‘ನಾನೊಬ್ಬ ಬಿಜೆಪಿ ಸಾಮಾನ್ಯ ಕಾರ್ಯಕರ್ತ. ಹಿಂದೂ ಸಮಾಜ, ದೇಶದ ಅಭಿವೃದ್ಧಿಯ ಚಿಂತಕ. ಮೊದಲ ಬಾರಿ ಬಿಜೆಪಿ ರಾಜ್ಯದಲ್ಲಿ ಅಧಿಕಾರಕ್ಕೆ ಬಂದಾಗ ಸಚಿವ ಸ್ಥಾನ ಸಿಕ್ಕಿತ್ತು. ರಾಜೀನಾಮೆ ಕೇಳಿದ್ದರು. ಮರುಮಾತನಾಡದೇ ಕೊಟ್ಟು ಪಕ್ಷದ ಅಧ್ಯಕ್ಷ ಸ್ಥಾನ ಅಲಂಕರಿಸಿದ್ದೆ. ಕನಕಪುರದಲ್ಲಿ ದೇವೇಗೌಡರ ವಿರುದ್ಧ ಸ್ಪರ್ಧಿಸಲು ಕೇಂದ್ರ ರೇಷ್ಮೆ ಮಂಡಳಿ ಅಧ್ಯಕ್ಷ ಸ್ಥಾನಕ್ಕೂ ರಾಜೀನಾಮೆ ಸಲ್ಲಿಸಿದ್ದೆ. ಶಾಸಕ, ಮಂತ್ರಿ, ಮುಖ್ಯಮಂತ್ರಿ ಸ್ಥಾನ ಯಾವುದೇ ಇರಲಿ ಗೂಟ ಹೊಡೆದುಕೊಂಡಿರಲು ಆಗದು. ಆಡಳಿತದಲ್ಲೂ ಯುವಕರಿಗೆ ಆದ್ಯತೆ ನೀಡಲು ಹೈಕಮಾಂಡ್ ಇಚ್ಚಿಸಿದರೆ ಸ್ವಾಗತಿಸುವೆ. ಪಕ್ಷದ ನಿರ್ಧಾರಕ್ಕೆ ಬದ್ಧ’ ಎಂದು ನಿಷ್ಠೆ ಪ್ರದರ್ಶಿಸಿದರು.