<p><strong>ಕೋಣಂದೂರು: </strong>ಇಲ್ಲಿನ ಗ್ರಾಮ ಪಂಚಾಯಿತಿಯಲ್ಲಿ ಗುರುವಾರ ನಡೆದ ಗ್ರಾಮಸಭೆಯಲ್ಲೇ ಅಭಿವೃದ್ಧಿ ವಿಚಾರಕ್ಕೆ ಸದಸ್ಯರಿಬ್ಬರ ಮಾತಿನ ಚಕಮಕಿ ತಾರಕಕ್ಕೆ ಏರಿ, ಪರಸ್ಪರ ಹೊಡೆದಾಡಿಕೊಂಡಿದ್ದಾರೆ.</p>.<p>ಇಲ್ಲಿನ ದೊಡ್ಡಕೆರೆಯ ಅಭಿವೃದ್ಧಿಗೆ ಜಲ ಸಂಪನ್ಮೂಲ ಇಲಾಖೆಯಿಂದ ಬಿಡುಗಡೆಯಾದ ₹ 2 ಕೋಟಿ ವಿಚಾರವಾಗಿ ಗ್ರಾಮ ಸಭೆಯ ಆರಂಭಕ್ಕೂ ಮುನ್ನ ಗ್ರಾಮ ಪಂಚಾಯಿತಿ ಸದಸ್ಯರಾದ ಎ.ಸಿ. ಪೂರ್ಣೇಶ್ ಮತ್ತು ಕೆ.ಎನ್. ಸುರೇಶ್ ನಡುವೆ ಮಾತುಕತೆ ನಡೆಯುತ್ತಿತ್ತು.</p>.<p>ಈ ವೇಳೆ ಚರ್ಚೆ ತಾರಕಕ್ಕೆ ಏರಿ ಇಬ್ಬರೂ ವೈಯಕ್ತಿಕ ಮಟ್ಟಕ್ಕೆ ಇಳಿದು ಜಗಳ ಆರಂಭಿಸಿ ಪರಸ್ಪರ ಹೊಡೆದಾಡಿಕೊಂಡರು. ‘ಇಬ್ಬರೂ ತಳ್ಳಾಡಿಕೊಂಡು ಪೂರ್ಣೇಶ್ ಅವರು ಸುರೇಶ್ ಅವರ ಕೆನ್ನೆಗೆ ಹೊಡೆದರು. ಆಗ ಸುರೇಶ್ ಮೂಗಿನಿಂದ ರಕ್ತಸ್ರಾವವಾಗಿದೆ’ ಎಂದು ದೂರು ದಾಖಲಾಗಿದೆ.</p>.<p>ತೀರ್ಥಹಳ್ಳಿಯ ಜೆ.ಸಿ. ಆಸ್ಪತ್ರೆಯಲ್ಲಿ ಸುರೇಶ್ ಚಿಕಿತ್ಸೆ ಪಡೆಯುತ್ತಿದ್ದಾರೆ. ಪೂರ್ಣೇಶ್ ಅವರಿಗೂ ಗಾಯಗಳಾಗಿದ್ದು, ಕೋಣಂದೂರು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ತೀರ್ಥಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಣಂದೂರು: </strong>ಇಲ್ಲಿನ ಗ್ರಾಮ ಪಂಚಾಯಿತಿಯಲ್ಲಿ ಗುರುವಾರ ನಡೆದ ಗ್ರಾಮಸಭೆಯಲ್ಲೇ ಅಭಿವೃದ್ಧಿ ವಿಚಾರಕ್ಕೆ ಸದಸ್ಯರಿಬ್ಬರ ಮಾತಿನ ಚಕಮಕಿ ತಾರಕಕ್ಕೆ ಏರಿ, ಪರಸ್ಪರ ಹೊಡೆದಾಡಿಕೊಂಡಿದ್ದಾರೆ.</p>.<p>ಇಲ್ಲಿನ ದೊಡ್ಡಕೆರೆಯ ಅಭಿವೃದ್ಧಿಗೆ ಜಲ ಸಂಪನ್ಮೂಲ ಇಲಾಖೆಯಿಂದ ಬಿಡುಗಡೆಯಾದ ₹ 2 ಕೋಟಿ ವಿಚಾರವಾಗಿ ಗ್ರಾಮ ಸಭೆಯ ಆರಂಭಕ್ಕೂ ಮುನ್ನ ಗ್ರಾಮ ಪಂಚಾಯಿತಿ ಸದಸ್ಯರಾದ ಎ.ಸಿ. ಪೂರ್ಣೇಶ್ ಮತ್ತು ಕೆ.ಎನ್. ಸುರೇಶ್ ನಡುವೆ ಮಾತುಕತೆ ನಡೆಯುತ್ತಿತ್ತು.</p>.<p>ಈ ವೇಳೆ ಚರ್ಚೆ ತಾರಕಕ್ಕೆ ಏರಿ ಇಬ್ಬರೂ ವೈಯಕ್ತಿಕ ಮಟ್ಟಕ್ಕೆ ಇಳಿದು ಜಗಳ ಆರಂಭಿಸಿ ಪರಸ್ಪರ ಹೊಡೆದಾಡಿಕೊಂಡರು. ‘ಇಬ್ಬರೂ ತಳ್ಳಾಡಿಕೊಂಡು ಪೂರ್ಣೇಶ್ ಅವರು ಸುರೇಶ್ ಅವರ ಕೆನ್ನೆಗೆ ಹೊಡೆದರು. ಆಗ ಸುರೇಶ್ ಮೂಗಿನಿಂದ ರಕ್ತಸ್ರಾವವಾಗಿದೆ’ ಎಂದು ದೂರು ದಾಖಲಾಗಿದೆ.</p>.<p>ತೀರ್ಥಹಳ್ಳಿಯ ಜೆ.ಸಿ. ಆಸ್ಪತ್ರೆಯಲ್ಲಿ ಸುರೇಶ್ ಚಿಕಿತ್ಸೆ ಪಡೆಯುತ್ತಿದ್ದಾರೆ. ಪೂರ್ಣೇಶ್ ಅವರಿಗೂ ಗಾಯಗಳಾಗಿದ್ದು, ಕೋಣಂದೂರು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ತೀರ್ಥಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>