ವಿಭಾಗದಲ್ಲಿ ನರರೋಗ ತಜ್ಞರಾದ ಡಾ.ಕುಮಾರ್ ಅವರು ಸ್ಟ್ರೋಕ್,ನ್ಯೂರೋಪಥಿಗೆ ಸೂಕ್ತ ತಪಾಸಣೆ, ಸಲಹೆಹಾಗೂ ಚಿಕಿತ್ಸೆ ನೀಡುವರು. ನರರೋಗಿಗಳಿಗೆ ಬೇಕಾದ ಇಎನ್ಎಂಜಿ, ಸಿಟಿ ಸ್ಕ್ಯಾನ್, ಎಂರ್ಐ ಸ್ಕ್ಯಾನ್ ಮತ್ತು ರಕ್ತ ಪರೀಕ್ಷೆಗಳು ಇಲ್ಲಿಯೇನಡೆಸಲಾಗುವುದುಎಂದರು.
ಸಂಸದ ಬಿ.ವೈ.ರಾಘವೇಂದ್ರ, ಶಾಸಕರಾದ ಹರತಾಳು ಹಾಲಪ್ಪ, ಅಶೋಕ ನಾಯ್ಕ, ವಿಧಾನ ಪರಿಷತ್ ಸದಸ್ಯ ಆರ್.ಪ್ರಸನ್ನ ಕುಮಾರ್, ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್,ವೈದ್ಯಕೀಯ ಕಾಲೇಜುನಿರ್ದೇಶಕ ಡಾ.ಗುರುಪಾದಪ್ಪ, ಮೆಗ್ಗಾನ್ ಆಡಳಿತ ಸಮಿತಿ ಸದಸ್ಯರಾದ ದಿನಾಕರ ಶೆಟ್ಟಿ, ಡಾ.ಗೌತಮ್, ಡಾ.ವಾಣಿ ಕೋರಿ ಉಪಸ್ಥಿತರಿದ್ದರು.