ಹೊಸನಗರ ಹಾಗೂ ಸಾಗರ ತಾಲ್ಲೂಕಿನ ಎರಡು ಕಡೆ ಸೂಕ್ಷ್ಮ ವಲಯದಲ್ಲಿ ಗಣಿಗಾರಿಕೆ ನಡೆಯುತ್ತಿದೆ. ಕೆಲವು ಕಡೆ ಅನುಮತಿ ಪಡೆದು ಗಣಿಗಾರಿಕೆ ಮಾಡುತ್ತಿದ್ದು, ಅದರಿಂದಲೂ ಸೂಕ್ಷ್ಮ ವಲಯಕ್ಕೆ ತೊಂದರೆ ಆಗುತ್ತಿದೆ. ಈ ಬಗ್ಗೆ ಅಧ್ಯಯನ ನಡೆಸಿ ವರದಿ ನೀಡುವಂತೆ ಗಣಿ ಮತ್ತು ಭೂ ವಿಜ್ಞಾನ ಹಾಗೂ ಅರಣ್ಯಾಧಿಕಾರಿ ಗಳಿಗೆ ಸೂಚನೆ ನೀಡಿರುವೆ ಎಂದು ಸೋಮವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಹೇಳಿದರು.